ಇದು ಪಾಕಿಸ್ತಾನವಲ್ಲ; ಮುಡಾ ಆಯುಕ್ತರಿಂದ ಮೆಕ್ಯಾನಿಕ್ಗೆ ಧಮ್ಕಿ
ಮೈಸೂರು, ಜೂನ್ 23: ಇದು ಪಾಕಿಸ್ತಾನ ಅಲ್ಲ, ಮೊದಲು ಜಾಗ ಖಾಲಿ ಮಾಡಿ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ನಟೇಶ್ ಬೆದರಿಕೆ ಹಾಕಿದ್ದಾರೆ ಎಂದು ಮೆಕ್ಯಾನಿಕ್ ಅತಾವುಲ್ಲಾ ಖಾನ್ ಆರೋಪಿಸಿದ್ದಾರೆ.
ಮೈಸೂರು ನಗರದ ದೇವರಾಜ ಅರಸು ರಸ್ತೆಗೆ ಹೊಂದಿಕೊಂಡಿರುವ ಜಾಗವೊಂದರ ವಿವಾದ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಅದರಲ್ಲಿ ಗ್ಯಾರೇಜ್ ಇಟ್ಟುಕೊಂಡಿರುವ ಅತಾವುಲ್ಲಾ ಮುಡಾ ಅಧಿಕಾರಿ ವಿರುದ್ಧ ಈ ರೀತಿಯ ಗಂಭೀರ ಆರೋಪ ಮಾಡಿದ್ದಾರೆ.
ಅವರ ಹೇಳಿಕೆಯ ಪ್ರಕಾರ, ಮಹಾರಾಜರ ಕಾಲದಲ್ಲಿ ಗರ್ಭಿಣಿಯರ ಆರೈಕೆ ಕೇಂದ್ರವಾಗಿದ್ದ ಗುಣಾಂಬ ಟ್ರಸ್ಟ್ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿದೆ. ಟ್ರಸ್ಟ್ ಜಾಗದಲ್ಲಿ 40 ವರ್ಷಗಳಿಂದ ಬಾಡಿಗೆಗೆ ಇರುವ ಅತಾವುಲ್ಲಾ ಖಾನ್ ಗ್ಯಾರೇಜ್ ನಡೆಸುತ್ತಿದ್ದಾರೆ.

"ಒಂದು ವಾರದ ಹಿಂದೆ ಟ್ರಸ್ಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಮುಡಾ ಆಯುಕ್ತ ನಟೇಶ್, ಈ ಜಾಗ ಮುಡಾಕ್ಕೆ ಸೇರಿದ್ದೆಂದು ವಾದಿಸುತ್ತಿದ್ದಾರೆ. ಟ್ರಸ್ಟ್ ಆಸ್ತಿ ಪ್ರಕರಣ ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದೆ. ಈ ಹೊತ್ತಿನಲ್ಲಿ ಮುಡಾ ಆಯುಕ್ತ ಎಚ್.ಬಿ. ನಟೇಶ್ ಜಾಗ ತೆರವು ಮಾಡುವಂತೆ ಬೆದರಿಕೆ ಹಾಕಿದ್ದಾರೆ. ನಮ್ಮ ಪರ ವಕೀಲ ಸೈಯದ್ ಅಮೀರ್ ಸಮಜಾಯಿಷಿ ನೀಡಿದರಾದರೂ, ಮುಡಾ ಆಯುಕ್ತರು ಅದನ್ನು ಕೇಳಿಸಿಕೊಳ್ಳಲಿಲ್ಲ. ವಕೀಲರೊಂದಿಗೆ ಮುಡಾ ಆಯುಕ್ತರು ವಾಗ್ವಾದ ನಡೆಸಿದರು. ನಂತರ ನಾವು ಕೋರ್ಟ್ ತೀರ್ಪಿಗೆ ಬದ್ದರಾಗಿರುತ್ತೇವೆ ಎಂದಿದ್ದೇವೆ.''
"ಈ ವೇಳೆ ಆಯುಕ್ತರು, ಇದು ಪಾಕಿಸ್ತಾನವಲ್ಲ ಅಂತಾ ಬೆದರಿಕೆ ಹಾಕಿದರು. ಪಾಕಿಸ್ತಾನದ ಹೆಸರಿನಲ್ಲಿ ಅಧಿಕಾರಿಯಿಂದ ಬೆದರಿಕೆ ಬಂದಿದೆ. ಆಸ್ತಿ ವಿವಾದಕ್ಕೆ ಪಾಕಿಸ್ತಾನವನ್ನು ಎಳೆದು ತಂದಿದ್ದಾರೆ. ರಾಷ್ಟ್ರೀಯತೆ ಹೆಸರಲ್ಲಿ ಧಮಕಿ ಹಾಕಿದ್ದಾರೆ. ನಾನು ಹುಟ್ಟು ಭಾರತೀಯ, ನಮ್ಮೊಂದಿಗೆ ಪಾಕಿಸ್ತಾನದ ಹೆಸರು ಥಳಕು ಹಾಕಿ ಅವಮಾನಿಸಿದ್ದಾರೆ. ಮುಡಾಕ್ಕೂ ಈ ಆಸ್ತಿಗೂ ಸಂಬಂಧವಿಲ್ಲ. ಆಸ್ತಿ ಮೇಲೆ ಕಣ್ಣು ಹಾಕಿ ಹಲವರಿಂದ ಲಪಟಾಯಿಸುವ ಹುನ್ನಾರ ನಡೆದಿದೆ.''
"ಮೈಸೂರು ರಾಜವಂಶಸ್ಥರು ಮಾತ್ರ ನಮ್ಮನ್ನು ಪ್ರಶ್ನಿಸಬಹುದು. ಈ ಆಸ್ತಿ ರಕ್ಷಣೆ ಮಾಡುತ್ತಿರುವ ಕಾರಣಕ್ಕೆ ರಾಜ ಮನೆತನದವರೇ ನಮ್ಮನ್ನು ಇರಲು ಬಿಟ್ಟಿದ್ದಾರೆ,'' ಎಂದು ಅತಾವುಲ್ಲಾ ಖಾನ್ ಸ್ಪಷ್ಟಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications