ಘನ ತ್ಯಾಜ್ಯ ನಿರ್ವಹಣೆ, ದಕ್ಷಿಣ ಭಾರತದಲ್ಲೇ ಹುಣಸೂರಿಗೆ ಅಗ್ರಸ್ಥಾನ
ಬೆಂಗಳೂರು, ಜೂನ್ 24: ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ದಾಖಲೆ ಬರೆದಿದೆ. ಅತ್ಯುತ್ತಮ ಘನ ತ್ಯಾಜ್ಯ ನಿರ್ವಹಣೆಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಸ್ಥಾನವನ್ನು ಹುಣಸೂರು ತನ್ನದಾಗಿಸಿಕೊಂಡಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರ ಸಚಿವಾಲಯ ಪ್ರಕಟಿಸಿದ ಸ್ವಚ್ಛ್ ಸರ್ವೇಕ್ಷಣ್ 2018 ರ ಪಟ್ಟಿಯಲ್ಲಿ ಹುಣಸೂರು 476ಕ್ಕೆ 280 ಅಂಕಗಳನ್ನು ಪಡೆದು ದಕ್ಷಿಣ ಭಾರತಕ್ಕೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.
ಹುಣಸೂರು ನಗರ ಪ್ರತಿದಿನಕ್ಕೆ ಪ್ರತಿಯೊಬ್ಬರಿಂದ 390 ಗ್ರಾಂ ತ್ಯಾಜ್ಯ ಸಂಗ್ರಹಿಸುತ್ತದೆ. ಈ ಮೂಲಕ ಪ್ರತಿದಿನ ಸಂಗ್ರಹಿಸುವ ತ್ಯಾಜ್ಯದ ಪ್ರಮಾಣ 21.9 ಟನ್ ಆಗಿದೆ.

ಹುಣಸೂರು ನಗರ ಸಭೆ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಹಲವು ಅಭಿನಂದನಾರ್ಹ ಕೆಲಸಗಳನ್ನು ನಡೆಸುತ್ತಿದೆ. ಉದಾಹರಣೆ ಆ ದಿನ ಸಂಗ್ರಹಿಸಿದ ತ್ಯಾಜ್ಯವನ್ನು ಅಂದೇ ಸಂಸ್ಕರಣೆ ಮಾಡಲಾಗುತ್ತದೆ.
ಹುಣಸೂರಿನಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನ ಸಂಖ್ಯೆ ಇದ್ದು, ಪ್ರತಿ ಮನೆ ಬಾಗಿಲಿಗೆ ಹೋಗಿ ದಿನವೂ ಕಸವನ್ನು ಸಂಗ್ರಹಣೆ ಮಾಡಲಾಗುತ್ತದೆ. ಇದನ್ನು ಆಟೋ ರಿಕ್ಷಾಗಳಲ್ಲಿ ಸಾಗಿಸಲಾಗುತ್ತದೆ. ಪ್ರತೀ ರಿಕ್ಷಾದಲ್ಲೂ ಪಾಲಿಥೀನ್ ಬ್ಯಾಗ್ ಗಳಳಿರುತ್ತವೆ. ಘನ ತ್ಯಾಜ್ಯವನ್ನು ಈ ಬ್ಯಾಗ್ ಗಳಿಗೆ ಹಾಕಲಾಗುತ್ತದೆ.
ಇನ್ನು ತೆಲಂಗಾಣದ ಸಿದ್ದಿಪೇಟೆ ಎರಡನೇ ಸ್ಥಾನ ಮತ್ತು ಮೈಸೂರಿನ ಪಿರಿಯಾಪಟ್ಟಣ ಮೂರನೇ ಸ್ಥಾನವನ್ನು ಪಡೆದಿದೆ. ಇನ್ನು ಟಾಪ್ 20 ಸ್ಥಾನಗಳಲ್ಲಿ ಕರ್ನಾಟಕದ ಹುಣಸೂರು, ಪಿರಿಯಾಪಟ್ಟಣ ಮಾತ್ರವಲ್ಲದೇ ದಕ್ಷಿಣ ಕನ್ನಡದ ಪುತ್ತೂರು ಮತ್ತು ಮೂಲ್ಕಿಯೂ ಸ್ಥಾನ ಪಡೆದಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications