ಮೈಸೂರಿನ ಅಭಿವೃದ್ಧಿಯಲ್ಲಿ ಸ್ಥಳಿಯ ಪತ್ರಿಕೆಗಳ ಪಾತ್ರ ದೊಡ್ಡದು: ಸಿಎಂ ಬೊಮ್ಮಾಯಿ
ಮೈಸೂರು, ಅಕ್ಟೋಬರ್ 06: ಸಾಂಸ್ಕೃತಿಕ ನಗರಿ ಮೈಸೂರು ನಗರದಲ್ಲೇ ಸ್ಥಾಪಿತವಾಗಿರುವ ಹತ್ತು ಹಲವು ಪತ್ರಿಕೆಗಳು ನಾಲ್ಕೈದು ದಶಕಗಳಿಂದ ಈ ನಗರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ರಾಜ್ಯ ಮಟ್ಟದ ಪತ್ರಿಕೆಗಳ ಜತೆಗೆ ಪ್ರಾದೇಶಿಕ ಪತ್ರಿಕೆಗಳೂ ಅಭಿವೃದ್ಧಿಗೆ ತಮ್ಮ ಆದ ಕೊಡುಗೆಗಳನ್ನು ನೀಡಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಲ್ಲಿನ ರಾಮಕೃಷ್ಣ ನಗರದಲ್ಲಿ ಆಯೋಜನೆ ಮಾಡಿದ್ದ ಮೈಸೂರು ದಿಗಂತ ಪ್ರಾದೇಶಿಕ ಸಂಜೆ ದಿನಪತ್ರಿಕೆ ಹಾಗೂ ಇಂದ್ರಲೋಕ ಸಭಾಭವನ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ಅಂತಾರಾಷ್ಟ್ರೀಯ ಮಟ್ಟದ ನಗರವಾಗಿದೆ. ಚಾಮುಂಡೇಶ್ವರಿ ನೆಲೆಯೂರಿರುವ ಭಕ್ತಿಭಾವದ ನಗರ. ಕರ್ನಾಟಕದ ರಾಜ ಮನೆತನದ ಕೇಂದ್ರಸ್ಥಳ, ನೈಸರ್ಗಿಕವಾಗಿ ನೀರು-ಗಾಳಿ-ಹಸಿರನ್ನು ಪಡೆದುಕೊಂಡಿರುವ ಶ್ರೇಷ್ಠ ನಗರ. ಕಷ್ಟ ಕಾಲದಲ್ಲಿ ಪ್ರಾರಂಭವಾದ ಪತ್ರಿಕೆಗಳು ಈಗ ರಜತ ಮಹೋತ್ಸವ, ಸುವರ್ಣ ಮಹೋತ್ಸವ ಆಚರಿಸಿಕೊಂಡಿದೆ. ಕರ್ನಾಟಕಕ್ಕೆ ಶ್ರೇಷ್ಠ ಪತ್ರಕರ್ತರನ್ನು ಕೊಡುಗೆಯಾಗಿ ಕೊಟ್ಟಿರುವುದು ಈ ಮೈಸೂರು ನಗರ ಎಂದು ಅವರು ತಿಳಿಸಿದರು.
ಬೆಂಗಳೂರಿನ ನಂತರ ಕರ್ನಾಟಕದಲ್ಲಿ ಪತ್ರಕರ್ತರು ಕ್ರಿಯಾಶೀಲವಾಗಿ ನಡೆದುಕೊಂಡಿರುವುದು ಹಾಗೂ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವುದು ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಮಾತ್ರ. ಇಂತಹ ಮೈಸೂರಿನಲ್ಲಿ ಮೈಸೂರು ದಿಗಂತ ಪತ್ರಿಕೆ ತನ್ನದೇ ಆದ ಹೆಜ್ಜೆ ಗುರುತು ಇಟ್ಟಿದೆ. ಬಹಳಷ್ಟು ಪತ್ರಿಕೆಗಳು ಶುರುವಾದಷ್ಟೇ ವೇಗದಲ್ಲಿ ಮುಚ್ಚಿರುವ ಉದಾಹರಣೆ ಇರುವ ಸಂದರ್ಭದಲ್ಲಿ ಈ ಪತ್ರಿಕೆ ಸಂಪಾದಕರು ಕೇವಲ ಉದ್ಯಮ ಮಾಡದೇ ಸಾಹಸ ಮಾಡಿದ್ದಾರೆ. ಎಲ್ಲ ಕಷ್ಟಗಳನ್ನು ಎದುರಿಸಿ ಯಶಸ್ವಿಯಾಗಿ ನಡೆಸುತ್ತಿರುವ ಮಳಲಿ ಅವರಿಗೆ ನನ್ನ ಅಭಿನಂದನೆಗಳು ಎಂದರು.
ರಾಜಕಾರಣಿ-ಮಾಧ್ಯಮಗಳು ಗಂಡ ಹಂಡತಿ ಇದ್ದಂತೆ
ಪ್ರಜಾಪ್ರಭುತ್ವದಲ್ಲಿ ಮಾಧ್ಯಮವು ಅತ್ಯಂತ ಅವಶ್ಯಕ. ಮಾಧ್ಯಮವು ಎರಡು ರೀತಿಯಲ್ಲಿ ಕೆಲಸ ಮಾಡುತ್ತವೆ. ಜನರ ಭಾವನೆಗಳನ್ನು ಆಡಳಿತ ಮಾಡುವವರಿಗೆ ತಿಳಿಸುವುದು ಒಂದು ಕಡೆ ಆದರೆ, ಆಡಳಿತಗಾರರ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವಂತಹುದು ಮತ್ತೊಂದು. ರಾಜಕಾರಣಿಗಳ ಮತ್ತು ಮಾಧ್ಯಗಳ ಸಂಬಂಧ ಗಂಡ - ಹೆಂಡತಿ ಇದ್ದಂತೆ. ಪರಸ್ಪರ ಜಗಳ ಆಡಿದರೂ ಒಬ್ಬರನ್ನೊಬ್ಬರು ಬಿಡುವುದಿಲ್ಲ. ಇಬ್ಬರಲ್ಲೂ ಸತ್ಯವಾದುದನ್ನು ಜನರಿಗೆ ಮುಟ್ಟಿಸುವಂತಹ ಸಂಬಂಧ ಇರಬೇಕು. ತಪ್ಪು ಮಾಡಿದಾಗ ಎತ್ತಿ ತೋರಿಸುವ ಸ್ವಾತಂತ್ರ್ಯವೂ ಇರಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜಕಾರಣ ಮತ್ತು ಆಡಳಿತವನ್ನು ಪತ್ರಕರ್ತರು ಅರೆದು ಕುಡಿಯಬೇಕು. ಆಗ ಮಾತ್ರ ಸರಿಯಾದ ಚಿತ್ರಣವನ್ನು ಜನರಿಗೆ ಕೊಡಲು ಸಾಧ್ಯ. ಇವತ್ತಿನ ಮೀಡಿಯಾ ಹೌಸ್ಗಳ ಮಾಲೀಕರ ಉದ್ದೇಶವೇ ಜನರ ಉದ್ದೇಶ ಆಗಿರುವುದಿಲ್ಲ. ಆದ್ದರಿಂದ ಪತ್ರಕರ್ತರು ಸೂಕ್ಷ್ಮತೆಯನ್ನು ಕಾಪಾಡಿಕೊಳ್ಳಬೇಕು. ಜನರ ಭಾವನೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟಾಗ ಮಾತ್ರ ಪತ್ರಿಕಾ ಧರ್ಮ ಕಾಪಾಡಿಕೊಳ್ಳಬಹುದು. ಎಲ್ಲರೂ ಜನಹಿತಕ್ಕಾಗಿ ಕೆಲಸ ಮಾಡಿದಾಗ ಮಾತ್ರ ಪ್ರಜಾಭುತ್ವದ ನಾಲ್ಕು ಕಂಬಗಳು ಅದನ್ನು ಎತ್ತಿಹಿಡಿಯಲು ಸಾಧ್ಯ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕರುಗಳಾದ ಜಿ.ಟಿ. ದೇವೇಗೌಡ ಮತ್ತು ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ತಿಮ್ಮಯ್ಯ, ಸಂಪಾದಕ ಮಳಲಿ ನಟರಾಜ್ ಕುಮಾರ್, ಹಿರಿಯ ಪತ್ರಕರ್ತ ಶಿವಾನಂದ್ ತಗಡೂರು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications