ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದುವರಿದ ಜಿಲ್ಲಾಧಿಕಾರಿ ಹಾಗೂ ಶಾಸಕರ ಮುಸುಕಿನ ಗುದ್ದಾಟ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 13: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕೆ.ಆರ್ ನಗರ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ನಡುವಿನ ವಾಕ್ ಸಮರ ಮತ್ತೆ ಮುಂದುವರಿದಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಸಾ.ರಾ ಮಹೇಶ್, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆ ಅಕ್ಷಮ್ಯ ಮತ್ತು ಖಂಡನೀಯ. ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಬಿಂಬಿಸಿಕೊಳ್ಳುತ್ತಿರುವ ಇವರು ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಷ್ಟಾಚಾರ ಮರೆತರಾ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ?ಶಿಷ್ಟಾಚಾರ ಮರೆತರಾ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ?

ಈ ಹಿಂದೆ ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ತಮ್ಮ ದಿಢೀರ್ ವರ್ಗಾವಣೆಗೆ ನ್ಯಾಯ ಕೇಳಲು KAT ಮೊರೆ ಹೋಗಿದ್ದ ಇದೇ ಅಧಿಕಾರಿ, ಮೈಸೂರಿನಲ್ಲಿ ಉಲ್ಟಾ ಹೊಡೆದ ಕಥೆ ಇಡೀ ನಾಡಿಗೆ ಗೊತ್ತಿದೆ ಎಂದಿದ್ದಾರೆ.

Mysuru: The Giggle Of The Continued DC Rohini Sindhuri And MLA Sa Ra Mahesh

ಇಂಥವರಿಂದ ನಾನು ಪಾಠ ಕಲಿಯಬೇಕಿಲ್ಲ. ತನಗೊಂದು ನ್ಯಾಯ, ಪರರಿಗೊಂದು ನ್ಯಾಯ ಎನ್ನುವ ಇಂತಹ ಅಧಿಕಾರಿ, ಸಾಂವಿಧಾನಿಕ ಸಂಸ್ಥೆಗಳು, ಸಮಿತಿಗಳಿಗೆ ಯಾವ ರೀತಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಬೇಕೆಂದು ಸರ್ಕಾರ ಹೊರಡಿಸಿರುವ ಸುತ್ತೋಲೆಗಳನ್ನು ಓದಿ ಮೊದಲು ಅರ್ಥಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

"ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ ಕ್ರೋಧಿ ಈ ಲೋಕದ ಭುಂಜಕರು

Mysuru: The Giggle Of The Continued DC Rohini Sindhuri And MLA Sa Ra Mahesh

ನಾ ಹೆಚ್ಚು ತಾ ಹೆಚ್ಚು ಎಂದು ನಡೆದಾಡುವರಯ್ಯ

ನಾನು ನೀನೆಂಬ ಉಭಯವಳಿದು

ತಾನು ತಾನಾದುದ ನಾನಾರನೂ ಕಾಣೆನಯ್ಯ ಝೇಂಕಾರ ನಿಜಲಿಂಗಪ್ರಭುವೆ -ಜಕ್ಕಣಯ್ಯ' ಎಂದು ವಚನ ಉಲ್ಲೇಖಿಸುವ ಮೂಲಕ ಕಿಡಿಕಾರಿದ್ದಾರೆ.

English summary
The battle between Mysuru District Collector Rohini Sindhuri and KR Nagara JDS MLA Sa Ra Mahesh is continuing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X