ಮೈಸೂರಿನ ಡಿ.ಬಿ.ಕುಪ್ಪೆ ಆರೋಗ್ಯ ಕೇಂದ್ರದ ಔಷಧಿ ವಾಪಸ್!
ಕುಗ್ರಾಮಗಳಲ್ಲಿರುವ ಆರೋಗ್ಯ ಕೇಂದ್ರಗಳಿಗೆ ಕರ್ತವ್ಯಕ್ಕೆ ಬರಲು ವೈದ್ಯರು ತಯಾರಿಲ್ಲ. ಆದ್ದರಿಂದ ಬಡವರಿಗೆಂದು ಸರ್ಕಾರ ಕಳಿಸುವ ಔಷಧಗಳೂ ಉಪಯೋಗಕ್ಕೆ ಬರುತ್ತಿಲ್ಲ.
ಮೈಸೂರು, ಮಾರ್ಚ್ 22: ಗ್ರಾಮೀಣ ಜನರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದ ಸರ್ಕಾರ ಔಷಧಿಗಳನ್ನು ಪೂರೈಸುತ್ತಿರುವ ವಿಷಯ ಎಲ್ಲರಿಗೂ ಗೊತ್ತು. ಆದರೆ ಈ ಆರೋಗ್ಯ ಕೇಂದ್ರಗಳಿಗೆ ಸರ್ಕಾರ ವೈದ್ಯರನ್ನು ನೇಮಕ ಮಾಡದ ಹಿನ್ನಲೆಯಲ್ಲಿ ಔಷಧಿಯನ್ನು ರೋಗಿಗಳಿಗೆ ನೀಡಲಾಗದೆ ವಾಪಸ್ ಕೊಂಡೊಯ್ಯುತ್ತಿರುವ ಘಟನೆಗಳು ಮೈಸೂರಿನ ಡಿಬಬಿ.ಕುಪ್ಪೆ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ.
ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಬಡವರು, ಕೂಲಿ ಕಾರ್ಮಿಕರು ಇರುವುದರಿಂದ ಅವರ ಆರೋಗ್ಯವಲ್ಲದೆ ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಒತ್ತು ನೀಡಲಾಗಿದೆ. ಆದರೆ ಇವತ್ತು ಹೆಚ್ಚಿನ ಆರೋಗ್ಯ ಕೇಂದ್ರಗಳು ಇದ್ದೂ ಇಲ್ಲದಂತಾಗಿವೆ. ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು ನೇಮಕ ಮಾಡುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿದ್ದರೆ, ಮತ್ತೊಂದೆಡೆ ಕುಗ್ರಾಮಗಳಲ್ಲಿರುವ ಆರೋಗ್ಯ ಕೇಂದ್ರಗಳಿಗೆ ಕರ್ತವ್ಯಕ್ಕೆ ಬರಲು ವೈದ್ಯರು ತಯಾರಿಲ್ಲ. ಇಂತಹ ಹಗ್ಗಜಗ್ಗಾಟದಲ್ಲಿ ಬಡವರು ಸಿಕ್ಕಿ ನರಳಾಡುತ್ತಿದ್ದಾರೆ.[ಜೂನ್ ಆರಂಭದಲ್ಲಿ ಮೈಸೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ?!]

ಈ ನಡುವೆ ಎಚ್.ಡಿ.ಕೋಟೆ ತಾಲೂಕಿನ ಗಡಿಭಾಗದ ಗ್ರಾಮ ಡಿ.ಬಿ.ಕುಪ್ಪೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದ್ದ ಔಷಧಿಗಳನ್ನು ವಾಪಾಸ್ಸು ಪಡೆದ ಘಟನೆ ವರದಿಯಾಗಿದೆ. ಇದು ಅಚ್ಚರಿಯಾದರೂ ಸತ್ಯ. ಸಾಮಾನ್ಯವಾಗಿ ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧಿಗಳನ್ನು ಹಿಂಪಡೆಯವುದು ಮಾಮೂಲಿ. ಆದರೆ ಇಲ್ಲಿ ಔಷಧಿಗಳನ್ನು ವಾಪಸ್ ಪಡೆಯಲು ಕಾರಣ ಕೇಳಿದರೆ ನಿಜಕ್ಕೂ ಬೇಸರವಾಗುತ್ತದೆ.[ಎಚ್.ಡಿ.ಕೋಟೆಯಲ್ಲಿನ್ನೂ ಪತ್ತೆಯಾಗದ ಹುಲಿ, ಗ್ರಾಮಸ್ಥರಿಗಿಲ್ಲ ನೆಮ್ಮದಿ!]
ಕೆಲವರು ಹೇಳುವ ಪ್ರಕಾರ ಡಿ.ಬಿ.ಕುಪ್ಪೆ ಎಚ್.ಡಿ.ಕೋಟೆ ತಾಲೂಕಿನ ಗಡಿಯಂಚಿನಲ್ಲಿದ್ದು, ಕುಗ್ರಾಮವಾದ ಕಾರಣ ಯಾವ ವೈದ್ಯರೂ ಇಲ್ಲಿಗೆ ಬಂದು ಕರ್ತವ್ಯ ನಿರ್ವಹಿಸಲು ಒಪ್ಪುತ್ತಿಲ್ಲವಂತೆ. ಬಂದರೂ ರಜೆ ಮೇಲೆ ತೆರಳಿ ಬಳಿಕ ವರ್ಗಾವಣೆ ಮಾಡಿಸಿಕೊಂಡು ಹೋಗುತ್ತಾರೆ ಎನ್ನುವುದು ಕೆಲವರ ಆರೋಪ. ಹೀಗಾಗಿ ಇಲ್ಲಿಗೆ ಸರ್ಕಾರ ಔಷಧಿಯನ್ನು ಕಳುಹಿಸಿದರೂ ಜನರ ಉಪಯೋಗಕ್ಕೆ ಬರುತ್ತಿಲ್ಲ.[ಮೈಸೂರಿನಲ್ಲಿ ಮಂಡ್ಯರಮೇಶ್ ರಿಂದ ಬೇಸಿಗೆ ಶಿಬಿರ]

ಔಷಧಿಯನ್ನು ವಾಪಸ್ ಪಡೆದ ಬಗ್ಗೆ ಸ್ಪಷ್ಟನೆ ನೀಡಿರುವ ತಾಲೂಕು ಆರೋಗ್ಯಾಧಿಕಾರಿ ಡಾ. ಟಿ.ರವಿ ಅವರು ಡಿ.ಬಿ.ಕುಪ್ಪೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿಯೋಜನೆಗೊಳಿಸಿದ ವೈದ್ಯರು ಅಲ್ಲಿಗೆ ತೆರಳಿ ಕರ್ತವ್ಯ ಮಾಡಲು ನಿರಾಕರಿಸಿದ್ದಾರೆ. ಹಾಗಾಗಿ ಅಲ್ಲಿಗೆ ಸರಬರಾಜು ಮಾಡಿದ ಔಷಧಿಗಳು ಉಪಯೋಗಕ್ಕೆ ಬಾರದೆ ಉಳಿದುಕೊಂಡಿದ್ದವು. ಅವುಗಳನ್ನು ವಾಪಸ್ ಪಡೆದು ಬೇರೆ ಆರೋಗ್ಯ ಕೇಂದ್ರಗಳಿಗೆ ಸರಬರಾಜು ಮಾಡಲಾಗುತ್ತಿರುವುದಾಗಿ ಹೇಳಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications