ಮೈಸೂರಿನಲ್ಲಿ ಸುಖಾಸುಮ್ಮನೆ ಜಗಳ ಸೃಷ್ಟಿಸಿ 25 ಲಕ್ಷ ಎಗರಿಸಿದ ಖದೀಮರು
ಮೈಸೂರು, ಸೆಪ್ಟೆಂಬರ್. 24 : "ಏನೋ ಗಾಡಿಯಲ್ಲಿ ನಮಗೇ ಚಮಕ್ ಕೊಡುತ್ತೀಯಾ" ಎಂದು ಜಗಳ ಆರಂಭಿಸುವ ಮೂಲಕ ಮೂವರು ಖದೀಮರು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವರ್ತಕರೊಬ್ಬರ ಗಮನವನ್ನು ಬೇರೆಡೆ ಸೆಳೆದು 25 ಲಕ್ಷ ರೂ.ಗಳನ್ನು ದೋಚಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ವಿಜಯನಗರ 4ನೇ ಹಂತದ ನಿವಾಸಿ ಅರುಣ್ ಕುಮಾರ್ ಅವರೇ ಖದೀಮರ ವ್ಯವಸ್ಥಿತ ಲೂಟಿಯಲ್ಲಿ ಭಾರೀ ಮೊತ್ತವನ್ನು ಕಳೆದುಕೊಂಡವರು. ಅರುಣ್ ಕುಮಾರ್ ವಿದೇಶಿ ಕರೆನ್ಸಿ ವಿನಿಮಯ ವ್ಯವಹಾರ ನಡೆಸುತ್ತಿದ್ದು, ಶಿವರಾಂಪೇಟೆಯಲ್ಲಿ ಕಚೇರಿ ಹೊಂದಿದ್ದಾರೆ.
ತಮ್ಮ ಕಚೇರಿ ಮುಗಿದ ಬಳಿಕ ಆ ದಿನದ ವಹಿವಾಟಿನ ಮೊತ್ತವಾದ 19 ಲಕ್ಷ ರೂ. ಭಾರತೀಯ ಕರೆನ್ಸಿ ಮತ್ತು 6 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಟಿವಿಎಸ್ ಜ್ಯುಪಿಟರ್ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟುಕೊಂಡು ಮನೆಗೆ ವಾಪಸಾಗುತ್ತಿ ದ್ದರು.

ಅವರು ವಿಜಯನಗರ 1ನೇ ಹಂತ, 3ನೇ ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು, ಅರುಣ್ ಅವರನ್ನು ತಡೆದು ನಿಲ್ಲಿಸಿದ್ದಾರೆ. ನಂತರ ಜಗಳ ತೆಗೆದಿದ್ದಾರೆ. ಆಗ ಅರುಣ ಅವರು, ನಾನೆಲ್ಲಪ್ಪ ಚಮಕ್ ಕೊಟ್ಟೆ' ಎಂದಿದ್ದಾರೆ. ಆದರೂ ಇಬ್ಬರೂ ಖದೀಮರು ಜಗಳ ಮುಂದುವರಿಸಿದ್ದಾರೆ.
ಅಷ್ಟರಲ್ಲೇ ರಸ್ತೆ ಬದಿ ನಿಂತಿದ್ದ ಅವರದೇ ಗುಂಪಿನ ಮತ್ತೊಬ್ಬ ವ್ಯಕ್ತಿಯೂ ವಾಹನದ ಬಳಿ ಬಂದು ಅರುಣ್ ಅವರನ್ನು ಬೈಯ್ಯಲಾರಂಭಿಸಿದ್ದಾನೆ. ಆಗ ಅರುಣ್ ಅವರು ಹೊಸಬನಿಗೆ ಪ್ರತಿಕ್ರಿಯಿಸಲು ಮುಂದಾಗಿದ್ದಾರೆ.
ಇನ್ನು ಅದೇ ಸಮಯ ಕಾಯುತ್ತಿದ್ದ ಖದೀಮರಿಬ್ಬರು ಅರುಣ್ ಅವರ ದ್ವಿಚಕ್ರ ವಾಹನದ ಕೀಲಿಕೈ ಕಿತ್ತುಕೊಂಡಿದ್ದಾರೆ. ಅಷ್ಟರವರೆಗೂ ಸ್ಕೂಟರ್ ಮೇಲೇ ಕುಳಿತಿದ್ದ ಅರುಣ್ ಅವರನ್ನು ವಾಹನದಿಂದ ಕೆಳಕ್ಕೆ ದೂಡಿ ಬೀಳಿಸಿದ್ದಾರೆ.
ಕೆಳಕ್ಕೆ ಬಿದ್ದ ಅರುಣ್ ಮೇಲೆದ್ದು ಸಾವರಿಸಿಕೊಳ್ಳುವಷ್ಟರಲ್ಲೇ ಮತ್ತೊಬ್ಬ ದುಷ್ಕರ್ಮಿ ಅರುಣ್ ಅವರ ಸ್ಕೂಟರ್ ಸ್ಟಾರ್ಟ್ ಮಾಡಿಕೊಂಡು ಪರಾರಿಯಾಗಿದ್ದಾನೆ. ಉಳಿದಿಬ್ಬರು ಖದೀಮರೂ ಜಾಗ ಖಾಲಿ ಮಾಡಿದ್ದಾರೆ.
ಇದೆಲ್ಲದರಿಂದ ಆಘಾತಕ್ಕೊಳಗಾದ ಅರುಣ್ ಅವರು ನಡೆಯುತ್ತಲೇ ವಿಜಯನಗರ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ನಡೆದ ಘಟನೆಯನ್ನು ವಿವರಿಸಿದ್ದಾರೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶೋಧ ನಡೆಸಿದರೂ ಖದೀಮರ ತಂಡ ಪತ್ತೆಯಾಗಲಿಲ್ಲ.
ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ರಾತ್ರಿ ವೇಳೆ ನಗದು ಕೊಂಡೊಯ್ಯುವ ವರ್ತಕರನ್ನೇ ಗುರಿಯಾಗಿರಿಸಿಕೊಂಡು ಚಾಲಾಕಿತನದಿಂದ ದೋಚುವ ಹೊಸ ತಂಡ ಹುಟ್ಟಿಕೊಂಡಿರುವ ಶಂಕೆ ಮೂಡಿದೆ. ಪೊಲೀಸರ ತನಿಖೆಯಿಂದ ಈ ಬಗ್ಗೆ ಹೆಚ್ಚಿನ ವಿಚಾರ ತಿಳಿದು ಬರಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications