ಚಾಮುಂಡೇಶ್ವರಿ ದರ್ಶನ ಪಡೆದ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ದಂಪತಿ
ಮೈಸೂರು, ಡಿಸೆಂಬರ್ 5: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಅವರು ಭಾನುವಾರ ಚಾಮುಂಡಿಬೆಟ್ಟಕ್ಕೆ ದಂಪತಿ ಸಹಿತ ಭೇಟಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
ಬೆಳಗ್ಗೆ ಪತ್ನಿ ಡಾ. ವಿಜೇತಾ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಹುಲ್ ದ್ರಾವಿಡ್ ತಾಯಿ ದರ್ಶನ ಪಡೆದರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ 19 ವರ್ಷದೊಳಗಿನವರ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯು ಉತ್ತರಾಖಂಡದ ವಿರುದ್ಧ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸುಮಿತ್ ಕೂಡ ಕರ್ನಾಟಕದ ಪರ ಆಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಗ ಆಟ ಕಣ್ತುಂಬಿಕೊಳ್ಳಲು ರಾಹುಲ್ ದ್ರಾವಿಡ್ ಮೈಸೂರಿಗೆ ಆಗಮಿಸಿದ್ದುಘಿ, ಭಾನುವಾರ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ನಟ ರಾಮಚರಣ್ರಿಂದ ದರ್ಶನ:
ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಪುತ್ರ ಟಾಲಿವುಡ್ ನಾಯಕ ನಟ ರಾಮ್ಚರಣ್ ತೇಜ ಅವರು ಕೂಡ ಭಾನುವಾರ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ರಾಮ್ಚರಣ್ ತೇಜ ಅವರು ತಮ್ಮ ಬಹು ನಿರೀಕ್ಷಿತ ಚಿತ್ರ 'ಗೇಮ್ ಚೇಂಜರ್' ಸಿನಿಮಾ ಶೂಟಿಂಗಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ದರ್ಶನ ಪಡೆದರು.
ಮಹಾನಂದಿಗೆ ಮಹಾಭಿಷೇಕ:
ಲೋಕ ಕಲ್ಯಾಣಕ್ಕಾಗಿ ಭಾನುವಾರ ಮುಂಜಾನೆ ಚಾಮುಂಡಿಬೆಟ್ಟ ಮಹಾನಂದಿಗೆ ಮಹಾಭಿಷೇಕ ನಡೆಯಿತು. ನಗರದ ಚಾಮುಂಡಿಬೆಟ್ಟದ ಮೇಲಿನ ಏಕಶಿಲಾ ಮೂರ್ತಿ ಮಹಾನಂದಿಗೆ ಕಾರ್ತಿಕ ಮಾಸದ ಪ್ರಯುಕ್ತ ಕನಕಾಭಿಷೇಕ, ರುದ್ರಾಭಿಷೇಕದ ಜತೆಗೆ 36 ಬಗೆಯ ದ್ರವ್ಯಗಳಿಂದ ಅಭಿಷೇಕ ನಡೆಸಲಾಯಿತು.

ಅನೇಕ ವರ್ಷಗಳಿಂದ ಪ್ರತಿ ವರ್ಷದ ಕಾರ್ತಿಕ ಮಾಸದಲ್ಲಿ ಟ್ರಸ್ಟ್ ವತಿಯಿಂದ ಮಹಾಭಿಷೇಕ ಆಯೋಜಿಸುತ್ತಿದ್ದು, ಇಂದು 18ನೇ ಬಾರಿಗೆ ನಡೆದಿದ್ದು, ಮಹಾಭಿಷೇಕ ಕಾರ್ಯಕ್ರಮಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಹೊಸಮಠದ ಚಿದಾನಂದ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ನೂರಾರು ಮಂದಿ ಸಾಕ್ಷಿಯಾದರು.
ಪ್ರಮುಖವಾಗಿ ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ವಿವಿಧ ಬಗೆಯ ಹಣ್ಣು, ಹಾಲು, ಚಂದನ, ಶ್ರೀಗಂಧ, ಬಿಲ್ವಪತ್ರೆ, ಖರ್ಜೂರ, ಕೊಬ್ಬರಿ ಅಭಿಷೇಕ ನೆರವೇರಿಸಲಾಯಿತು. ಕೊನೆಯಲ್ಲಿ ಜಲಾಭಿಷೇಕದೊಡನೆ ಮಹಾಭಿಷೇಕವನ್ನು ಸಮಾಪ್ತಿಗೊಳಿಸಲಾಯಿತು. ಈ ಎಲ್ಲಾ ಅಭಿಷೇಕಗಳು ಹಾಗೂ ಪೂಜಾ ಕೈಂಕರ್ಯಗಳು, ಮಹಾಮಂಗಳಾರತಿ ನೆರವೇರಿದ ಬಳಿಕ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಮಹಾಭಿಷೇಕವನ್ನು ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ನವರು ಆಯೋಜಿಸಿದ್ದರು.
'' ಈ ರೀತಿಯ ಅಭಿಷೇಕ ಮಾಡುವುದರಿಂದ ಏಕಶಿಲೆಯಲ್ಲಿ ನಿರ್ಮಿಸಿರುವ ನಂದಿ ವಿಗ್ರಹದ ಸಂರಕ್ಷಣೆಗೆ ಸಹಕಾರಿಯಾಗುತ್ತದೆ. ಬೆಟ್ಟದ ಬಳಗದಿಂದ ಮಹಾಭಿಷೇಕ ಕಾರ್ಯವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಪೂಜೆ ಆರಂಭಕ್ಕೂ ಮುನ್ನ ಯದುವಂಶದ ಹೆಸರಿನಲ್ಲಿ ಸಂಕಲ್ಪವನ್ನು ಕೂಡ ಮಾಡಲಾಗುತ್ತದೆ,'' ಎಂದು ಬೆಟ್ಟದ ಬಳಗದ ಕಾರ್ಯದರ್ಶಿ ಪ್ರಕಾಶನ್ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications