ಜ.24ರಿಂದ 29 ರವರೆಗೆ 6 ದಿನಗಳ ಕಾಲ ಸುತ್ತೂರು ಜಾತ್ರೆ
ಮೈಸೂರುಮ ಜನವರಿ 20: ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಜ.24ರಿಂದ 29 ರವರೆಗೆ ಆರು ದಿನಗಳಕಾಲ ಸುತ್ತೂರು ಶ್ರೀಕ್ಷೇತ್ರದಲ್ಲಿ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಜಾತ್ರಾ ಸಮಿತಿಯ ಗೌರವಾಧ್ಯಕ್ಷ ಗಂಗಾಧರ ತಿಳಿಸಿದರು.
ಜಾತ್ರಾ ಮಹೋತ್ಸವದಲ್ಲಿ ರಥೋತ್ಸವ, ತೆಪ್ಪೋತ್ಸವ, ಕೊಂಡೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಖುದ್ದು ಸ್ವಾಮೀಜಿಗಳೇ ಮನೆಮನೆಗೆ ತೆರಳಿ ಮಹಾಪ್ರಸಾದಕ್ಕಾಗಿ 1000ಕ್ವಿಂಟಲ್ ಭತ್ತ ಮತ್ತು 10ಲಕ್ಷರೂ.ಸಂಗ್ರಹಿಸಿದ್ದಾರೆ ಎಂದರು.[ಜ.26ಕ್ಕೆ ಸುತ್ತೂರು ಜಾತ್ರೆಯಲ್ಲಿ ಗಾಳಿಪಟ ಸ್ಪರ್ಧೆ]

ರಾಜ್ಯಮಟ್ಟದ 25ನೇ ಭಜನಾ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಅಲ್ಲದೆ ಕೇರಳ, ತಮಿಳುನಾಡು ರಾಜ್ಯಗಳಿಂದಲೂ ತಂಡಗಳು ಭಾಗವಹಿಸಲಿವೆ ಭಾಗವಹಿಸುವ ತಂಡಗಳಿಗೆ 6 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದರು. ಪ್ರತಿ ವಿಭಾಗಕ್ಕೂ 5 ಬಹುಮಾನಗಳನ್ನು ನೀಡಲಾಗುವುದು. ಅಲ್ಲದೆ ಸೆಲ್ಫಿ ತೋಟ ಮಾಡಲಾಗಿದ್ದು, ಇಲ್ಲಿ ಭಕ್ತಾದಿಗಳು ತಮಗೆ ಇಷ್ಟವಾದ ಛಾಯಾಚಿತ್ರ ತೆಗೆದುಕೊಳ್ಳಬಹುದು.
ಕರಕುಶಲ, ಕೈಮಗ್ಗ, ಗೃಹೋಪಯೋಗಿ, ಪದಾರ್ಥಗಳ ಪ್ರದರ್ಶನ, ಹಾಗೂ ಮಾರಾಟದ ವ್ಯವಸ್ಥೆ ಇರುತ್ತದೆ. ವಿವಿಧ ಸರ್ಕಾರಿ ಇಲಾಖೆಗಳು, ಕೈಗಾರಿಕೆಗಳು ಹಾಗೂ ಮಹಿಳಾ ಉದ್ಯಮಿಗಳು, ವಸ್ತುಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.[ಫೆ. 5ರಿಂದ ಸುತ್ತೂರು ಜಾತ್ರೆ, ಹೋಗೋಣ ಬನ್ನಿ]
ಕೃಷಿ ಮೇಳದಲ್ಲಿ ರೈತರಿಗೆ ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದಂತೆ ತಂತ್ರಜ್ಞಾನದ ಕುರಿತು ಮಾಹಿತಿ ನೀಡಲು ಈ ಮೇಳವನ್ನು ಏರ್ಪಡಿಸಲಾಗುತ್ತಿದೆ. ಇದರಲ್ಲಿ ಸಮಗ್ರ ಬೆಳೆ ನಿರ್ವಹಣೆ, ಪಶುಸಂಗೋಪನೆಗಳ ಕುರಿತು ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಿ ಸಮಗ್ರ ಮಾಹಿತಿಯನ್ನು ನೀಡುವ ವ್ಯವಸ್ಥೆ ಇರುತ್ತದೆ. ಈ ವರ್ಷ ಬರಗಾಲದ ಹಿನ್ನೆಲೆಯಲ್ಲಿ ಸಿರಿಧಾನ್ಯಗಳು ಹಾಗೂ ದ್ವಿದಳ ಧಾನ್ಯಗಳ ಬೆಳೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.

ಚಿತ್ರಸಂತೆಯನ್ನೂ ಹಮ್ಮಿಕೊಳ್ಳಲಾಗಿದ್ದು, ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ಮಾಡಲಿಚ್ಛಿಸುವ ಕಲಾವಿದರುಗಳಿಗೆ ಜ. 27ರಿಂದ 29 ರವರೆಗೆ (3 ದಿವಸ) ಹಾಗೂ ಸ್ಥಳದಲ್ಲಿಯೇ ಚಿತ್ರ ರಚಿಸಿ ಮಾರಾಟ ಮಾಡಲು ಬಯಸುವ ಕಲಾವಿದರುಗಳಿಗೆ ಜ. 24 ರಿಂದ 29 ರವರೆಗೆ (6 ದಿವಸ) ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜ.24 ರಂದು ಗ್ರಾಮೀಣ ಕಲೆಗಳಾದ ಸೋಬಾನೆ ಪದ ಹಾಗೂ ರಂಗೋಲಿ ಸ್ಪರ್ಧೆ
ಜ. 25 ರಂದು ಪ್ರತಿವರ್ಷದಂತೆ ಈ ವರ್ಷವೂ ಸರಳ ಸಾಮೂಹಿಕ ವಿವಾಹ
ಜ.26 ರಂದು ಮಕ್ಕಳಿಗಾಗಿ ಗಾಳಿಪಟ ಸ್ಪರ್ಧೆ
ಜ.27 ರಂದು ವಿವಿಧ ದೇಸಿ ಆಟಗಳ ಸ್ಪರ್ಧೆ
ಜ 28 ರಂದು ಕುಸ್ತಿ ಪಂದ್ಯಾವಳಿ
ಜ. 29 ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಸ್ಥಳದಲ್ಲೇ ಚಿತ್ರ ರಚಿಸುವ ರಾಜ್ಯಮಟ್ಟದ ಸ್ಪರ್ಧೆ ನಡೆಯಲಿವೆ
ವಿವಿಧ ದೇಶಿ ಆಟಸ್ಪರ್ಧೆ , ದನಗಳ ಜಾತ್ರೆ, ನಾಟಕ ಪ್ರದರ್ಶನ ನಡೆಯಲಿದ್ದು, ಈ ಬಾರಿ ಸುತ್ತೂರು ಜಾತ್ರೆಗೆ 25ಲಕ್ಷಕ್ಕೂ ಹೆಚ್ಚು ಜನ ಬರುವ ಸಾಧ್ಯತೆಯಿದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications