ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈಜುಕೊಳ ನಿರ್ಮಾಣ ವಿವಾದ; ಸ್ಪಷ್ಟನೆ ಕೊಟ್ಟ ರೋಹಿಣಿ ಸಿಂಧೂರಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 06; ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ನೇಮಕಗೊಂಡಿದ್ದಾರೆ. ಆದರೆ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ಮಾಡಿದ ವಿವಾದ ಹಾಗಯೇ ಇದೆ.

ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಿಸಿರುವುದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ಸರ್ಕಾರಕ್ಕೆ ರೋಹಿಣಿ ಸಿಂಧೂರಿ ಉತ್ತರ ನೀಡಿದ್ದಾರೆ. ಪ್ರಾದೇಶಿಕ ಆಯುಕ್ತ ಡಾ. ಜಿ. ಸಿ ಪ್ರಕಾಶ್‌ಗೆ ಎರಡು ಪುಟಗಳ ಉತ್ತರವನ್ನು ಸಲ್ಲಿಸಿದ್ದಾರೆ.

Breaking; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆBreaking; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ

ಜಿಲ್ಲಾಧಿಕಾರಿ ವಸತಿ ಕಚೇರಿ ಆವರಣದಲ್ಲಿ ಈಜುಕೊಳ ನಿರ್ಮಿಸಬೇಕೆಂಬುದು 5 ವರ್ಷಗಳ ಹಿಂದಿನ ಯೋಜನೆಯಾಗಿದೆ. ಹೊಸ ತಂತ್ರಜ್ಞಾನ ಬಳಸಿ ನಿರ್ಮಾಣ ಕಾರ್ಯ ನಡೆಸಲು ನಿರ್ಮಿತಿ ಕೇಂದ್ರ ನಿರ್ಧರಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳ ನಿರ್ಮಾಣವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈಜುಕೊಳ ನಿರ್ಮಾಣ ವಿವಾದ; ರೋಹಿಣಿ ಸಿಂಧೂರಿಗೆ ಹೊಸ ಸಂಕಷ್ಟ ಈಜುಕೊಳ ನಿರ್ಮಾಣ ವಿವಾದ; ರೋಹಿಣಿ ಸಿಂಧೂರಿಗೆ ಹೊಸ ಸಂಕಷ್ಟ

Swimming Pool Construction Rohini Sindhuri Clarification

ನಿರ್ಮಿತಿ ಕೇಂದ್ರದ 28.72 ಲಕ್ಷದಲ್ಲಿ ಈಜುಕೊಳ ನಿರ್ಮಾಣವಾಗಿದೆ. ಪಾರಂಪರಿಕ ಕಟ್ಟಡಕ್ಕೆ ಧಕ್ಕೆಯಾಗಿಲ್ಲ ಎಂದು ಎರಡು ಪುಟಗಳ ಸ್ಪಷ್ಟನೆಯಲ್ಲಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಈಜುಕೊಳ ನಿರ್ಮಾಣದ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಾದೇಶಿಕ ಆಯುಕ್ತರಿಂದ ವರದಿ ಕೇಳಿದ್ದರು.

ಉಸ್ತುವಾರಿ ಸಚಿವರ ವೈಫಲ್ಯವೇ, ರೋಹಿಣಿ vs ಶಿಲ್ಪಾನಾಗ್ ಜಟಾಪಟಿಗೆ ಕಾರಣ!? ಉಸ್ತುವಾರಿ ಸಚಿವರ ವೈಫಲ್ಯವೇ, ರೋಹಿಣಿ vs ಶಿಲ್ಪಾನಾಗ್ ಜಟಾಪಟಿಗೆ ಕಾರಣ!?

ಪಾರಂಪರಿಕ ಕಟ್ಟಡ; ಮೈಸೂರು ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ಪಾರಂಪರಿಕ ಕಟ್ಟಡವಾಗಿದೆ. ಯಾವುದೇ ಹೊಸ ಕಟ್ಟಡ ಕಾಮಗಾರಿಯನ್ನು ಅಲ್ಲಿ ಮಾಡುವಂತಿಲ್ಲ. ಆದರೆ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಈಜುಕೊಳ, ಜಿಮ್ ನಿರ್ಮಿಸಿದ್ದಾರೆ ಎಂಬುದು ಆರೋಪ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ವೈಯಕ್ತಿಕ ಮೋಜಿಗಾಗಿ ಸರ್ಕಾರದ ಹಣವನ್ನು ದುರ್ಬಳಕೆ ಮಾಡುವ ಅಧಿಕಾರಿಗಳಿಂದ ಜನಪ್ರತಿನಿಧಿಗಳು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ಸಹ ಈ ವಿಚಾರ ಪ್ರಸ್ತಾಪ ಮಾಡಿದ್ದರು. "ವೈಯಕ್ತಿಕವಾಗಿ ನಾನು ದಾಳಿ ಮಾಡಿದ್ದರೆ ಡಿಸಿ ಮನೆಯಲ್ಲಿ ನಿರ್ಮಿಸಿದ ಈಜುಕೊಳ, ಜಿಮ್ ನಿರ್ಮಾಣ ಕುರಿತು ಪಾಲಿಕೆ ವತಿಯಿಂದ ನೋಟಿಸ್ ನೀಡಬಹುದಿತ್ತು ಅಲ್ಲವೇ?" ಎಂದು ಪ್ರಶ್ನೆ ಮಾಡಿದ್ದರು.

Recommended Video

RohiniSindhuri ವರ್ಗಾವಣೆಯಾದರು ತಣ್ಣಗಾಗಿಲ್ಲ Prathap Simha ಕೋಪ | Oneindia Kannada

ಸರ್ಕಾರ ಶನಿವಾರ ಶಿಲ್ಪಾನಾಗ್ ಮತ್ತು ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ ಪ್ರಾದೇಶಿಕ ಆಯುಕ್ತರು ಮುಖ್ಯ ಕಾರ್ಯದರ್ಶಿಗಳಿಗೆ ಈಜುಕೊಳ ನಿರ್ಮಾಣದ ಕುರಿತು ವರದಿಯನ್ನು ನೀಡಲಿದ್ದಾರೆ.

English summary
Rohini Sindhuri clarification to the regional commissioner on the issue of the swimming pool and gym construction at Mysuru deputy commissioner residence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X