ಚಾಮುಂಡೇಶ್ವರಿ ದರ್ಶನ ಪಡೆದ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ದಂಪತಿ
ಮೈಸೂರು, ಡಿಸೆಂಬರ್ 5: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಅವರು ಭಾನುವಾರ ಚಾಮುಂಡಿಬೆಟ್ಟಕ್ಕೆ ದಂಪತಿ ಸಹಿತ ಭೇಟಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
ಬೆಳಗ್ಗೆ ಪತ್ನಿ ಡಾ. ವಿಜೇತಾ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಹುಲ್ ದ್ರಾವಿಡ್ ತಾಯಿ ದರ್ಶನ ಪಡೆದರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ 19 ವರ್ಷದೊಳಗಿನವರ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯು ಉತ್ತರಾಖಂಡದ ವಿರುದ್ಧ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸುಮಿತ್ ಕೂಡ ಕರ್ನಾಟಕದ ಪರ ಆಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಗ ಆಟ ಕಣ್ತುಂಬಿಕೊಳ್ಳಲು ರಾಹುಲ್ ದ್ರಾವಿಡ್ ಮೈಸೂರಿಗೆ ಆಗಮಿಸಿದ್ದುಘಿ, ಭಾನುವಾರ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ನಟ ರಾಮಚರಣ್ರಿಂದ ದರ್ಶನ:
ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಪುತ್ರ ಟಾಲಿವುಡ್ ನಾಯಕ ನಟ ರಾಮ್ಚರಣ್ ತೇಜ ಅವರು ಕೂಡ ಭಾನುವಾರ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ರಾಮ್ಚರಣ್ ತೇಜ ಅವರು ತಮ್ಮ ಬಹು ನಿರೀಕ್ಷಿತ ಚಿತ್ರ 'ಗೇಮ್ ಚೇಂಜರ್' ಸಿನಿಮಾ ಶೂಟಿಂಗಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ದರ್ಶನ ಪಡೆದರು.
ಮಹಾನಂದಿಗೆ ಮಹಾಭಿಷೇಕ:
ಲೋಕ ಕಲ್ಯಾಣಕ್ಕಾಗಿ ಭಾನುವಾರ ಮುಂಜಾನೆ ಚಾಮುಂಡಿಬೆಟ್ಟ ಮಹಾನಂದಿಗೆ ಮಹಾಭಿಷೇಕ ನಡೆಯಿತು. ನಗರದ ಚಾಮುಂಡಿಬೆಟ್ಟದ ಮೇಲಿನ ಏಕಶಿಲಾ ಮೂರ್ತಿ ಮಹಾನಂದಿಗೆ ಕಾರ್ತಿಕ ಮಾಸದ ಪ್ರಯುಕ್ತ ಕನಕಾಭಿಷೇಕ, ರುದ್ರಾಭಿಷೇಕದ ಜತೆಗೆ 36 ಬಗೆಯ ದ್ರವ್ಯಗಳಿಂದ ಅಭಿಷೇಕ ನಡೆಸಲಾಯಿತು.

ಅನೇಕ ವರ್ಷಗಳಿಂದ ಪ್ರತಿ ವರ್ಷದ ಕಾರ್ತಿಕ ಮಾಸದಲ್ಲಿ ಟ್ರಸ್ಟ್ ವತಿಯಿಂದ ಮಹಾಭಿಷೇಕ ಆಯೋಜಿಸುತ್ತಿದ್ದು, ಇಂದು 18ನೇ ಬಾರಿಗೆ ನಡೆದಿದ್ದು, ಮಹಾಭಿಷೇಕ ಕಾರ್ಯಕ್ರಮಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಹೊಸಮಠದ ಚಿದಾನಂದ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ನೂರಾರು ಮಂದಿ ಸಾಕ್ಷಿಯಾದರು.
ಪ್ರಮುಖವಾಗಿ ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ವಿವಿಧ ಬಗೆಯ ಹಣ್ಣು, ಹಾಲು, ಚಂದನ, ಶ್ರೀಗಂಧ, ಬಿಲ್ವಪತ್ರೆ, ಖರ್ಜೂರ, ಕೊಬ್ಬರಿ ಅಭಿಷೇಕ ನೆರವೇರಿಸಲಾಯಿತು. ಕೊನೆಯಲ್ಲಿ ಜಲಾಭಿಷೇಕದೊಡನೆ ಮಹಾಭಿಷೇಕವನ್ನು ಸಮಾಪ್ತಿಗೊಳಿಸಲಾಯಿತು. ಈ ಎಲ್ಲಾ ಅಭಿಷೇಕಗಳು ಹಾಗೂ ಪೂಜಾ ಕೈಂಕರ್ಯಗಳು, ಮಹಾಮಂಗಳಾರತಿ ನೆರವೇರಿದ ಬಳಿಕ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಮಹಾಭಿಷೇಕವನ್ನು ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ನವರು ಆಯೋಜಿಸಿದ್ದರು.
'' ಈ ರೀತಿಯ ಅಭಿಷೇಕ ಮಾಡುವುದರಿಂದ ಏಕಶಿಲೆಯಲ್ಲಿ ನಿರ್ಮಿಸಿರುವ ನಂದಿ ವಿಗ್ರಹದ ಸಂರಕ್ಷಣೆಗೆ ಸಹಕಾರಿಯಾಗುತ್ತದೆ. ಬೆಟ್ಟದ ಬಳಗದಿಂದ ಮಹಾಭಿಷೇಕ ಕಾರ್ಯವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಪೂಜೆ ಆರಂಭಕ್ಕೂ ಮುನ್ನ ಯದುವಂಶದ ಹೆಸರಿನಲ್ಲಿ ಸಂಕಲ್ಪವನ್ನು ಕೂಡ ಮಾಡಲಾಗುತ್ತದೆ,'' ಎಂದು ಬೆಟ್ಟದ ಬಳಗದ ಕಾರ್ಯದರ್ಶಿ ಪ್ರಕಾಶನ್ ತಿಳಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications