ಆರು ತಿಂಗಳುಗಳ ಬಳಿಕ ಬೆಳಕು ಕಂಡ ಮೈಸೂರು ಹೊರವರ್ತುಲ ರಸ್ತೆ!
ಮೈಸೂರು, ಮೇ 8: ಮೈಸೂರಿನ ಹೊರವರ್ತುಲ ರಸ್ತೆ ಮತ್ತೆ ಬೆಳಕು ಕಂಡಿದೆ. ಹೌದು ವಿದ್ಯುತ್ ಬಾಕಿ ಪಾವತಿ ಮಾಡದೇ ಇದ್ದುದರಿಂದ ಕಳೆದ ನವೆಂಬರ್ ತಿಂಗಳಿನಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದರಿಂದ ಹೊರ ವರ್ತುಲ ರಸ್ತೆ ಕತ್ತಲಲ್ಲಿ ಇತ್ತು. ಇದೀಗ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಸೂಚನೆ ಮೇರೆಗೆ ಮೈಸೂರಿನ ಹೊರವರ್ತುಲ ರಸ್ತೆ ಮತ್ತೆ ಬೆಳಕು ಕಂಡಿದೆ.
ವಿದ್ಯುತ್ ಬಿಲ್ಲು ಬಾಕಿ ಉಳಿಸಿಕೊಂಡಿದ್ದರಿಂದ ಹೊರ ವರ್ತುಲ ರಸ್ತೆಯ ವಿದ್ಯುತ್ ದೀಪಗಳಿಗೆ ಕಳೆದ ನವೆಂಬರ್ ನಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ಇದರಿಂದ ರಾತ್ರಿ ವೇಳೆ ಈ ರಸ್ತೆಯಲ್ಲಿ ಕತ್ತಲೆ ಆವರಿಸಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿತ್ತು.

ಗುರುವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಮುಡಾ ಸಭೆ ನಡೆಸಿದ ವೇಳೆ ಈ ಸಮಸ್ಯೆ ಗಮನಕ್ಕೆ ಬಂದಿತ್ತು. ಬಾಕಿ ಇರುವ ಸುಮಾರು 1.5 ಕೋಟಿ ವಿದ್ಯುತ್ ಬಿಲ್ಲನ್ನು ಪಾವತಿಸುವಂತೆ ಸಚಿವದ್ವಯರು ಸೂಚನೆ ನೀಡಿದ್ದರು. ಅದೇ ರೀತಿ ತಕ್ಷಣವೇ ವಿದ್ಯುತ್ ಸಂಪರ್ಕ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೂ ಸೂಚನೆ ನೀಡಿದ್ದರು.

ಸರ್ಕಾರ ವಿದ್ಯುತ್ ಬಾಕಿ ಪಾವತಿ ಮಾಡಿದ್ದರ ಫಲವಾಗಿ ಸುಮಾರು 44 ಕಿ.ಮೀ.ಉದ್ದದ ಮೈಸೂರು ಹೊರವರ್ತುಲ ರಸ್ತೆ ಈಗ ಬೆಳಕು ಕಂಡಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications