ಎಡ, ಬಲ ಬೇಡ ಇತಿಹಾಸವನ್ನು ಬೋಧಿಸಿ: ಯದುವೀರ್
ಮೈಸೂರು, ಮೇ 31: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತಿದೆ. ಕೆಲವು ಶ್ರೇಷ್ಠ ಇತಿಹಾಸಕಾರರ ಇತಿಹಾಸವನ್ನು ಕೈಬಿಟ್ಟಿರುವುದಕ್ಕೆ ಕೆಲವು ಲೇಖಕರು ತಮ್ಮ ಪಠ್ಯವನ್ನು ಸೇರಿಸುವುದು ಬೇಡ ಎನ್ನುತ್ತಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ , "ಎಡವೂ ಬೇಡ, ಬಲವೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ" ಎಂದು ಸಲಹೆ ನೀಡಿದರು.
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಯದುವೀರ್ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯವನ್ನು ಅಳವಡಿಸಬೇಕು" ಎಂದರು.
ಟೆಂಡರ್ ಪ್ರಕ್ರಿಯೆ ಬದಲಾಗಬೇಕು; "ಪಾರಂಪರಿಕ ಕಟ್ಟಡಗಳ ಉಳಿವಿನ ಕುರಿತು ಮಾತನಾಡಿದ ಯದುವೀರ್, "ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡಬೇಕೆಂದಿದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪುನಶ್ವೇತನಕ್ಕೆ ಅನುಮತಿ ಸಿಗುತ್ತಿಲ್ಲ. ಅದು ಕೂಡ ಸರಿಯಾಗಬೇಕು ಎಂದರು. ಆಯುರ್ವೇದಿಕ್ ಆಸ್ಪತ್ರೆ ಚನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾಕರವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು" ಎಂದರು.

ಹಂಪಾ ನಾಗರಾಜಯ್ಯ ರಾಜೀನಾಮೆ; ಕುವೆಂಪು ಅವರ ನಾಡಗೀತೆಯನ್ನು ಅವಹೇಳನ ಮಾಡಿದ ವಿವಾದ ಭುಗಿಲೆದ್ದ ಬೆನ್ನಲ್ಲೇ ಕುವೆಂಪು ಪ್ರತಿಷ್ಠಾನಕ್ಕೆ ಹಂಪಾ ನಾಗರಾಜಯ್ಯ ರಾಜೀನಾಮೆ ನೀಡಿದ್ದರು. ನಾಡಗೀತೆಗೆ ಅವಮಾನ ಮಾಡಿದ ಬಗ್ಗೆ ಬೇಸರ ವ್ಯಕ್ತಪಡಿಸಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
ನಾಡಗೀತೆಯನ್ನು ವಿರೂಪಗೊಳಿಸಿದ ವ್ಯಕ್ತಿಯನ್ನು ಹೀಗೆ ಬಿಟ್ಟರೆ ನಾಳೆ ರಾಷ್ಟ್ರಗೀತೆಯನ್ನು ಅವಮಾನಿಸುತ್ತಾರೆ. ಅಂತಹ ವ್ಯಕ್ತಿ ವಿರುದ್ಧ ಕ್ರಮ ಜರುಗಿಸುವುದು ಬಿಟ್ಟು ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸದಸ್ಯರನ್ನಾಗಿ ಮಾಡಿರುವುದು ಎಷ್ಟು ಸರಿ? ಎಂದು ಸ್ವಾಮೀಜಿಗಳು ಪ್ರಶ್ನಿಸಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications