ಮೈಸೂರು: ವಾಹನ ನಾಲೆಗೆ ಉರುಳಿ ಮೂವರು ಮಕ್ಕಳ ದುರ್ಮರಣ

ಮೈಸೂರು, ಆಗಸ್ಟ್ 26 : ಆಪೇ ಆಟೋ ನಾಲೆಗೆ ಉರುಳಿ ಬಿದ್ದು ಮೂವರು ಮಕ್ಕಳು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ವಾಟಾಳ್ ಸಮೀಪ ನಡೆದಿದೆ. ಪುಟ್ಟಿ (೧೩), ರಾಜೇಂದ್ರ (೫), ಮಹದೇವಪ್ರಸಾದ್ (೫) ಮೃತ ಮಕ್ಕಳು.

ತಾಲ್ಲೂಕಿನ ವಾಟಾಳು ಗ್ರಾಮದ ಬಳಿ ಇರುವ ಮಹಾಬಲ್ಲೇಶ್ವರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಕನ್ನಮ್ಮ ದೇವಸ್ಥಾನಕ್ಕೆ ತೆರಳುವಾಗ ಈ ಘಟನೆ ನಡೆದಿದೆ.

Three children died in accident in Mysuru

ಕಬಿನಿ ನಾಲಾ ರಸ್ತೆಯ ಏರಿ ಮೇಲೆ ಆಯತಪ್ಪಿ ಅಟೋ ನಾಲೆಯ ಮೇಲೆ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ. ಇದರಲ್ಲಿ ಬಾಲಕಿ ಪುಟ್ಟಿ ಶವ ದೊರೆತಿದ್ದು, ಇನ್ನಿಬ್ಬರು ಮಕ್ಕಳ ಶವಕ್ಕಾಗಿ ಹುಡುಕಾಟ ನಡೆಸಲಾಗಿದೆ.

Three children died in accident in Mysuru

ಇನ್ನು 10 ಜನ ಈ ಆಟೋದಲ್ಲಿ ತೆರಳುತ್ತಿದ್ದ ವೇಳೆ ಮುಳುಗಿದ್ದು, ಸ್ಥಳೀಯರು ರಕ್ಷಣೆಯಲ್ಲಿ ತೊಡಗಿದ್ದಾರೆ. ನಾಪತ್ತೆಯಾದವರ ಹುಡುಕಾಟ ನಡೆಸಲಾಗಿದೆ. ಸ್ಥಳಕ್ಕೆ ಟಿ. ನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+