ದಸರಾ ಆಹಾರ ಮೇಳದಲ್ಲಿ ವಿದೇಶಿ ತಿನಿಸುಗಳನ್ನೂ ಸವಿಯಲು ಸಿದ್ಧರಾಗಿ
ಮೈಸೂರು, ಸೆಪ್ಟೆಂಬರ್ 17: ಈ ಬಾರಿಯ ದಸರಾ ಹಬ್ಬದಲ್ಲಿ ವಿದೇಶಿ ತಿನಿಸುಗಳ ರುಚಿಯನ್ನು ಕೂಡ ಸವಿಯಬಹುದು. ಹೌದು, ಇಟಲಿ, ಶ್ರೀಲಂಕಾ, ಯೂರೋಪ್ ರಾಷ್ಟ್ರಗಳ ತಿನಿಸುಗಳನ್ನು ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೂಲಕ ತಯಾರಿಸಿ ಜನರಿಗೆ ಉಣಬಡಿಸುವ ಕೆಲಸಕ್ಕೆ ದಸರಾ ಸಮಿತಿ ಮುಂದಾಗಿದೆ.
10 ದಿನಗಳ ಕಾಲ ನಡೆಯುವ ದಸರಾ ಸಂಭ್ರಮದಲ್ಲಿ ಜನರ ನೆನಪಿನಲ್ಲಿ ಉಳಿಯುವ ಅನೇಕ ಕಾರ್ಯಕ್ರಮಗಳಲ್ಲಿ ಆಹಾರ ಮೇಳ' ಕೂಡ ಒಂದು.
ರಾಜ್ಯದ ಉತ್ತರ ಕರ್ನಾಟಕದ ಎಣ್ಣೆಗಾಯಿ ರೊಟ್ಟಿ, ದಾವಣಗೆರೆಯ ಬೆಣ್ಣೆ ದೋಸೆ, ಧಾರವಾಡ ಪೇಡ, ಬಂಗಾರಪೇಟೆ ಚುರುಮುರಿ, ಮೈಸೂರು ಪಾಕ್, ರಾಗಿ ರೊಟ್ಟಿ ಹುಚ್ಚೆಳ್ಳು ಚಟ್ನಿ, ಮಂಗಳೂರಿನ ನೀರು ದೋಸೆ, ಮೀನಿನ ಖಾದ್ಯ, ಇದರ ಜೊತೆಗೆ ಆಂಧ್ರದ ಧಂ ಬಿರಿಯಾನಿ, ಚಿಕನ್ ಕಬಾಬ್, ಉತ್ತರ ಭಾರತದ ರೋಟಿ, ದಾಲ್... ಹೀಗೆ ದೇಶದ ನಾನಾ ಭಾಗಗಳ ತಿನಿಸುಗಳನ್ನು ಆಹಾರ ಮೇಳದ ಮೂಲಕ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಕಡಿಮೆ ದರದ ಮೂಲಕ ಉಣಬಡಿಸಲಾಗುತ್ತದೆ.

ಈ ಬಾರಿಯ ಆಹಾರ ಮೇಳ ಉಪ ಸಮಿತಿ ಹೊಸದೊಂದು ಯೋಜನೆ ರೂಪಿಸಿದ್ದು, ಮೇಳದ ಮೂಲಕ ವಿದೇಶಿ ತಿನಿಸುಗಳನ್ನೂ ಕೂಡ ಪ್ರವಾಸಿಗರಿಗೆ ಪರಿಚಯಿಸುವ ಕಾರ್ಯಕ್ರಮಕ್ಕೆ ಕೈ ಹಾಕಿದೆ. ಇದಕ್ಕಾಗಿ ವ್ಯಾಸಂಗಕ್ಕೆಂದು ಮೈಸೂರಿಗೆ ಆಗಮಿಸಿರುವ ವಿದೇಶಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವ ಚಿಂತನೆಯನ್ನು ನಡೆಸುತ್ತಿದೆ.
ಇಟಲಿ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಕಾಂಬೋಡಿಯಾ ಮುಂತಾದ ದೇಶಗಳ ವಿದ್ಯಾರ್ಥಿಗಳ ಮೂಲಕ ಅಲ್ಲಿನ ಪಾರಂಪರಿಕ ತಿನಿಸುಗಳನ್ನು ಮೇಳದ ಮೂಲಕ ಜನರಿಗೆ ಪರಿಚಯಿಸಲು ಸಿದ್ಧತೆ ನಡೆದಿದೆ. ಇದಕ್ಕಾಗಿ ನಗರದ ಜೆಎಸ್ ಎಸ್, ಮಾನಸ ಗಂಗೋತ್ರಿ, ಎನ್ಐಇ ಹಾಗೂ ಇನ್ನಿತರ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳನ್ನು ಭೇಟಿ ಮಾಡಲಾಗಿದೆ.
ದಸರಾ ಹಬ್ಬದ ವೇಳೆ ಅವರ ದೇಶಗಳ ಪಾರಂಪರಿಕ ಹಾಗೂ ಪ್ರಖ್ಯಾತ ತಿನಿಸುಗಳನ್ನು ಪ್ರವಾಸಿಗರಿಗೆ ಪರಿಚಯಿಸಿ ಕೊಡುವಂತೆ ಮನವಿ ಮಾಡಿಕೊಳ್ಳಲು ಸಮಿತಿಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದಲ್ಲಿ ಅ.10ರಿಂದ 19ರವರೆಗೆ 10 ದಿನಗಳ ಕಾಲ ನಡೆಯಲಿರುವ ಆಹಾರ ಮೇಳದಲ್ಲಿ ವಿದೇಶಿ ಆಹಾರಗಳ ರುಚಿಯನ್ನೂ ಸವಿಯಬಹುದಾಗಿದೆ.
ಪ್ರತಿ ಬಾರಿಯಂತೆ ಈ ಬಾರಿ ಕೂಡ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೆಸ್ ಬಳಿ ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications