ಸ್ವಚ್ಛ ಸರ್ವೇಕ್ಷಣಾ-2020 ಪ್ರಶಸ್ತಿ ಪ್ರಕಟ: ಸಮಗ್ರ ವಿಭಾಗದಲ್ಲಿ ಮೈಸೂರಿಗೆ 5ನೇ ಸ್ಥಾನ
ಮೈಸೂರು, ಆಗಸ್ಟ್ 20: ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ-2020 ಪ್ರಶಸ್ತಿ ಪ್ರಕಟಗೊಂಡಿದ್ದು, ಸ್ವಚ್ಛತೆಯಲ್ಲಿ ಮತ್ತೊಮ್ಮೆ ಛಾಪು ಮೂಡಿಸಿರುವ ಸಾಂಸ್ಕೃತಿಕ ನಗರಿ ಮೈಸೂರು ನಗರವು ಸಮಗ್ರ ವಿಭಾಗದಲ್ಲಿ 5ನೇ ಸ್ಥಾನ ಪಡೆದಿದೆ.
ಇನ್ನು ಖುಷಿಯ ವಿಚಾರವೆಂದರೆ 3 ರಿಂದ 10 ಲಕ್ಷ ಜನಸಂಖ್ಯೆಯುಳ್ಳ ವಿಭಾಗದಲ್ಲಿ ಮೈಸೂರು ನಗರವು 5428.31 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದು, ಕರ್ನಾಟಕ ರಾಜ್ಯದ ಹೆಮ್ಮೆಗೆ ಪಾತ್ರವಾಗಿದೆ.
ಸಮಗ್ರ ವಿಭಾಗದಲ್ಲಿ ಮಧ್ಯಪ್ರದೇಶದ ಇಂದೋರ್ ನಗರ ಸತತ ನಾಲ್ಕನೇ ಬಾರಿಗೆ ಪ್ರಥಮ ಸ್ಥಾನ ಪಡೆದಿದ್ದು, ಮೈಸೂರು ನಗರವು 5ನೇ ಸ್ಥಾನ ಪಡೆದಿದೆ. ಮೈಸೂರು ನಗರದ ಅರಮನೆ ಆವರಣದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ ಪ್ರದಾನ ವರ್ಚ್ಯುಯಲ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಯಿತು.

ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ ಪ್ರದಾನ ವರ್ಚ್ಯಯಲ್ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೈರಾದ ಹಿನ್ನೆಲೆಯಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ದೇಶದ ಪೌರ ಕಾರ್ಮಿಕರ ಜೊತೆ ಸಂವಾದ ನಡೆಸಿದರು.
ಮೈಸೂರಿನ ಪೌರ ಕಾರ್ಮಿಕರಾದ ಮಂಜುಳ ಹಾಗೂ ನಂಜುಂಡಸ್ವಾಮಿ ಸಂವಾದದಲ್ಲಿ ಭಾಗವಹಿಸಿದ್ದರು. ಪೌರ ಕಾರ್ಮಿಕರೊಂದಿಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಂವಾದ ನಡೆಸಿ, ಮೈಸೂರು ನಗರಿಗೆ ಪ್ರಥಮ ಆದ್ಯತೆ ನೀಡಿದರು.

ಕೇಂದ್ರದ ಸರ್ಕಾರದ ಯಾವ ಯೋಜನೆಯ ಲಾಭ ಪಡೆದಿದ್ದೀರಿ ಅಂತಾ ಕೇಂದ್ರ ಸಚಿವರ ಪ್ರಶ್ನೆಗೆ ಉತ್ತರಿಸಿದ ಪೌರ ಕಾರ್ಮಿಕ ಮಹಿಳೆ ಮಂಜುಳಾ, ಕೇಂದ್ರ ಸರ್ಕಾರದ ಸಾಮೂಹಿಕ ಶೌಚಾಲಯ, ಜನ್ ಧನ್ ಖಾತೆ ಹಾಗೂ ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಪಡೆದಿದ್ದೇವೆ ಎನ್ನುವ ಉತ್ತರ ಬಂದಿತು.
ಗರೀಬ್ ಕಲ್ಯಾಣ್ ಯೋಜನೆಯಡಿ ಪ್ರತೀ ಪೌರ ಕಾರ್ಮಿಕರಿಗೆ 30 ಲಕ್ಷ ರೂ. ವಿಮಾ ಸೌಲಭ್ಯದಿಂದ ಸಂತೃಪ್ತಿಯಾಗಿದ್ದೇವೆ. ಕೊರೊನಾ ಸಂದರ್ಭದಲ್ಲಿ ನಮಗೆ ಕೆಲಸ ಮಾಡಲು ಇನ್ನಷ್ಟು ಹುಮ್ಮಸ್ಸು ಬಂದಿದೆ ಎಂದು ಪೌರ ಕಾರ್ಮಿಕ ನಂಜುಂಡಸ್ವಾಮಿ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದರು.

ನಂತರ ಮತ್ತೆ ಮಾತನಾಡಿದ ಪೌರ ಕಾರ್ಮಿಕ ನಂಜುಂಡಸ್ವಾಮಿ, ಕೊರೊನಾ ವೈರಸ್ ನಿಂದ ಪಾಸಿಟಿವ್ ಆಗಿ ಮತ್ತೆ ಬಂದು ಕೆಲಸ ಮಾಡಿರುವುದಾಗಿ ತಿಳಿಸಿದರು.
ಇದರಿಂದ ಸಂತಸಗೊಂಡ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಮೇಯರ್ ತಸ್ನೀಂ, ಶಾಸಕ ಎಸ್.ಎ ರಾಮದಾಸ್, ಉಪಮೇಯರ್ ಶ್ರೀಧರ್ ನಗರಪಾಲಿಕ ಆರೋಗ್ಯಾಧಿಕಾರಿ ಡಾ. ನಾಗರಾಜ್ ಇನ್ನಿತರರು ಭಾಗವಹಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications