ಲೋಕ ಸಮರ 2019:ಮೈಸೂರಿನಲ್ಲಿ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮೈಸೂರು, ಮಾರ್ಚ್ 19:ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ಮೊದಲ ದಿನ ಮೂವರು ಮೈಸೂರು - ಕೊಡಗು ಕ್ಷೇತ್ರದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಮಾ.26ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾ.29ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏ.18ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಭಾರತೀಯ ಹೊಸ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಯುಬ್ ಖಾನ್ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

Three candidates filed nomination in Mysuru-Kodagu constituency

ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕೋರ್ಟ್ ಹಾಲ್ ನಲ್ಲಿ ಚುನಾವಣಾ ಅಧಿಕಾರಿಯಾಗಿರುವ ಅಭಿರಾಮ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಜೂನಿಯರ್ ವಿಷ್ಣುವರ್ಧನ್ ಉಪಸ್ಥಿತರಿದ್ದು ಗಮನ ಸೆಳೆದರು.

ಇದರೊಟ್ಟಿಗೆ ಎಸ್ ಯುಸಿಐ ನಿಂದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಧ್ಯಾ ಪಿ. ಎಸ್ ಬೆಂಬಲಿಗರೊಂದಿಗೆ ತೆರಳಿ ಚುನಾವಣಾ ಅಧಿಕಾರಿಗೆ ಉಮೇದುವಾರಿಕೆ ಸಲ್ಲಿಸಿದರು.

Three candidates filed nomination in Mysuru-Kodagu constituency

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮ್ಯುನಿಸ್ಟ್ ಪಕ್ಷ ದೇಶಾದ್ಯಂತ ಹೋರಾಟ ಮಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡುತ್ತಾರೆ. ಜನರ ಸಮಸ್ಯೆ ಬಗೆಹರಿಸಲು ಮುಂದುವರಿಯುತ್ತಿಲ್ಲ. ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದೆ.ಅಧಿಕಾರಕ್ಕಾಗಿ ಜಾತಿ ಧರ್ಮದ ಹೆಸರಿನಲ್ಲಿ ಮತ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಕಾರ್ಮಿಕರಿಗೆ, ಮಹಿಳೆಯರಿಗೆ ಸ್ವಾವಲಂಬನೆ ಬದುಕು ಕಟ್ಟಿಕೊಡುವ ಉದ್ದೇಶದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.

Three candidates filed nomination in Mysuru-Kodagu constituency

ಕಾಂಗ್ರೆಸ್ (ಐ) ಆನಂದ ಜೆ.ಜೆ.ಮತ್ತು ಪಕ್ಷೇತರ ಇವರು ಕಾಂಗ್ರೆಸ್ ಐನಲ್ಲಿ ಪಕ್ಷದಿಂದ ಒಂದು ನಾಮಪತ್ರವನ್ನು ಸಲ್ಲಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+