ಸುತ್ತೂರು ಮಠದಿಂದ ಸಿಎಂ ಪರಿಹಾರ ನಿಧಿಗೆ 50ಲಕ್ಷ ರೂ. ದೇಣಿಗೆ
ಮೈಸೂರು ಏಪ್ರಿಲ್ 01: ಕೊರೊನಾ ವಿರುದ್ಧ ಹೋರಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಂಡಿವೆ. ಜೊತೆಗೆ ಅನೇಕ ದಾನಿಗಳು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗಳ ಪರಿಹಾರ ನಿಧಿಗೂ ದೇಣಿಗೆ ಕೊಟ್ಟಿದ್ದಾರೆ.
ಸಿಎಂ ಮನವಿಗೆ ಸ್ಪಂದಿಸಿರುವ ಸಾವಿರಾರು ಕಂಪನಿಗಳು, ಸಂಸ್ಥೆಗಳು, ದೇವಾಲಯಗಳು ಮತ್ತು ಶ್ರೀಮಂತರು ಧನ ಸಹಾಯ ನೀಡುತ್ತಿದ್ದಾರೆ. ಮೈಸೂರಿನ ಸುತ್ತೂರು ಮಠ, ಜೆಎಸ್ಎಸ್ ವಿದ್ಯಾಪೀಠ ಹಾಗೂ ಜೆಎಸ್ಎಸ್ ಸಂಸ್ಥೆಯ ನೌಕರರು ಸ್ವಇಚ್ಛೆಯಿಂದ ಕೈಲಾದ ಹಣವನ್ನು ನೀಡಿದ್ದಾರೆ.
ಹೀಗೆ ನೀಡಿದ ಹಣವನ್ನು ಒಟ್ಟುಗೂಡಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ. ಚೆಕ್ ನ್ನು ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಇಂದು ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ನೀಡಿದರು.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ ಬೆಟಸೂರ್ ಮಠ್, ಕಾರ್ಯದರ್ಶಿ ಎಸ್.ಶಿವಕುಮಾರಸ್ವಾಮಿ, ಜೆಎಸ್ಎಸ್ ಎ.ಎಚ್.ಇ.ಆರ್ ನ ಕುಲಾಧಿಪತಿಗಳಾದ ಡಾ.ಬಿ.ಸುರೇಶ್, ಎಂ.ವಿ.ಪಿ ಯ ಹಣಕಾಸು ವಿಭಾಗದ ನಿರ್ದೇಶಕರಾದ ಎಸ್.ಪುಟ್ಟಸುಬ್ಬಪ್ಪ, ಕಾಲೇಜು ಶಿಕ್ಷಣ ವಿಭಾಗದ ಬಿ.ನಿರಂಜನಮೂರ್ತಿ ಮತ್ತಿತರರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications