ಮೈಸೂರಿನಲ್ಲಿ ಹೊಸವರ್ಷಕ್ಕೆ 2 ಲಕ್ಷ ಲಡ್ಡು ವಿತರಣೆ!
ಮೈಸೂರು, ಡಿ. 30 : ಹೊಸ ವರ್ಷವನ್ನು ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಮೈಸೂರಿನ ಯೋಗ ನರಸಿಂಹ ಸ್ವಾಮಿ ದೇವಾಲಯದಲ್ಲಿ ಹೊಸ ವರ್ಷದಂದು ಭಕ್ತರಿಗೆ ವಿತರಿಸಲು ಸುಮಾರು 2 ಲಕ್ಷ ಲಡ್ಡುಗಳನ್ನು ತಯಾರಿಸಲಾಗಿದೆ. ತಿರುಪತಿ ಲಡ್ಡುವಿನ ಶೈಲಿಯಲ್ಲಿರುವ ಈ ಲಾಡುಗಳನ್ನು ದೇವಾಲಯದ ಆಡಳಿತ ಮಂಡಳಿ 1994ರಿಂದ ಹೊಸ ವರ್ಷದಂದು ನಿರಂತರವಾಗಿ ವಿತರಣೆ ಮಾಡುತ್ತಿದೆ.
ಶ್ರೀ ಯೋಗ ನರಸಿಂಹ ಸ್ವಾಮಿ ದೇವಾಲಯದಲ್ಲಿ ಹೊಸ ವರ್ಷದಂದು ವಿಶ್ವಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಜ.1ರಂದು ತಿರುಪತಿ ಶೈಲಿಯ ಲಡ್ಡುಗಳನ್ನು ದೇವಾಲಯಕ್ಕೆ ಆಗಮಿಸಿದ ಎಲ್ಲಾ ಭಕ್ತರಿಗೆ ಹಂಚಲಾಗುತ್ತದೆ. ಈ ಬಾರಿ ಹಂಚಲು ಸುಮಾರು 2 ಲಕ್ಷ ಲಾಡುಗಳನ್ನು ತಯಾರಿಸಲಾಗಿದೆ.

ಡಿ.23ರಿಂದ ದೇವಾಲಯದ ಆವರಣದಲ್ಲಿ 50 ಮಂದಿ ಅಡುಗೆ ತಯಾರಕರು ಲಾಡುವನ್ನು ಮಾಡುವ ಕಾರ್ಯ ಕೈಗೊಂಡಿದ್ದರು. ಸದ್ಯ ಸುಮಾರು 2 ಲಕ್ಷ ಲಾಡು ತಯಾರಾಗಿದ್ದು ಭಕ್ತರಿಗೆ ಜನವರಿ 1ರಂದು ಹಂಚಲು ಸಿದ್ಧತೆ ನಡೆದಿದೆ. 1994ರಲ್ಲಿ ಮೊದಲ ಬಾರಿಗೆ ಲಡ್ಡು ಹಂಚುವ ಕಾರ್ಯವನ್ನು ದೇವಾಲಯದ ಆಡಳಿತ ಮಂಡಳಿ ಕೈಗೊಂಡಿತ್ತು. ನಂತರ ಪ್ರತಿವರ್ಷ ಅದನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ.
ಲಡ್ಡು ತಯಾರಿಕೆ ಹೇಗೆ : ದೇವಾಲಯದಲ್ಲಿ ಲಡ್ಡುಗಳನ್ನು ತಯಾರಿಸಲು ಸುಮಾರು 70 ಕ್ವಿಂಟಾಲ್ ಸಕ್ಕರೆ, 200 ಟಿನ್ ಎಣ್ಣೆ, 30 ಟನ್ ಗೋಡಂಬಿ, 100 ಕೆಜಿ ದ್ರಾಕ್ಷಿ, 150 ಕೆಜಿ ಡೈಮಂಡ್ ಷುಗರ್, 4 ಕೆಜಿ ಪಚ್ಚ ಕರ್ಪೂರ ಮುಂತಾದ ವಸ್ತುಗಳನ್ನು ಬಳಸಲಾಗಿದೆ ಎಂದು ಆಡಳಿತ ಮಂಡಳಿ ಸದಸ್ಯರಾದ ಎನ್.ಶ್ರೀನಿವಾಸನ್ ಮಾಹಿತಿ ನೀಡಿದ್ದಾರೆ.
ಜ.1ರಂದು ಬೆಳಗ್ಗೆ 6 ಗಂಟೆಯಿಂದ ದೇವಾಲಯದಲ್ಲಿ ವಿಶೇಷ ಪೂಜೆ ಆರಂಭವಾಗಲಿದೆ. ನೀವು ಹೊಸ ವರ್ಷದಂದು ದೇವಾಲಯಕ್ಕೆ ಭೇಟಿ ನೀಡಿ, ವಿಶ್ವಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಿ, ಲಾಡು ಪಡೆದು ಬನ್ನಿ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications