ಲೋಕಸಭಾ ಚುನಾವಣೆಯಲ್ಲಿ ಸ್ವರಾಜ್ ಇಂಡಿಯಾ ಅಭ್ಯರ್ಥಿಗಳು ಕಣಕ್ಕೆ
ಮೈಸೂರು, ಫೆಬ್ರವರಿ 19: ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಅಥವಾ ಮಂಡ್ಯ, ಉತ್ತರ ಕರ್ನಾಟಕ ಭಾಗದಿಂದ ಕೊಪ್ಪಳ ಅಥವಾ ರಾಯಚೂರಿನಿಂದ ಸ್ವರಾಜ್ ಇಂಡಿಯಾ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲಿ ಪಾಟೀಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೂ ಲೋಕಸಭಾ ಚುನಾವಣೆ ವೇಳೆ ಮೋದಿ - ರಾಹುಲ್, ಭ್ರಷ್ಟಾಚಾರ, ಹಿಂದೂ ಮುಸ್ಲಿಂ ಎಂಬ ವಿಷಯಗಳೇ ಪ್ರಧಾನವಾಗುತ್ತಿತ್ತು. ಅಲ್ಲದೇ ರೈತರನ್ನು ಮರೆಮಾಚಲಾಗಿತ್ತು. ಆದರೆ ರೈತರಿಗೆ ಪ್ರಾಮುಖ್ಯತೆ ನೀಡಬೇಕೆಂದು ರೈತ ಸಂಘಟನೆಗಳ ಒಕ್ಕೂಟ ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸಿದೆ. ಈ ಕಾರಣಕ್ಕಾಗಿ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ತಿಳಿಸಿದರು.
ಕೆ.ಆರ್.ಎಸ್ ಬಳಿ ಗಣಿಗಾರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಗಣಿಗಾರಿಕೆ ವಿರುದ್ಧವಾಗಿ ಮಂಡ್ಯದಲ್ಲಿ ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ. ಗಣಿಗಾರಿಕೆ ಸಂಪೂರ್ಣ ನಿಷೇಧ ಮತ್ತು ಅದರಿಂಗಾದುವ ಅನಾಹುತಗಳ ಬಗ್ಗೆ ಎಚ್ಚರಿಸುವ ಸಂಬಂಧ ರೈತ ಮುಖಂಡರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಸಭೆ ನಡೆಸಲಾಗುತ್ತದೆ ಎಂದರು.

ಇದೇ ವೇಳೆ ಮಾತನಾಡಿದ ರೈತ ಮುಖಂಡ ದರ್ಶನ್, ಲೋಕಸಭಾ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ. ರೈತ ಸಂಘದಿಂದ ಅಭ್ಯರ್ಥಿ ಯಾರು ಎಂಬುದು ಇನ್ನು ತೀರ್ಮಾನವಾಗಿಲ್ಲ. ತಾಲ್ಲೂಕು, ಜಿಲ್ಲಾ ಘಟಕದ ಮುಖಂಡರ ಜೊತೆ ಚರ್ಚೆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಹಾಗೆಯೇ ರಾಜ್ಯ ರೈತ ಸಂಘದಲ್ಲಿ ಯಾವುದೇ ಗೊಂದಲ ಇಲ್ಲ. ಕೇವಲ ಮಿಸ್ ಕಮ್ಯೂನಿಕೇಷನ್ ಆಗಿತ್ತು ಅಷ್ಟೇ. ಎಲ್ಲಾ ಗೊಂದಲ ನಿವಾರಣೆಯಾಗಿದೆ ಎಂದು ತಿಳಿಸಿದರು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications