ಸ್ವರಾಜ್ ಇಂಡಿಯಾ ಸ್ವತಂತ್ರವಾಗಿ ಸ್ಪರ್ಧಿಸಲಿದೆ:ಯೋಗೇಂದ್ರ ಯಾದವ್
ಮೈಸೂರು,ಡಿಸೆಂಬರ್ 24 :ಪ್ರಜಾಪ್ರಭುತ್ವ ವ್ಯವಸ್ಥೆಯ ಶತ್ರುವಾಗಿರುವ ಬಿಜೆಪಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ ಮಹಾಘಟ ಬಂಧನ್ ಹೊಸ ಭರವಸೆ ಮೂಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಸ್ವರಾಜ್ ಇಂಡಿಯಾ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಯೋಗೇಂದ್ರ ಯಾದವ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಮಹಾಮೈತ್ರಿ ಮಾಡಿಕೊಂಡಿವೆ. ಆದರೆ, ಅದು ಜನರ ವಿಶ್ವಾಸ ಗಳಿಸುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಫಲವಾಗಿಲ್ಲ. ಈ ಹಿಂದೆ ದೇಶದಲ್ಲಿ ರಾಜಕೀಯ ಸಂಸ್ಕೃತಿ ಎಂಬುದು ನಾಶವಾಗಿದೆ. ರಾಜಕಾರಣಿಗಳು ನಕಲಿ ಪ್ರಜಾ ಪ್ರಭುತ್ವವವನ್ನು ಅನುಸರಿಸುತ್ತಿದ್ದು, ಇದರಿಂದ ಉತ್ತಮವಾಗಿರುವ ದೇಶದ ಪ್ರಜಾಪ್ರಭುತ್ವ ಬುಡಮೇಲಾಗಿದೆ ಎಂದರು.
ಬೊಫೋರ್ಸ್, ಅಯೋಧ್ಯೆ ಮಂದಿರ, 2ಜಿ ಮೊದಲಾದ ಪ್ರಕರಣಗಳನ್ನು ಆಧರಿಸಿ ಚುನಾವಣೆ ನಡೆಯುತ್ತಿತ್ತು. ಆದರೆ, ರೈತರು, ಯುವ ಜನರ ನಿರುದ್ಯೋಗ ಸಮಸ್ಯೆಗಳ ಬಗ್ಗೆ ಯಾರೂ ಗಮನಹರಿಸಿಲ್ಲ. ಆದ್ದರಿಂದ ಸ್ವರಾಜ್ ಇಂಡಿಯಾ ಇವೆರಡು ವಿಷಯಗಳನ್ನು ಇಟ್ಟುಕೊಂಡು ಚುನಾವಣಾ ಕಣಕ್ಕಿಳಿಯಲಿದೆ ಎಂದು ವಿವರಿಸಿದರು.

ಚುನಾವಣಾ ಪೂರ್ವದಲ್ಲಿ ಬಿಜೆಪಿ ರೈತರಿಗೆ ನೀಡಿದ ಯಾವುದೇ ಭರವಸೆಗಳು ಈಡೇರಿಲ್ಲ. ರಾಜ್ಯ ಸರ್ಕಾರ ಕೂಡ ರೈತರ ಸಂಪೂರ್ಣ ಸಾಲಮನ್ನಾ ಮಾಡಲು ವಿಫಲವಾಗಿದ್ದು, ಇದರ ವಿರುದ್ಧ ಪಕ್ಷ ನಿರಂತರ ಹೋರಾಟ ನಡೆಸಲಿದೆ. ಬಿಜೆಪಿ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಪ್ರಧಾನಿ ಮೋದಿ ಸರ್ಕಾರವು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಬಿಜೆಪಿ ಅಜೆಂಡಾ ವಿರೋಧಿಸಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜಾ.ದಳ ಸಮ್ಮಿಶ್ರ ಸರ್ಕಾರವು, ರೈತರಿಗೆ ನೀಡಿರುವ ಸಂಪೂರ್ಣ ಭರವಸೆಯನ್ನು ಈಡೇರಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದಿಂದ ಅರ್ಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಐ ಕ್ಯಾನ್ ಅಭಿಯಾನ ಪ್ರಾರಂಭಿಸಲಾಗಿದೆ. ವಾರದ ಹಿಂದೆ ಪ್ರಾರಂಭವಾದ ಈ ಅಭಿಯಾನದಲ್ಲಿ ಇದುವರೆಗೆ 10 ಸಾವಿರ ಜನರು ಅಭ್ಯರ್ಥಿಗಳಾಗಲು ಪಕ್ಷದಿಂದ ಮಾಹಿತಿ ಪಡೆದಿದ್ದಾರೆ. 1,500 ಜನರು ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ ಶೇ.70ರಷ್ಟು ಯುವಜನರು ಎಂಬುದು ವಿಶೇಷ. ಅಭಿಯಾನದ ಬಳಿಕ ಪ್ರತಿ ಕ್ಷೇತ್ರಕ್ಕೂ ಅರ್ಹರನ್ನು ಆಯ್ಕೆ ಮಾಡಿ, ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಲಾಗುವುದು. ಅವರಿಗೆ ಸ್ವರಾಜ್ ಇಂಡಿಯಾ ಸಂಪೂರ್ಣ ಬೆಂಬಲ ನೀಡಲಿದೆ. ಒಂದು ವೇಳೆ ಸ್ವರಾಜ್ ಇಂಡಿಯಾ ಕಾರ್ಯಕರ್ತರು ಚುನಾವಣೆಗೆ ಸ್ಪರ್ಧಿಸಲು ಬಯಸಿದರೆ ಐ ಕ್ಯಾನ್ ಅಭಿಯಾನದ ಮೂಲಕ ಆಯ್ಕೆಯಾಗಬೇಕು ಎಂದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications