ಈ ಬಾರಿ ಕುಸ್ತಿಯಿಲ್ಲದ ಮೈಸೂರು ದಸರಾ
ಮೈಸೂರು, ಅಕ್ಟೋಬರ್ 23: ಮೈಸೂರು ಮಹಾರಾಜರು ಕಲೆ, ಸಾಹಿತ್ಯ, ಸಂಸ್ಕೃತಿಗೆ ಮಾತ್ರವಲ್ಲದೆ ಕ್ರೀಡೆಗೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ಅದರಲ್ಲೂ ಅವರ ಕಾಲದಲ್ಲಿ ಕುಸ್ತಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು ಎಂಬುದಕ್ಕೆ ಮೈಸೂರು ನಗರದಲ್ಲಿ ಕಂಡುಬರುವ ಗರಡಿ ಮನೆಗಳು ಸಾಕ್ಷಿಯಾಗಿವೆ.
ವರ್ಷದ ಇತರೆ ದಿನಗಳಲ್ಲೂ ಗರಡಿ ಮನೆಗಳು ಚಟುವಟಿಕೆಯಲ್ಲಿರುತ್ತಿದ್ದವಾದರೂ ದಸರಾ ವೇಳೆಯಲ್ಲಿ ಎಲ್ಲ ಗರಡಿ ಮನೆಗಳಲ್ಲಿ ಸಂಚಲನ ಸೃಷ್ಠಿಯಾಗಿ ಬಿಡುತ್ತಿತ್ತು. ಕಾರಣ ದಸರಾದಲ್ಲಿ ಕುಸ್ತಿಯಾಡಿ ಗೆದ್ದು ರಾಜರಿಂದ ಪ್ರಶಂಸೆ ಪಡೆಯುವುದು ಪ್ರತಿಯೊಬ್ಬ ಕುಸ್ತಿಪಟುವಿನ ಅಭಿಲಾಷೆಯಾಗಿರುತ್ತಿತ್ತು. ಹೀಗಾಗಿ ಬಿಡುವಿಲ್ಲದ ಅಭ್ಯಾಸವನ್ನು ಕುಸ್ತಿಪಟುಗಳು ಅರ್ಥಾತ್ ಪೈಲ್ವಾನರು ಮಾಡುತ್ತಿದ್ದರು.

ರಾಜರ ಆಡಳಿತದಲ್ಲಿ ಕುಸ್ತಿಗೆ ಮಹತ್ವದ ಸ್ಥಾನ
ದಸರಾ ಸಂದರ್ಭದಲ್ಲಿ ಮಹಾರಾಜರು ಇತರೆ ಕಾರ್ಯಕ್ರಮಗಳ ನಡುವೆ ಕುಸ್ತಿಗೂ ಮಹತ್ವದ ಸ್ಥಾನ ನೀಡುತ್ತಿದ್ದರು. ಗೆದ್ದ ಪೈಲ್ವಾನರಿಗೆ ದಸರಾ ಕೇಸರಿ, ದಸರಾ ಕಂಠೀರವ, ದಸರಾ ಕುಮಾರ ಎಂಬ ಬಿರುದುಗಳನ್ನು ನೀಡಿ ಅಭಿನಂದಿಸಲಾಗುತ್ತಿತ್ತು. ಅಷ್ಟೇ ಅಲ್ಲದೆ ಕುಸ್ತಿ ಪ್ರಿಯರಾಗಿದ್ದ ಮಹಾರಾಜರು ಪೈಲ್ವಾನ್ ರನ್ನು ಕರೆಸಿ ಪ್ರತಿ ವಾರವೂ ಕುಸ್ತಿಯನ್ನು ನಡೆಸಿ, ತಾವೇ ಆಶ್ರಯ ನೀಡಿ ಸಲಹುತ್ತಿದ್ದರು. ಅಂದಿನ ಕಾಲದಲ್ಲಿ ರಾಜರ ಪ್ರೋತ್ಸಾಹದಿಂದಾಗಿ ನಗರದಾದ್ಯಂತ ಗರಡಿಮನೆಗಳು ಹುಟ್ಟಿಕೊಂಡಿದ್ದವು. ಮುಂಜಾನೆ ಚುಮುಚುಮು ಚಳಿಯಲ್ಲಿಯೇ ಗರಡಿ ಮನೆಗೆ ಹೋಗಿ ವ್ಯಾಯಾಮ, ಕಸರತ್ತಿನ ಮೂಲಕ ದೇಹವನ್ನು ದಂಡಿಸುತ್ತಿದ್ದರಲ್ಲದೆ, ಪರಿಕರಗಳಾದ ಕಲ್ಲುಗುಂಡು, ಬಳೆ, ಗದೆ, ಕೊಂತ, ಕಂಬಕಟ್ಟೋದು, ಮಣ್ಣಿನಲ್ಲಿ ಪರಸ್ಪರ ಕುಸ್ತಿ ಅಭ್ಯಾಸ, ಹುಲಿಹೆಜ್ಜೆ, ಡೇಕ್ನಿ, ಕಟಾಪ್, ಹನುಮಾನ್ ದಂಡೆ, ಸುತ್ತಂಡೆ, ಚಪ್ಪಡಿದಂಡೆ, ಬಸ್ಕಿ ಮುಂತಾದ ಕಸರತ್ತುಗಳನ್ನು ನಡೆಸುತ್ತಿದ್ದರು.

ಕುಸ್ತಿ ಹೆಮ್ಮೆ ತರುವ ವಿಷಯ
ಗರಡಿಮನೆಯಿಂದ ತಾಲೀಮು ನಡೆಸಿ ಬರುವ ಪೈಲ್ವಾನರು ಮನೆಗೆ ಬರುತ್ತಿದ್ದಂತೆಯೇ ಲೀಟರ್ಗಟ್ಟಲೆ ಬಾದಾಮಿ ಬೀಜಗಳ ಮಿಶ್ರಣ ಮಾಡಿದ ಹಾಲು, ಬೆಲ್ಲ ಮತ್ತು ರವೆಯಿಂದ ಮಾಡಿದ ಸಿಹಿ ತಿನಿಸು, ಬೆಣ್ಣೆ ಮುಂತಾದ ಪೌಷ್ಠಿಕ ಆಹಾರಗಳನ್ನು ಸೇವಿಸಿ, ಮಧ್ಯಾಹ್ನ ಚಪಾತಿ, ರಾಗಿ ಮುದ್ದೆ, ಅನ್ನ ಸಾರು, ಹಾಲು, ಬೆಣ್ಣೆ, ಹಣ್ಣು ಮೊದಲಾದವುಗಳನ್ನು ಸೇವಿಸುತ್ತಿದ್ದರು. ರಾಜರ ಕಾಲದ ನಂತರದ ದಿನಗಳಲ್ಲಿ ಗರಡಿಮನೆಗಳ ಸಂಖ್ಯೆ ಕಡಿಮೆಯಾದರೂ ಇರುವ ಗರಡಿ ಮನೆಗಳು ತಮ್ಮದೇ ಆದ ಘನತೆಯನ್ನು ಹೊಂದಿ ಮೈಸೂರಿನ ಖ್ಯಾತಿಯನ್ನು ಎಲ್ಲೆಡೆ ಪಸರಿಸುತ್ತಿರುವುದನ್ನು ನಾವು ಕಾಣಬಹುದಾಗಿದೆ. ಇತ್ತೀಚೆಗಿನ ವೈಜ್ಞಾನಿಕ ಜಿಮ್ಗಳು ನಡುವೆಯೂ ಗರಡಿಮನೆಗಳು ತಮ್ಮ ಅಸ್ತಿತ್ವ ಉಳಿಸಿಕೊಂಡು ಮುನ್ನಡೆಯುತ್ತಿರುವುದು ನಿಜಕ್ಕೂ ಹೆಮ್ಮೆ ತರುವ ವಿಷಯವಾಗಿದೆ.

ಮೈಸೂರಿನಲ್ಲಿ ಹತ್ತಾರು ಗರಡಿಮನೆಗಳು
ಈಗಲೂ ನಗರದಲ್ಲಿ ಸುತ್ತು ಹೊಡೆದರೆ ಸುಮಾರು ನೂರಕ್ಕೂ ಹೆಚ್ಚು ಗರಡಿ ಮನೆಗಳು ಕಾಣಸಿಗುತ್ತವೆ. ಸುಣ್ಣದಕೇರಿ ನಾಲಾ ಬೀದಿಯ ಗೋಪಾಲಸ್ವಾಮಿ ಗರಡಿ, ಬಸವೇಶ್ವರ ರಸ್ತೆಯ ಮಹಾಲಿಂಗೇಶ್ವರ ಮಠದ ಗರಡಿ, ಕೆ.ಜಿ ಕೊಪ್ಪಲು, ಪಡುವಾರಹಳ್ಳಿಯ ಹತ್ತೂ ಜನರ ಗರಡಿ, ಹುಲ್ಲಿನ ಬೀದಿಯ ಈಶ್ವರರಾಯನ ಗರಡಿ, ಫಕೀರ್ ಅಹಮ್ಮದ್ ಸಾಹೇಬರ ಗರಡಿ ಹೀಗೆ ಹತ್ತು ಹಲವು ಗರಡಿಮನೆಗಳು ನೋಡಲು ಸಿಗುತ್ತವೆ.

ಪೈಲ್ವಾನರಿಗೆ ಅವರದ್ದೇ ಆದ ಗೌರವವಿದೆ
ವರ್ಷಪೂರ್ತಿ ಇಲ್ಲಿ ಒಂದಲ್ಲ ಒಂದು ಕಡೆ ಕುಸ್ತಿ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತದೆ. ಇವತ್ತಿಗೂ ಪೈಲ್ವಾನರಿಗೆ ಅವರದ್ದೇ ಆದ ಗೌರವವಿದೆ. ಪ್ರತಿ ವರ್ಷವೂ ದಸರಾದಲ್ಲಿ ಕುಸ್ತಿ ಪಂದ್ಯಾವಳಿ ನಡೆಸಲಾಗುತ್ತಿತ್ತಾದರೂ ಈ ಬಾರಿ ಕೊರೊನಾ ಹಿನ್ನಲೆಯಲ್ಲಿ ನಡೆಯುತ್ತಿಲ್ಲ. ಇದು ಕುಸ್ತಿಯನ್ನು ಇಷ್ಟಪಡುವ ಎಲ್ಲರಿಗೂ ನಿರಾಸೆ ತಂದಿದ್ದರೂ, ಮುಂದಿನ ವರ್ಷಕ್ಕಾಗಿ ಕಾಯುತ್ತಿದ್ದಾರೆ. ಏನೇ ಆದರೂ ಕುಸ್ತಿಯಿಲ್ಲದ ಮೈಸೂರು ದಸರಾವನ್ನು ನೆನಪಿಸಿಕೊಳ್ಳುವುದೇ ಕಷ್ಟವಾಗುತ್ತಿದೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications