ಮೈಸೂರು- ಹುಬ್ಬಳ್ಳಿ ಎಕ್ಸ್ ಪ್ರೆಸ್ ನೂತನ ರೈಲ್ವೆಗೆ ಹಸಿರು ನಿಶಾನೆ
ಮೈಸೂರು, ಮೇ 23: ಮೈಸೂರು- ಹುಬ್ಬಳ್ಳಿ ಎಕ್ಸ್ ಪ್ರೆಸ್ ನೂತನ ರೈಲ್ವೆ ಸಂಚಾರಕ್ಕೆ ಮಂಗಳವಾರ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ದೆಹಲಿಯಿಂದ ವಿಡಿಯೋ ಲಿಂಕ್ ಮುಖಾಂತರ ಚಾಲನೆ ನೀಡಿದರು.
ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ, ಕೇಂದ್ರ ರೈಲ್ವೆ ನಿಲ್ದಾಣದಲ್ಲಿ 17325/ 17326 ರೈಲ್ವೆ ಗಾಡಿ ಸಂಖ್ಯೆಗೆ ಹಸಿರು ನಿಶಾನೆ ತೋರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. [ಹುಬ್ಬಳ್ಳಿ- ವಾರಣಾಸಿ ಮಧ್ಯೆ ಮೇ 28ರಿಂದ ರೈಲು ಸಂಚಾರ]

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚಾಮುಂಡಿ ಎಕ್ಸ್ ಪ್ರೆಸ್ ರೈಲಿನಲ್ಲಿ ಸಾಕಷ್ಟು ಪ್ರಯಾಣಿಕರು ಸಂಚಾರ ಮಾಡಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
MR @sureshpprabhu Flagged off Train No. 17325/17326 Hubballi-Mysuru-Hubbilli Daily Express and named it #VishwaManav Ex pic.twitter.com/F5FVyMWQMR
— Ministry of Railways (@RailMinIndia) May 23, 2017
ಈ ಸಮಸ್ಯೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೆ. ಅಲ್ಲದೇ ಈ ಮಾರ್ಗವಾಗಿ ನೂತನ ರೈಲು ಸಂಚಾರಕ್ಕೆ ಕೇಂದ್ರಕ್ಕೆ ಒತ್ತಡ ಹೇರಿದ್ದೆ.

ಮೂರು ವರ್ಷಗಳ ಸತತ ಪ್ರಯತ್ನದಿಂದ ಪ್ರಯಾಣಿಕರ ಕನಸು ನನಸಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಸಂತಸ ವ್ಯಕ್ತಪಡಿಸಿದರು.
ನೂತನ ರೈಲು ಇನ್ನೂ ಮುಂದೆ ಪ್ರತಿದಿನ ಬೆಳಿಗ್ಗೆ 6.15ಕ್ಕೆ ಮೈಸೂರಿನಿಂದ ಹೊರಟು 9.15 ಕ್ಕೆ ಬೆಂಗಳೂರು ತಲುಪುತ್ತದೆ. ಬಳಿಕ ಅಲ್ಲಿಂದ ನೇರವಾಗಿ ಸಂಜೆ 7.15 ಕ್ಕೆ ಹುಬ್ಬಳ್ಳಿಗೆ ತಲುಪಲಿದೆ.

ಈ ಹೊಸ ರೈಲಿಗೆ ವಿಶ್ವ ಮಾನವ ಎಕ್ಸ್ ಪ್ರೆಸ್ ಹೆಸರಿಡುವಂತೆ ಸಚಿವರಿಗೆ ಕೇಳಿದ್ದೇನೆ ಎಂಬುದಾಗಿ ತಿಳಿಸಿದರು.
-
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications