ಬಿಜೆಪಿಯಲ್ಲಿ ಆತ್ಮಾವಲೋಕನದ ಅಗತ್ಯವಿದೆ: ಶ್ರೀನಿವಾಸ್ ಪ್ರಸಾದ್
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನನುಭವಿಸಿದ್ದಕ್ಕೆ ನಾವು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಮೈಸೂರು, ಮೇ 15 : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನನುಭವಿಸಿದ್ದಕ್ಕೆ ನಾವು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ನಿನ್ನೆ(ಮೇ 14) ನಡೆದ ಬಿಜೆಪಿ ನಗರ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಎನ್.ಆರ್, ಕೆ.ಆರ್, ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯವಿತ್ತು. ಬಿಜೆಪಿ ಗೆಲ್ಲುತ್ತಿತ್ತು.ಅಷ್ಟೇ ಅಲ್ಲದೇ ಸದ್ಯ ಬಿಜೆಪಿಯನ್ನು ಎಲ್ಲ ಕಡೆಯೂ ಗೆಲ್ಲುವ ಹಾಗೇ ಕಾರ್ಯಯೋಜನೆಯನ್ನು ರೂಪಿಸಬೇಕು. ಮಿಷನ್ 150 ಯಶಸ್ವಿಯಾಗುವತ್ತ ನಾವು ಗಮನ ಹರಿಸಬೇಕು ಎಂದರು.[ಪಕ್ಷದ ಸಂಘಟನೆಯೇ ನನ್ನ ಗುರಿ : ಶ್ರೀನಿವಾಸ್ ಪ್ರಸಾದ್]

ಮುಖ್ಯಮಂತ್ರಿ ಇಲ್ಲಿಯವರೇ ಎಂದು ಧೃತಿಗೆಡುವ ಅಗತ್ಯವಿಲ್ಲ. ಅವರಿಗೆ ತಾಲೂಕುಪಂಚಾಯತ್, ಜಿಲ್ಲಾಪಂಚಾಯತ್ ಗಳನ್ನೇ ಗೆಲ್ಲೋದಿಕ್ಕೆ ಸಾಧ್ಯವಾಗಿಲ್ಲ. ಕಾಂಗ್ರೆಸ್ ನಲ್ಲಿ ದಿಗ್ವಿಜಯ್ ಸಿಂಗ್ ಉಸ್ತುವಾರಿ ಆಗಿರುವವರೆಗೂ ಅವರ ಸ್ಥಿತಿ ಗೊತ್ತಾಗುತ್ತಿರಲಿಲ್ಲ.ಈಗ ಉಸ್ತುವಾರಿ ಬದಲಾಗಿದ್ದಾರೆ. ಉಸ್ತುವಾರಿ ದಿಗ್ವಿಜಯ್ ಸಿಂಗ್ ಇರೋವರೆಗೂ ನಾನೇ ಸಿಎಂ ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಇದೀಗ ಪಕ್ಷದಲ್ಲಿ ಹಿಡಿತ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ನಂಜನಗೂಡು ಉಪಚುನಾವಣೆಯ ವೇಳೆ ಕಪಿಲಾ ನದಿಯಲ್ಲಿ ನೀರಿಲ್ಲದಿದ್ದರೂ ಹಣದ ಹೊಳೆಯನ್ನೇ ಹರಿಸಿದ್ದಾರೆ. ಪಕ್ಷದಲ್ಲಿ ಅಭ್ಯರ್ಥಿಗಳಿಲ್ಲದಿದ್ದರೂ , ಸಚಿವ ಮಹದೇವಪ್ಪ ಮಗನಿಗೆ ಟಿಕೆಟ್ ಕೊಡಿಸುತ್ತೇನಂದು ಸುಳ್ಳು ಹೇಳಿದರೂ. ಅಷ್ಟೇ ಅಲ್ಲದೇ ಬಿಜೆಪಿ ಅಭ್ಯರ್ಥಿಯನ್ನು ಕರೆತಂದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇವೇಗೌಡರ ವಿರುದ್ಧವೂ ಕಿಡಿಕಾರಿದ ಶ್ರೀನಿವಾಸ್ ಪ್ರಸಾದ್, ಅಪ್ಪ ಮಗನಿಗೆ ಕೃತಜ್ಞತೆಯೇ ಇಲ್ಲ. ಕಾಂಗ್ರೆಸ್ ಸಹಾಯದಿಂದ ಅಪ್ಪ ಪ್ರಧಾನಿಯಾದರು. ಬಿಜೆಪಿ ಸಹಾಯದಿಂದ ಮಗ ಮುಖ್ಯಮಂತ್ರಿಯಾದರು. ಎಲ್ಲ ಕಡೆಯಲ್ಲೂ ಒಳ ಒಪ್ಪಂದ ನಡೆಯುತ್ತದೆ. ಉಪಚುನಾವಣೆಯಲ್ಲೂ ಒಳ ಒಪ್ಪಂದ ನಡೆಸುವ ಮೂಲಕ ನನ್ನ ಸೋಲಿಗೆ ಕಾರಣರಾದರು ಎಂದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications