ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗರು
ಮೈಸೂರು, ಜೂನ್ 6 : ಕಳೆದ ಬಾರಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶಾಸಕ ತನ್ವೀರ್ ಸೇಠ್ ಅವರಿಗೆ ಇದೀಗ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಬೆಂಬಲಿಗರು ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ರೊಚ್ಚಿಗೆದ್ದ ಬೆಂಬಲಿಗರು ಮೈಸೂರು - ಬೆಂಗಳೂರು ರಸ್ತೆ ತಡೆ ನಡೆಸಿ, ಮೈಮೇಲೆ ಸೀಮೆಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ನೂತನ ಸಚಿವರ ಪಟ್ಟಿ
ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ಸಿನಿಂದ ಯಾರೊಬ್ಬರಿಗೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆ ಟಯರ್ ಗೆ ಬೆಂಕಿ ಇಟ್ಟು, ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು.
ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ಸಿನಿಂದ 15 ಹಾಗೂ ಜೆಡಿಎಸ್ ನಿಂದ 8 ಮತ್ತು ಕೆಪಿಜೆಪಿ 1 ಹಾಗೂ ಬಹುಜನ ಸಮಾಜವಾದಿ ಪಕ್ಷದಿಂದ 1 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Comments
English summary
MLA Tanveer sait did not get the cabinet right now. In this regard supporters protested in mysuru.
Story first published: Wednesday, June 6, 2018, 17:48 [IST]