ಕುಡುಕ ತಂದೆಯ ಅವಾಂತರ; ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ಬಾಲಕಿ
ಮೈಸೂರು, ಡಿಸೆಂಬರ್ 21: ಕುಡುಕ ತಂದೆಯ ಅವಾಂತರದಿಂದಾಗಿ ಅಪ್ರಾಪ್ತ ಬಾಲಕಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ನದಿಗೆ ಹಾರಿದ್ದ 8ನೇ ತರಗತಿ ವಿದ್ಯಾರ್ಥಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
15 ವರ್ಷದ ಅಪ್ರಾಪ್ತ ಬಾಲಕಿಗೆ ಮದುವೆ ಮಾಡಲು ಕುಡುಕ ಅಪ್ಪ ಹೊರಟಿದ್ದ. ಇದರಿಂದ ಬೇಸತ್ತ ಬಾಲಕಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ತಿ. ನರಸೀಪುರ ಪಟ್ಟಣದಲ್ಲಿ ನಡೆದಿದೆ.
ಪ್ರೇಮ ಪ್ರಕರಣ; ಯುವತಿ ಆತ್ಮಹತ್ಯೆ, ಪ್ರಿಯಕರನ ಕೊಂದ ಅಣ್ಣಂದಿರು!
ಚಾಮರಾಜನಗರ ಜಿಲ್ಲೆಯ ತಾವರೆಕಟ್ಟೆ ಮೋಳೆ ಗ್ರಾಮದ ಸಿದ್ದಶೆಟ್ಟಿ ಎಂಬುವರ ಪುತ್ರಿ ನದಿಗೆ ಹಾರಲು ಬಂದಿದ್ದಳು. ಗುಂಜಾನರಸಿಂಹ ಸ್ವಾಮಿ ದೇವಸ್ಥಾನದ ಬಳಿ ತೆಪ್ಪ ನಡೆಸುವವರು ಆಕೆಯ ಮನವೊಲಿಸಿ ಆತ್ಮಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ.
ಶಿವಮೊಗ್ಗ; ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ಈ ಕುರಿತು ಸಮಾಜ ಸೇವಕ ಮಾದೇಶ್ಗೆ ಅವರು ಮಾಹಿತಿ ನೀಡಿದ್ದರು. ಮಾದೇಶ್ ಬಾಲಕಿಯ ಮನವೊಲಿಸಿ ತಮ್ಮ ಮನೆಗೆ ಕರೆದೊಯ್ದು, ಉಪಚರಿಸಿ ಪೊಲೀಸರಿಗೆ ಮಾಹಿತಿ ನೀಡಿದರು, ಪೋಷಕರಿಗೂ ವಿಷಯ ತಿಳಿಸಿದರು.
ಅಪ್ರಾಪ್ತೆ ಮೇಲಿನ ಅತ್ಯಾಚಾರಿಗೆ 14 ವರ್ಷ ಜೈಲು ಶಿಕ್ಷೆ: ಶಿವಮೊಗ್ಗ ಕೋರ್ಟ್ ತೀರ್ಪು
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯ ಶಾಲೆಯನ್ನು ಬಿಡಿಸಿ ತಂದೆ ಮದುವೆ ಮಾಡಲು ಪ್ರಯತ್ನ ನಡೆಸಿದ್ದ. ಕುಡುಕನಾಗಿದ್ದ ತಂದೆಯ ತೀರ್ಮಾನದಿಂದ ಬೇಸತ್ತ ಯುವತಿ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಳು.
ಪೊಲೀಸರು ಬಾಲಕಿಯನ್ನು, ಪೋಷಕರನ್ನು ಠಾಣೆಗೆ ಕರೆಸಿಕೊಂಡು ಮದುವೆ ಪ್ರಸ್ತಾಪ ಕೈಬಿಟ್ಟು ವಿದ್ಯಾಭ್ಯಾಸ ಕೊಡಿಸುವಂತೆ ಅರಿವು ಮೂಡಿಸಿ, ಬಾಲಕಿಯನ್ನು ಕಳುಹಿಸಿಕೊಟ್ಟಿದ್ದಾರೆ.