ಸುಳ್ವಾಡಿ ವಿಷಪ್ರಸಾದ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಮೈಸೂರು, ಜನವರಿ 3: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿ 17 ಮಂದಿಯ ಸಾವಿಗೆ ಕಾರಣರಾಗಿ, ಅನೇಕರು ಅಸ್ವಸ್ಥರಾಗಿ ಆಸ್ಪತ್ರೆ ಸೇರುವಂತೆ ಮಾಡಿದ್ದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜ. 16ರವರೆಗೆ ವಿಸ್ತರಿಸಲಾಗಿದೆ.
ಇಂದು ನ್ಯಾಯಾಲಯಕ್ಕೆ ನಾಲ್ವರು ಆರೋಪಿಗಳು ಹಾಜರಾಗಿದ್ದು, ಅವರನ್ನು ಕಳೆದ ಹದಿನಾಲ್ಕು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.
ಮೈಸೂರು ಜೈಲಿನಿಂದ ಕೊಳ್ಳೇಗಾಲ ನ್ಯಾಯಾಲಯಕ್ಕೆ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ್, ದೊಡ್ಡಯ್ಯ ನನ್ನು ಹಾಜರುಪಡಿಸಲಾಗಿತ್ತು. ಇವರನ್ನು ಭದ್ರತಾ ದೃಷ್ಟಿಯಿಂದ ಮೈಸೂರು ಜೈಲಿನಲ್ಲಿರಿಸಲಾಗಿತ್ತು. ಮೈಸೂರು, ಚಾಮರಾಜನಗರ ಜಿಲ್ಲೆಗಳ ವಕೀಲರುಗಳು ಆರೋಪಿಗಳ ಪರ ವಕಾಲತ್ತು ವಹಿಸದಂತೆ ಬಾರ್ ಕೌನ್ಸಿಲ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವಕೀಲರು ಪ್ರಕರಣ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ ಆರೋಪಿಗಳ ಪರ ಯಾವ ವಕೀಲರೂ ವಕಾಲತ್ತು ವಹಿಸಿಲ್ಲ.

ಇನ್ನು, ಕಾವಿಧಾರಿಯಾಗಿದ್ದ ಸಾಲೂರು ಮಠದ ಕಿರಿಯಶ್ರೀ ಇಮ್ಮಡಿ ಮಹದೇವಸ್ವಾಮಿ ಕಾವಿ ಕಳಚಿಟ್ಟು ಬಿಳಿ ಬಟ್ಟೆಯಲ್ಲಿ ಕೋರ್ಟ್ಗೆ ಹಾಜರಾದರು. ಇದೇ ವೇಳೆ, ಕಟಕಟೆಗೆ ಹತ್ತಿದ ಸ್ವಾಮಿಯನ್ನು ವಕೀಲರೊಬ್ಬರು ಕೈ ಮುಗೀರಿ ಎಂದು ಜೋರು ಧ್ವನಿಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಸುಳ್ವಾಡಿಗೆ ಪುಷ್ಪಾ ಅಮರ್ ನಾಥ್ ಭೇಟಿ
ಇನ್ನು ಸುಳ್ವಾಡಿ ವಿಷ ಪ್ರಸಾದ ಸೇವಿಸಿದವರ ಮನೆಗಳಿಗೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪ ಅಮರ್ನಾಥ್ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ನನ್ನ ಕೈಲಾದಷ್ಟು ಧನ ಸಹಾಯ ಮಾಡುತ್ತೇನೆ.
ಘಟನೆಯಲ್ಲಿ ಮಹಿಳೆಯರೇ ಹೆಚ್ಚಾಗಿ ನೋವು ಅನುಭವಿಸುತ್ತಿದ್ದಾರೆ. ಪ್ರಸಾದಕ್ಕೆ ವಿಷ ಹಾಕುವುದು ಮಾನವ ಕುಲವೇ ತಲೆತಗ್ಗಿಸುವಂತಹದ್ದು. ಇದನ್ನು ಧರ್ಮಭೇದ, ಪಕ್ಷಭೇದ ಮರೆತು ಎಲ್ಲರೂ ಖಂಡಿಸುತ್ತಿದ್ದಾರೆ. ಇಂತಹ ಪಾಪಿಗಳಿಗೆ ಗುಂಡಿನ ರುಚಿ ತೋರಿಸಬೇಕು. ಆರೋಪಿಗಳ ಪರ ಯಾರೂ ಸಹ ವಕಾಲತ್ತು ವಹಿಸಬಾರದು ಎಂದು ಮನವಿ ಮಾಡಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications