ರೈತರಲ್ಲಿ ಭಯ ಹುಟ್ಟಿಸಿದ್ದ ಹುಲಿ ಬೋನಿಗೆ ಬಿತ್ತು
ಮೈಸೂರು, ಜೂನ್ 17: ಗ್ರಾಮೀಣ ಪ್ರದೇಶಗಳಲ್ಲಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ಭಯ ಹುಟ್ಟಿಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಎನ್.ಬೇಗೂರು ಅರಣ್ಯ ವಲಯದಲ್ಲಿ ಭಾನುವಾರ ಹುಲಿ ಸೆರೆಯಾಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಎನ್. ಬೇಗೂರು ಅರಣ್ಯ ವಲಯದ ಬಸಾಪುರ ಮತ್ತು ಕಳಸೂರು ಸಮೀಪದ ಜಮೀನೊಂದರಲ್ಲಿ ಹುಲಿ ಸೆರೆಗೆ ಬೋನನ್ನು ಇಡಲಾಗಿತ್ತು. ಅದರಲ್ಲಿ ಹುಲಿ ಸಿಕ್ಕಿಬಿದ್ದಿದ್ದರಿಂದ ಇದರ ಉಪಟಳಕ್ಕೆ ಒಳಗಾಗಿದ್ದ ತಾಲ್ಲೂಕಿನ ಬಸಾಪುರ, ಕಳಸೂರು, ಅಂತರಸಂತೆ, ಮೊತ್ತ, ಶಿರಮಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ನೆಮ್ಮದಿಯುಸಿರು ಬಿಡುವಂತಾಗಿದೆ.
ಸೆರೆ ಸಿಕ್ಕ ಹುಲಿಯು ಸುಮಾರು ಎಂಟು ವರ್ಷ ಪ್ರಾಯದಾಗಿದ್ದು, ಇದನ್ನು ಸೆರೆ ಹಿಡಿಯುವ ಸಲುವಾಗಿ ಅರಣ್ಯ ಇಲಾಖೆಯು ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಎನ್.ಬೇಗೂರು ಅರಣ್ಯ ವಲಯದ ಬಸಾಪುರ ಮತ್ತು ಕಳಸೂರು ಸಮೀಪದ ಜಮೀನಿನಲ್ಲಿ ಬೋನಿಟ್ಟು ಕಾಯುತ್ತಿತ್ತು. ಹುಲಿಯು ಆಹಾರ ಅರಸಿ ಬಂದ ವೇಳೆ ಬೋನಿಗೆ ಬಿದ್ದಿದೆ.

ಭಾನುವಾರ ಬೆಳಿಗ್ಗೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಹುಲಿ ಬೋನಿಗೆ ಬಿದ್ದಿರುವುದು ಗೊತ್ತಾಗಿ ಕೂಡಲೇ ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಹುಲಿಗೆ ವಯಸ್ಸಾದ ಕಾರಣ ಬೇಟೆಯಾಡುವ ಶಕ್ತಿ ಕಳೆದುಕೊಂಡಿದ್ದು, ಆಗಿಂದಾಗ್ಗೆ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಕಳೆದ ತಿಂಗಳು ಹಗಲು ಹೊತ್ತಿನಲ್ಲಿಯೇ ಬಸಾಪುರ ಮುಖ್ಯರಸ್ತೆಯಲ್ಲಿ ಹಸುವಿನ ಮೇಲೆ ದಾಳಿ ನಡೆಸಿತ್ತು. ಹುಲಿಯು ಜನರ ಮೇಲೆ ದಾಳಿ ನಡೆಸುವ ಸಾಧ್ಯತೆ ಇದ್ದಿದ್ದರಿಂದ ಅದನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿ ಬೋನನ್ನು ಇಟ್ಟಿದ್ದರು.
ವಿಷಯ ತಿಳಿದು ಸ್ಥಳಕ್ಕೆ ಎಸಿಎಫ್ ಪರಮೇಶ್ ಮತ್ತು ಆರ್ಎಫ್ಒ ಹನುಮಂತರಾಜು ಹಾಗೂ ಡಾ.ನಾಗರಾಜು ಭೇಟಿ ನೀಡಿದ್ದಾರೆ. ವಯಸ್ಸಾಗಿರುವ ಕಾರಣ ಹುಲಿಯನ್ನು ಮೈಸೂರಿನ ಕೂರ್ಗಳ್ಳಿ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಬಿಡಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications