ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗಿದೆ ಥೀಮ್ ಸಾಂಗ್
ಮೈಸೂರು, ನವೆಂಬರ್ 18 : ಮಲ್ಲಿಗೆ ನಗರಿ ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾಹಿತ್ಯಾಸಕ್ತರಿಗೆ ಸ್ವಾಗತ ಕೋರುವ ಸಮ್ಮೇಳನದ ಥೀಮ್ ಸಾಂಗ್ 'ಸ್ವಾಗತ, ಸುಸ್ವಾಗತ' ಸೋಮವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಾಗಲಿದೆ.
ಅದ್ಧೂರಿಯಾಗಿ ಸಮ್ಮೇಳನವನ್ನು ಆಯೋಜನೆ ಮಾಡಲು ನಿರ್ಧರಿಸಲಾಗಿದ್ದು, ಸಮ್ಮೇಳನದ ಪ್ರಚಾರ ಸಮಿತಿ 'ಸ್ವಾಗತ, ಸುಸ್ವಾಗತ' ಥೀಮ್ ಸಾಂಗ್ ಮೂಲಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯಾಸಕ್ತರನ್ನು ಸೆಳೆಯುವ ಯತ್ನ ಮಾಡಿದೆ.

ನಾಗೇಶ್ ಕಂದೇಗಾಲ ತಂಡದ ಯತ್ನ:
ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಸಹಕಾರ ದೊಂದಿಗೆ ರಚಿಸಲಾಗಿರುವ 'ಸ್ವಾಗತ, ಸುಸ್ವಾಗತ' ಥೀಮ್ ಸಾಂಗ್ನ್ನು ನಾಗೇಶ್ ಕಂದೇಗಾಲ ತಂಡದವರು ಸುಶ್ರಾವ್ಯವಾಗಿ ಹಾಡಿದ್ದಾರೆ. ಥೀಮ್ ಸಾಂಗ್ನ ಆಡಿಯೋ ಈಗಾಗಲೇ ವಾಟ್ಸಾಪ್ನಲ್ಲಿ ಓಡಾಡುತ್ತಿದೆ. ಸಮ್ಮೇಳನದ ಪ್ರಚಾರ ಸಮಿತಿ ಥೀಮ್ ಸಾಂಗ್ನ ವಿಡಿಯೋವನ್ನು ಯೂ ಟ್ಯೂಬ್, ಫೇಸ್ಬುಕ್, ಟ್ವಿಟರ್ನಲ್ಲಿ ಅಪ್ಲೋಡ್ ಮಾಡಲಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ನ್ನು ಸ್ಥಾಪಿಸಿದ ಕಾರಣ ಅವರನ್ನು ಸ್ಮರಿಸುವ, ಮೈಸೂರು ಎಂದರೆ ನೆನಪಾ ಗುವ ರಾಷ್ಟ್ರಕವಿ ಕುವೆಂಪು ಅವರನ್ನು ಇಲ್ಲಿ ನೆನೆಯುವ ಯತ್ನ ಮಾಡಲಾಗಿದೆ. ಇದರ ಜೊತೆಗೆ ಇತರ ಕವಿಗಳನ್ನು ಸ್ಮರಿಸಲಾಗಿದೆ.
''ಶ್ರೀ ನಾಲ್ವಡಿಯ ಅವರ ಸ್ಮರಿಸುತಾ
ಕುವೆಂಪು ಅವರ ನೆನೆಯುತಾ
ನುಡಿ ದೀವಿಗೆಯ ಬೆಳಗಿಸಿದ
ಕವಿಪುಂಗವರಿಹೆ ನಮಿಸುತಾ...
ಒಳನಾಡು ಗಡಿನಾಡು ಎಲ್ಲ ಕಡೆ
ಮೊಳಗಲಿ ಕನ್ನಡದ ಕಹಳೆ....
ಕನ್ನಡ ನೆಲ ಜಲ ಭಾಷೆಯ
ಸಂಕೋಲೆಗಳ ಬಿಡಿಸುವಂಥ
ಕಲೆ ಸಂಗೀತ ಜನಪದದ
ವಿಶ್ವದಾದ್ಯಂತ ಪಸರಿಸುತಾ
ಹಳೆ ಬೇರು ಹೊಸ ಚಿಗುರು ಜೊತೆಯಾಗಿ
ಸಾಹಿತ್ಯದ ರಥವ ಎಳೆಯೋಣ...'' ಎನ್ನುವ ಆಶಯವನ್ನು ಥೀಮ್ ಸಾಂಗ್ ಸಾರುವ ಯತ್ನ ಮಾಡಿದೆ. ಉತ್ತಮ ಸಂಗೀತ ಸಂಯೋಜನೆಯೊಂದಿಗೆ ಮೂಡಿ ಬಂದಿರುವ ಥೀಮ್ ಸಾಂಗ್ ಸಾಹಿತ್ಯಾಸಕ್ತರಿಗೆ ಸ್ವಾಗತ ಕೋರುವ ಜೊತೆಗೆ ಮತ್ತೆ ಮತ್ತೆ ಗುನುಗುವಂತೆ ಮಾಡುತ್ತಿದೆ.
ಇನ್ನು ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಅರಮನೆಯೇ ಉಡುಗೊರೆ !
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಗಣ್ಯರಿಗೆ ಅರಮನೆ ಪ್ರತಿಕೃತಿ ಉಡುಗೊರೆಯಾಗಿ ಲಭಿಸಲಿದೆ. ಮೂರುವರೆ ಅಡಿ ಎತ್ತರದ ಅರಮನೆ ಪ್ರತಿಕೃತಿಯ ಪಕ್ಕದಲ್ಲಿ ಮಹಿಷಾಸುರ ವಿಗ್ರಹ ಹಾಗೂ ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ಇರಲಿವೆ.
ಉದ್ಘಾಟನೆ, ಸಮಾರೋಪ ಸಮಾರಂಭಗಳಲ್ಲಿ ಭಾಗವಹಿಸುವ ಮುಖ್ಯ ಅತಿಥಿಗಳು ಗಣ್ಯರು ಸಾಹಿತಿಗಳು ಹಾಗೂ ಸನ್ಮಾನಿತರಿಗೆ ಈ ಸ್ಮರಣಿಕೆ ನೀಡಲಾಗುತ್ತದೆ. ವಿವಿಧ ಗೋಷ್ಠಿಗಳಲ್ಲಿ ಪಾಲ್ಗೊಳ್ಳುವ ಸುಮಾರು 300 ಆಹ್ವಾನಿತರಿಗೆ ಸಮ್ಮೇಳನಾಧ್ಯಕ್ಷ ಹಾಗೂ ಜ್ಞಾನಪೀಠ ಪುರಸ್ಕೃತರ ಭಾವಚಿತ್ರ ಇರುವ ಸ್ಮರಣಿಕೆ ನೀಡಲು ವೇದಿಕೆ ನಿರ್ವಹಣಾ ಸಮಿತಿ ನಿರ್ಧರಿಸಿದೆ .
ಮೈಸೂರಿನಲ್ಲಿ ನಡೆಯುವ ಸಮ್ಮೇಳನ ಸದಾಕಾಲ ನೆನಪಿನಲ್ಲಿ ಉಳಿಯಬೇಕು. ಹೀಗಾಗಿ ಇಲ್ಲಿನ ಅರಮನೆಯ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡುತ್ತಿದ್ದೇವೆ. ಸ್ಮರಣಿಕೆಗಳ ವಿನ್ಯಾಸ ಅಂತಿಮ ಹಂತದಲ್ಲಿದೆ ಎಂದು ಪಾಲಿಕೆ ಆಯುಕ್ತ ಜಿ ಜಗದೀಶ್ ತಿಳಿಸಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications