ಎಚ್.ಡಿ.ಕೋಟೆ ರೆಸಾರ್ಟ್ ರೂಂನಲ್ಲಿ ಕಳ್ಳತನ; 24 ಗಂಟೆಯಲ್ಲಿ ಸಿಕ್ಕಿಬಿದ್ದ ಆರೋಪಿ
ಮೈಸೂರು, ನವೆಂಬರ್ 23: ವಾರಾಂತ್ಯ ಕಳೆಯಲು ಬೆಂಗಳೂರಿನಿಂದ ಬಂದು ಕಬಿನಿ ಹಿನ್ನೀರಿನ ಸಮೀಪದ ರೆಸಾರ್ಟ್ವೊಂದರಲ್ಲಿ ವಾಸ್ತವ್ಯ ಹೂಡಿದ್ದ ಪ್ರವಾಸಿಗರೊಬ್ಬರ ಚಿನ್ನಾಭರಣ, ಹಣ, ಲ್ಯಾಪ್ ಟಾಪ್ ಕಳುವಾಗಿರುವ ಘಟನೆ ಎಚ್.ಡಿ. ಕೋಟೆ ತಾಲ್ಲೂಕಿನಲ್ಲಿ ನಡೆದಿದ್ದು, ಪ್ರಕರಣವನ್ನು 24 ಗಂಟೆಯೊಳಗೆ ಭೇದಿಸಿರುವ ಪೊಲೀಸರು, ಓರ್ವವನ್ನು ಬಂಧಿಸುವ ಜತೆಗೆ 5 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ಬದನಕುಪ್ಪೆ ಗ್ರಾಮದ ಜಯರಾಜು (35) ಬಂಧಿತ ಆರೋಪಿ. ನ.21ರಂದು ಎಚ್.ಡಿ.ಕೋಟೆ ತಾಲೂಕಿನ ಬದನಕುಪ್ಪೆ ಗ್ರಾಮದ ಬಳಿಯ ರ ರೆಸಾರ್ಟ್ ನ ಕೊಠಡಿಯೊಂದರಲ್ಲಿ ಕಳ್ಳತನ ನಡೆದ ಬಗ್ಗೆ ತಾಲೂಕಿನ ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೈಸೂರು; ಕಾರ್ಮಿಕರಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರ ಬಂಧನ
ಬೆಂಗಳೂರಿನ ಸುಧೀರ್ ಯಜವತ್ ಎಂಬುವವರು ಶನಿವಾರ ಬಂದು ಬದನಗುಪ್ಪೆ ಗ್ರಾಮದಲ್ಲಿರುವ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದರು. ಅದೇ ದಿನ ರಾತ್ರಿ ಊಟಕ್ಕೆಂದು ರೆಸಾರ್ಟ್ ನ ಡೈನಿಂಗ್ ಹಾಲ್ ಗೆ ಹೋಗಿದ್ದಾಗ ಇವರ ರೂಮಿನಿಂದ 60 ಸಾವಿರ ನಗದು, ಚಿನ್ನದ ಕೈ ಚೈನ್, ಲ್ಯಾಪ್ ಟಾಪ್ ಕಳುವಾಗಿತ್ತು.
ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ತಾಲೂಕಿನ ಹ್ಯಾಂಡ್ ಪೋಸ್ಟ್ ಬಳಿ ಆರೋಪಿ ಜಯರಾಜ್ ನನ್ನು ಬಂಧಿಸಿ, ವಿಚಾರಣೆ ನಡೆಸಿದ ಸಂದರ್ಭ ಆರೋಪಿಯು ಕಳ್ಳತನ ಮಾಡಿದ್ದ 5 ಲಕ್ಷ ರೂ. ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯರಾಜು ಈ ಹಿಂದೆ ಇದೇ ರೆಸಾರ್ಟ್ ನಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದು, ಈ ವೇಳೆ ಅಲ್ಲಿನ ವ್ಯವಸ್ಥೆಗಳ ಬಗ್ಗೆ ತಿಳಿದುಕೊಂಡು ಈ ಕೃತ್ಯವೆಸಗಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.