ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟಿಪ್ಪು ಪಠ್ಯ ತೆಗೆದು ಹಾಕುವ ನಿರ್ಧಾರ; ತನ್ವೀರ್ ಸೇಠ್ ಹೇಳಿದ್ದು ಹೀಗೆ...

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 31: ಮಾಜಿ ಸಚಿವ ತನ್ವೀರ್ ಸೇಠ್ ಟಿಪ್ಪು ಪಠ್ಯವನ್ನು ತೆಗೆದು ಹಾಕುವ ನಿರ್ಧಾರವನ್ನು ಖಂಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಸಾಧನೆಯನ್ನು ಮಕ್ಕಳು ಓದುವುದು ಬೇಕಾಗಿಲ್ಲ, ಬದಲಿಗೆ ಯಡಿಯೂರಪ್ಪ ಜೈಲಿಗೆ ಹೋದ ವಿಚಾರವನ್ನು ಮುಂದಿನ ಪೀಳಿಗೆಯ ಮಕ್ಕಳು ಓದಬೇಕಿದೆ ಎಂದು ಟಾಂಗ್ ನೀಡಿದ್ದಾರೆ.

"ಚೈಲ್ಡಿಶ್, ಜೋಕ್ ಆಫ್ ದಿ ಸೆಂಚುರಿ"; ಮೋದಿಗೆ ಜಿಗ್ನೇಶ್ ಮೇವಾನಿ ಬಾಣ!

"ಆಪರೇಷನ್ ಕಮಲ, ಗಣಿ ಲೂಟಿ ಮಾಡಿರುವುದು ಬಿಜೆಪಿಯ ಇತಿಹಾಸ. ಇದನ್ನೇ ಮುಂದಿನ ಪೀಳಿಗೆಯ ಮಕ್ಕಳು ಓದಲಿ ಎಂದು ಬಯಸಿದ್ದಾರೆ. ಬಿಜೆಪಿಯವರು ಬ್ರಿಟಿಷರ ಪರ ನಿಂತವರು, ಗಾಂಧೀಜಿಯನ್ನು ಕೊಂದವರು. ಬಿಜೆಪಿಯವರು ಯಾರೂ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಇಲ್ಲ. ಬದಲಿಗೆ ತಮ್ಮದೇ ಆದ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ. ಇದು ಯಶಸ್ವಿ ಆಗದು, ಬಿಜೆಪಿಯದು ಹಿಟ್ಲರ್ ನ ಸಾಮ್ರಾಜ್ಯಕ್ಕಿಂತ ಕೀಳು" ಎಂದು ವಾಗ್ದಾಳಿ ನಡೆಸಿದರು.

Tanveer Sait Reaction On Removal Of Tipu Sultan Name From Text Book

"ಅಲ್ಪಸಂಖ್ಯಾತ ಸಮುದಾಯ ಎಂದಿಗೂ ಟಿಪ್ಪು ಜಯಂತಿ ಮಾಡಿ ಎಂದು ಸರ್ಕಾರವನ್ನು ಕೇಳಿರಲಿಲ್ಲ. ಅಲ್ಲದೆ ಪಠ್ಯದಲ್ಲಿ ಸೇರಿಸಲು ಕೂಡ ಕೇಳಿರಲಿಲ್ಲ. ಟಿಪ್ಪು ಓರ್ವ ಸ್ವಾತಂತ್ರ್ಯ ಹೋರಾಟಗಾರ. ಆದರೆ ಅದನ್ನು ವ್ಯವಸ್ಥಿತವಾಗಿ ತಿರುಚಿ ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಹಾಗೂ ಅವರ ಪರ ಮಾತನಾಡುವವರನ್ನು ಘಾತಕ ಶಕ್ತಿಗಳಂತೆ ಬಿಂಬಿಸಲಾಗುತ್ತಿದೆ" ಎಂದು ಬಿಜೆಪಿ ವಿರುದ್ಧ ಅಸಮಾಧಾನಗೊಂಡರು.

English summary
Former minister Tanveer Sait reacted on the issue of removing tipu sultan name from school ext book,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X