ಸಂಪರ್ಕ ಬೆಸೆದ ತೆಪ್ಪದಕಂಡಿಯ ತೂಗುಸೇತುವೆಯ ಕಂಡೆಯಾ?
ಮೈಸೂರು, ಜುಲೈ 02 : ಒಂದು ಕಾಲದಲ್ಲಿ ಕಾವೇರಿ ನದಿ ಉಕ್ಕಿಹರಿಯಿತೆಂದರೆ ಮೈಸೂರು ಮತ್ತು ಕೊಡಗಿನ ಗಡಿಭಾಗ ತೆಪ್ಪದಕಂಡಿಯ ಜನರು ಸಂಪರ್ಕ ಕಳೆದುಕೊಂಡು ಪರದಾಡಬೇಕಿತ್ತು. ನದಿ ದಾಟಿ ದಡ ಸೇರಬೇಕಾದವರು ಹತ್ತಾರು ಕಿ.ಮೀ. ಸುತ್ತಿಬಳಸಿ ತೆರಳಬೇಕಾಗಿತ್ತು.
ಬೇಸಿಗೆಯ ದಿನಗಳಲ್ಲಿ ತೆಪ್ಪ, ಪಾಂಡಿಯ ಮೂಲಕ ಒಂದು ದಡದಿಂದ ಮತ್ತೊಂದು ದಡಕ್ಕೆ ತೆರಳುತ್ತಿದ್ದವರು, ಮಳೆಗಾಲ ಆರಂಭವಾಗಿ ಕಾವೇರಿ ಉಕ್ಕಿಹರಿದಾಗ ಆತಂಕಕ್ಕೀಡಾಗಿ ಬಿಡುತ್ತಿದ್ದರು. ಮೈಸೂರು ಭಾಗದಿಂದ ಕೊಡಗಿನತ್ತ ಕೆಲಸಕ್ಕೆ ತೆರಳಬೇಕಾದ ಜನ ಮತ್ತು ಶಾಲೆಗೆ ತೆರಳಬೇಕಾದ ಮಕ್ಕಳು ನದಿದಾಟಲಾಗದೆ ಮನೆಯಲ್ಲೇ ಉಳಿಯುಂತಾಗಿತ್ತು. [ಕೊಡಗಿನ ಹಾರಂಗಿ, ಚಿಕ್ಲಿಹೊಳೆ ಜಲಾಶಯಗಳಲ್ಲಿ ಜೀವಕಳೆ!]

ನಮಗೊಂದು ಸೇತುವೆ ನಿರ್ಮಿಸಿಕೊಡಿ ಎಂದು ಮನವಿ ಮಾಡುತ್ತಾ ಬರುತ್ತಿದ್ದರೂ ಸರ್ಕಾರದಿಂದ ಯಾವುದೇ ರೀತಿಯ ಭರವಸೆ ದೊರೆಯದಿದ್ದಾಗ ತೆಪ್ಪದಕಂಡಿಯ ಜನ ತಮಗೆ ಬವಣೆ ತಪ್ಪಿದಲ್ಲ ಎಂದು ಗೊಣಗುತ್ತಾ ದಿನಕಳೆಯ ತೊಡಗಿದ್ದರು.
ಈ ವ್ಯಾಪ್ತಿಯಲ್ಲಿ ಹೆಚ್ಚಿನ ಜನರು ಕೂಲಿಕಾರ್ಮಿಕರಾಗಿದ್ದು, ಮೈಸೂರಿನ ಕೊಪ್ಪದಿಂದ ತೆಪ್ಪದಕಂಡಿ ಮೂಲಕ ಕೊಡಗಿನತ್ತ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಾರೆ. ಕೊಡಗು ಮತ್ತು ಮೈಸೂರು ಜಿಲ್ಲೆಯನ್ನು ಕಾವೇರಿ ನದಿ ಬೇರ್ಪಡಿಸಿದ್ದು, ನದಿ ದಾಟಿದರೆ ಕೂಗಳತೆಯ ದೂರ. ಆದರೆ ಸುತ್ತಿಬಳಸಿ ತೆರಳುವುದಾದರೆ ಹತ್ತಾರು ಕಿ.ಮೀ. ಸಾಗಬೇಕಾಗುತ್ತದೆ. [ಕೊಡಗಿನಲ್ಲಿ ಆರಿದ್ರಾ ಮಳೆಗೆ ಮಲ್ಲಳ್ಳಿಯಲ್ಲಿ ಜಲನರ್ತನ]

ಮೊದಲಿನಿಂದಲೂ ಮರೂರು, ರಾಣಿಗೇಟ್, ದೊಡ್ಡೆಹೊಸೂರು, ದೊಡ್ಡರವೆ ಸೇರಿದಂತೆ ಹಲವು ಗ್ರಾಮಗಳ ಜನರು ಈ ತೆಪ್ಪದಕಂಡಿ ಮೂಲಕವೇ ಸಾಗಬೇಕಾಗಿತ್ತು. ಕೆಲ ವರ್ಷಗಳ ಹಿಂದಿನ ತನಕವೂ ಬಿದಿರಿನ ತೆಪ್ಪ ಬಳಸಿ ಜನ ನದಿದಾಟುತ್ತಿದ್ದರು. ಹೀಗಾಗಿ ಇದನ್ನು ತೆಪ್ಪದಕಂಡಿ ಎಂದೇ ಕರೆಯುವುದು ರೂಢಿಯಾಗಿತ್ತು.
ಕಾಂಕ್ರಿಟ್ನ ಸೇತುವೆ ಕಟ್ಟುವುದು ಸುಲಭದ ಮಾತಾಗಿರಲಿಲ್ಲ. ಇದಕ್ಕೆ ಕೋಟ್ಯಂತರೂ ಹಣ ಖರ್ಚಾಗುತ್ತಿತ್ತು. ಕೆಲವೇ ಗ್ರಾಮಗಳ ಅನುಕೂಲಕ್ಕಾಗಿ ಅಷ್ಟೊಂದು ಹಣ ಖರ್ಚು ಮಾಡಿ ಸೇತುವೆ ನಿರ್ಮಾಣ ಮಾಡಲು ಸರ್ಕಾರ ತಯಾರಿರಲಿಲ್ಲ. ಆಗ ಕಡಿಮೆ ಖರ್ಚಿನಲ್ಲಿ ಸಂಪರ್ಕ ನೀಡುವುದು ಹೇಗೆ ಎಂದು ಯೋಚಿಸುತ್ತಿದ್ದವರಿಗೆ ಮೊದಲು ನೆನಪಿಗೆ ಬಂದಿದ್ದು ತೂಗುಸೇತುವೆ. [ಕೊಡಗಿನಲ್ಲಿ ಕುಂಭದ್ರೋಣ ಮಳೆ, ಭಾಗಮಂಡಲ ಜಲಾವೃತ]

ಅವತ್ತು ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸದಾನಂದಗೌಡರಿದ್ದರು. ಅವರ ಪತ್ನಿಯ ತವರು ಕೂಡ ಅದೇ ಭಾಗದಲ್ಲಿದ್ದುದರಿಂದ ಅವರಿಗೆ ಅಲ್ಲಿನ ಸಮಸ್ಯೆಯ ಅರಿವಿತ್ತು. ಹೀಗಾಗಿ ಅವರು ವಿಶೇಷ ಆದ್ಯತೆ ನೀಡಿದರು. ಪರಿಣಾಮ ಸುಳ್ಯದ ಇಂಜಿನಿಯರ್ ಗಿರೀಶ್ ಭಾರಧ್ವಾಜ್ ಅವರ ನೇತೃತ್ವದಲ್ಲಿ ತೂಗು ಸೇತುವೆ ನಿರ್ಮಾಣ ಮಾಡಲಾಯಿತು. ಈಗ ನದಿ ಉಕ್ಕಿ ಹರಿದರೂ ಜನ ಯಾವುದೇ ಆತಂಕವಿಲ್ಲದೆ ನದಿ ದಾಟಿ ತಮ್ಮ ನಿತ್ಯದ ಕೆಲಸಗಳಿಗೆ ತೆರಳುತ್ತಾರೆ.
ಇದೀಗ ಕಾವೇರಿ ಉಕ್ಕಿ ಹರಿಯುತ್ತಿರುವುದರಿಂದ ಈ ಸುಂದರ ರಮಣೀಯ ದೃಶ್ಯವನ್ನು ನೋಡಲು ತೂಗುಸೇತುವೆ ಕಡೆಗೆ ಬರುತ್ತಿದ್ದಾರೆ. ಕಾವೇರಿ ನಿಸರ್ಗಧಾಮದಿಂದ ದುಬಾರೆಯತ್ತ ತೆರಳುವವರು, ಅಥವಾ ಇದೆರಡು ಸ್ಥಳಗಳಿಂದ ಕೊಪ್ಪದ ಗೋಲ್ಡನ್ ಟೆಂಪಲ್ಗೆ ತೆರಳುವ ಪ್ರವಾಸಿಗರು ಈ ಸೇತುವೆ ಮೂಲಕ ತೆರಳುವುದಾದರೆ ಕೇವಲ 3 ಕಿ.ಮೀ. ದೂರವಷ್ಟೆ. ಇದೀಗ ಈ ತೆಪ್ಪದಕಂಡಿಯ ಜನರು ತಮ್ಮ ಹಿಂದಿನ ಕಷ್ಟದ ದಿನಗಳನ್ನು ನೆನಪಿಸಿಕೊಳ್ಳುತ್ತಾ ಈಗಿನ ನೆಮ್ಮದಿಯ ಬದುಕಿಗೆ ಖುಷಿಪಡುತ್ತಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications