ಸಚಿವ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಸಾಂವಿಧಾನಿಕ ಹುದ್ದೆ
ಮೈಸೂರು, ಜುಲೈ 07 : ಮರಳು ಗಣಿಗಾರಿಕೆಯ ಲಂಚ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಲೋಕೋಪಯೋಗಿ ಸಚಿವ ಎಚ್. ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಸಾಂವಿಧಾನಿಕ ಹುದ್ದೆ ರಾಜ್ಯ ಸರ್ಕಾರ ನೀಡಿ ಆದೇಶ ಹೊರಡಿಸಿದೆ.
ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರನ್ನಾಗಿ ಸುನೀಲ್ ಬೋಸ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯನ್ನು ಅನುಷ್ಠಾನಗೊಳಿಸಿ ಫಲಾನುಭವಿಗಳ ಆಯ್ಕೆ ಬಗ್ಗೆ ಹಾಗೂ ವಸತಿ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಗ್ರಾಮೀಣ ವಸತಿ ಯೋಜನೆಗೆ ಸಂಬಂಧಿಸಿದಂತೆ, ನರಸೀಪುರ ವಿಧಾನಸಭಾ ಕ್ಷೇತ್ರದ ಜಾಗೃತಿ ಸಮಿತಿಗೆ ಅಧ್ಯಕ್ಷರು ಹಾಗೂ ಅಧಿಕಾರೇತರ ಸದಸ್ಯರನ್ನು ನೇಮಿಸಿ ವಸತಿ ಇಲಾಖೆಯ ಅಧೀನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಸಿ.ಎಸ್. ಆದೇಶ ಹೊರಡಿಸಿದ್ದಾರೆ.
ಚುನಾಯಿತ ಜನಪ್ರತಿನಿಧಿಯಲ್ಲದಿದ್ದರೂ ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿಲ್ಲದಿದ್ದರೂ ಸರ್ಕಾರಿ ಅಧಿಕಾರಿಗಳ ಸಭೆ ನಡೆಸಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.
ಹಿನ್ನೆಲೆ ಕಳೆದ ಎರಡು ತಿಂಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಅವರನ್ನು ವರುಣಾ ವಿಧಾನಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ಇದೀಗ ಸಚಿವ ಡಾ.ಎಚ್.ಸಿ.ಮಹದೇವಪ್ಪರ ಪುತ್ರ ಸುನೀಲ್ ಬೋಸ್ ಅವರನ್ನು ನೇಮಕ ಮಾಡಲಾಗಿದೆ. ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸುನೀಲ್ ಬೋಸ್ ಪ್ರಬಲ ಆಕಾಂಕ್ಷಿಯಾಗಿದ್ದರು.
ಆದರೆ ಮರಳು ಗಣಿಗಾರಿಕೆ ಲಂಚ ಪ್ರಕರಣದಲ್ಲಿ ಸುನೀಲ್ ಹೆಸರು ಕೇಳಿ ಬಂದ ಕಾರಣ ಸ್ಪರ್ದೆಯಿಂದ ಹಿಂದೆ ಸರಿಯುವಂತೆ ಮಾಡಿತ್ತು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications