ಮೈಸೂರು: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಜೀವವನ್ನೇ ತೆಗೆದರು
ಮೈಸೂರು, ಏಪ್ರಿಲ್ 29: ಕೊಟ್ಟ ಸಾಲವನ್ನು ವಾಪಸ್ ಕೇಳಿದವನನ್ನೇ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ನಗರದ ಸಾಮಿಲ್ ವೊಂದರಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿತ್ತು.
ಪೋಲೀಸ್ ತನಿಖೆಯಲ್ಲಿ ಮೃತ ಯುವಕ ಗಣೇಶ್ (20) ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ನಿವಾಸಿ ಎಂದು ತಿಳಿದು ಬಂದಿದೆ. ಗಣೇಶ್ನು ಧನು ಎಂಬ ವ್ಯಕ್ತಿಗೆ ಸಾಲ ನೀಡಿದ್ದನು. ಸಾಕಷ್ಟು ಬಾರಿ ಕೇಳಿದರೂ ಹಿಂತಿರುಗಿ ಕೊಟ್ಟಿರಲಿಲ್ಲ. ಬದಲಿಗೆ ಸಾಲ ನೀಡಿದಾತನನ್ನೇ ಮುಗಿಸುವ ಪ್ಲಾನ್ ಮಾಡಿಕೊಂಡಿದ್ದ ಧನು ಕಳೆದ ಏಪ್ರಿಲ್ 23 ರಂದು ರಾತ್ರಿ ಸಾಲದ ಹಣವನ್ನು ಹಿಂತಿರುಗಿಸಿ ಕೊಡುವುದಾಗಿ ಹುಣಸೂರಿನ ಸಾಮಿಲ್ ಬಳಿ ಕರೆಸಿಕೊಂಡಿದ್ದಾನೆ.
ರಾತ್ರಿ ಅಲ್ಲಿಯೇ ಗಣೇಶ್ಗೆ ಊಟ ಮಾಡಿಸಿದ್ದಾನೆ. ಇದಾದ ನಂತರ ತನ್ನ ಸ್ನೇಹಿತರಾದ ಸಲ್ಮಾನ್ ಹಾಗೂ ಮಾದೇವ ನಾಯ್ಕ ಎಂಬುವವರ ಸಹಾಯ ಪಡೆದುಕೊಂಡು ಅಲ್ಲಿಯೇ ಗಣೇಶ್ನನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದೇಹವನ್ನು ಸುಟ್ಟು ಹಾಕುವ ಯತ್ನ ಕೂಡ ನಡೆಸಿದ್ದಾರೆ.

ಆದರೆ ಹೆದರಿ ಹೆಣವನ್ನು ಅಲ್ಲೇ ಸಮೀಪದಲ್ಲಿದ್ದ ಪೊದೆಗೆ ಎಸೆದು ಹೋಗಿದ್ದಾರೆ. ಅಲ್ಲದೇ ಆತನ ಜೇಬಿನಲ್ಲಿದ್ದ 15 ಸಾವಿರ ರೂ. ಹಣ ತೆಗೆದುಕೊಂಡು ಹೋಗಿದ್ದಾರೆ. ಪೊಲೀಸರು ಈ ಮೂವರನ್ನೂ ಬಂಧಿಸಿ ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಘಟನೆಯ ಸತ್ಯವನ್ನು ಬಾಯ್ಬಿಟ್ಟಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications