ಯೋಜನೆಗೂ ಮುನ್ನವೇ ಟ್ರಿಣ್ ಟ್ರಿಣ್ ಸೈಕಲ್ ಕಳುವು
ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್ ಮುಂಭಾಗ ಡಾಕಿಂಗ್ ಹಬ್ ನಲ್ಲಿ ನಿಲ್ಲಿಸಿದ್ದ ಟ್ರಿಣ್ ಟ್ರಿಣ್ ಯೋಜನೆಯ ಎರಡು ಸೈಕಲ್ಗಳನ್ನು ಕಳ್ಳರು ಅಪಹರಿಸಿದ್ದಾರೆ.
ಮೈಸೂರು, ಮಾರ್ಚ್ 18: ಟ್ರಿಣ್ ಟ್ರಿಣ್ ಯೋಜನೆ ಜಾರಿಯಾಗುವ ಮುನ್ನವೇ ಎರಡು ಸೈಕಲ್ಗಳನ್ನು ಕಳ್ಳರು ಕದ್ದೊಯ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್ ಮುಂಭಾಗ ಡಾಕಿಂಗ್ ಹಬ್ ನಲ್ಲಿ ನಿಲ್ಲಿಸಿದ್ದ ಎರಡು ಸೈಕಲ್ಗಳನ್ನು ಕಳ್ಳರು ಅಪಹರಿಸಿದ್ದಾರೆ. ಒಂದು ವಾರದ ಹಿಂದೆ ಎರಡು ಸೈಕಲ್ಗಳನ್ನು ನಿಲ್ಲಿಸಿ ಅವುಗಳಿಗೆ ಬೀಗ ಹಾಕಲಾಗಿತ್ತು.[ಮೈಸೂರಿನಲ್ಲಿ ಪ್ರವಾಸಿಗರಿಗೆ ಬಾಡಿಗೆ ಸೈಕಲ್, ಕೇಳಲಿದೆ ಟ್ರಿಣ್-ಟ್ರಿಣ್]

ಬುಧವಾರ ರಾತ್ರಿ ಯಾರೋ ಅಪರಿಚಿತ ವ್ಯಕ್ತಿಯೋರ್ವ ರಾತ್ರಿ 12 ಗಂಟೆ ವೇಳೆಯಲ್ಲಿ ಬಂದು ಬಲಪ್ರಯೋಗದಿಂದ ಸೈಕಲ್ನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಸೈಕಲ್ ನಿರ್ವಹಣೆ ಮಾಡುತ್ತಿರುವ ಸಾಗರ್ ಎಂಬುವರು ಅಶೋಕಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೈಸೂರು ನಗರದ ಹಲವೆಡೆ ಡಾಕಿಂಗ್ ಹಬ್ ನಿರ್ಮಿಸಲಾಗಿದ್ದು, ಇದಕ್ಕೆ ಸೂಕ್ತ ಭದ್ರತೆ ಕಲ್ಪಿಸುವ ಅಗತ್ಯವಿದೆ. ಇಲ್ಲದಿದ್ದಲ್ಲಿ ಎಷ್ಟು ಸೈಕಲ್ ಗಳು ಕೈತಪ್ಪಿ ಹೋಗಲಿವೆಯೋ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ರಾಜ್ಯಸರ್ಕಾರ ಗ್ಲೋಬಲ್ ಎನ್ವಿರಾನ್ ಮೆಂಟ್ ಫೆಸಿಲಿಟಿ ಗ್ರ್ಯಾಂಟ್ ಹಾಗೂ ಮೈಸೂರು ನಗರಪಾಲಿಕೆ ಸಹಯೋಗದಲ್ಲಿ ಟ್ರಿಣ್ ಟ್ರಿಣ್ ಪಬ್ಲಿಕ್ ಬೈಸಿಕಲ್ ಶೇರಿಂಗ್ ಪರಿಸರ ಸ್ನೇಹಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿತ್ತು. ಪ್ರವಾಸಿಗರಿಗೆ ಮತ್ತು ವಾಹನದ ಅಗತ್ಯ ಇರುವವರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ರೂಪಿಸಿದ ಈ ಪರಿಸರ ಸ್ನೇಹಿ ಯೋಜನೆಗೆ ಆರಂಭದಲ್ಲೇ ವಿಘ್ನ ಬಂದಿರುವುದು ನಿಜಕ್ಕೂ ಶೋಚನೀಯ ಎನ್ನಿಸಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications