ರೈತರಲ್ಲಿ ಭಯ ಹುಟ್ಟಿಸಿದ್ದ ಹುಲಿ ಬೋನಿಗೆ ಬಿತ್ತು
ಮೈಸೂರು, ಜೂನ್ 17: ಗ್ರಾಮೀಣ ಪ್ರದೇಶಗಳಲ್ಲಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ಭಯ ಹುಟ್ಟಿಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಎನ್.ಬೇಗೂರು ಅರಣ್ಯ ವಲಯದಲ್ಲಿ ಭಾನುವಾರ ಹುಲಿ ಸೆರೆಯಾಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಎನ್. ಬೇಗೂರು ಅರಣ್ಯ ವಲಯದ ಬಸಾಪುರ ಮತ್ತು ಕಳಸೂರು ಸಮೀಪದ ಜಮೀನೊಂದರಲ್ಲಿ ಹುಲಿ ಸೆರೆಗೆ ಬೋನನ್ನು ಇಡಲಾಗಿತ್ತು. ಅದರಲ್ಲಿ ಹುಲಿ ಸಿಕ್ಕಿಬಿದ್ದಿದ್ದರಿಂದ ಇದರ ಉಪಟಳಕ್ಕೆ ಒಳಗಾಗಿದ್ದ ತಾಲ್ಲೂಕಿನ ಬಸಾಪುರ, ಕಳಸೂರು, ಅಂತರಸಂತೆ, ಮೊತ್ತ, ಶಿರಮಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ನೆಮ್ಮದಿಯುಸಿರು ಬಿಡುವಂತಾಗಿದೆ.
ಸೆರೆ ಸಿಕ್ಕ ಹುಲಿಯು ಸುಮಾರು ಎಂಟು ವರ್ಷ ಪ್ರಾಯದಾಗಿದ್ದು, ಇದನ್ನು ಸೆರೆ ಹಿಡಿಯುವ ಸಲುವಾಗಿ ಅರಣ್ಯ ಇಲಾಖೆಯು ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಎನ್.ಬೇಗೂರು ಅರಣ್ಯ ವಲಯದ ಬಸಾಪುರ ಮತ್ತು ಕಳಸೂರು ಸಮೀಪದ ಜಮೀನಿನಲ್ಲಿ ಬೋನಿಟ್ಟು ಕಾಯುತ್ತಿತ್ತು. ಹುಲಿಯು ಆಹಾರ ಅರಸಿ ಬಂದ ವೇಳೆ ಬೋನಿಗೆ ಬಿದ್ದಿದೆ.

ಭಾನುವಾರ ಬೆಳಿಗ್ಗೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಹುಲಿ ಬೋನಿಗೆ ಬಿದ್ದಿರುವುದು ಗೊತ್ತಾಗಿ ಕೂಡಲೇ ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಹುಲಿಗೆ ವಯಸ್ಸಾದ ಕಾರಣ ಬೇಟೆಯಾಡುವ ಶಕ್ತಿ ಕಳೆದುಕೊಂಡಿದ್ದು, ಆಗಿಂದಾಗ್ಗೆ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಕಳೆದ ತಿಂಗಳು ಹಗಲು ಹೊತ್ತಿನಲ್ಲಿಯೇ ಬಸಾಪುರ ಮುಖ್ಯರಸ್ತೆಯಲ್ಲಿ ಹಸುವಿನ ಮೇಲೆ ದಾಳಿ ನಡೆಸಿತ್ತು. ಹುಲಿಯು ಜನರ ಮೇಲೆ ದಾಳಿ ನಡೆಸುವ ಸಾಧ್ಯತೆ ಇದ್ದಿದ್ದರಿಂದ ಅದನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿ ಬೋನನ್ನು ಇಟ್ಟಿದ್ದರು.
ವಿಷಯ ತಿಳಿದು ಸ್ಥಳಕ್ಕೆ ಎಸಿಎಫ್ ಪರಮೇಶ್ ಮತ್ತು ಆರ್ಎಫ್ಒ ಹನುಮಂತರಾಜು ಹಾಗೂ ಡಾ.ನಾಗರಾಜು ಭೇಟಿ ನೀಡಿದ್ದಾರೆ. ವಯಸ್ಸಾಗಿರುವ ಕಾರಣ ಹುಲಿಯನ್ನು ಮೈಸೂರಿನ ಕೂರ್ಗಳ್ಳಿ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಬಿಡಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications