ಮೈಸೂರಿನ ಎನ್.ಆರ್ ಕ್ಷೇತ್ರದಲ್ಲಿ ಮೂರು ಕೋವಿಡ್ ಕೇಂದ್ರ ಆರಂಭ
ಮೈಸೂರು, ಜುಲೈ 23: ಮೈಸೂರಿನಲ್ಲಿ ಕೊರೊನಾ ವೈರಸ್ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಅದರಲ್ಲೂ ಎನ್.ಆರ್ ಕ್ಷೇತ್ರದಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಮೂರು ಕೋವಿಡ್ ಕೇಂದ್ರಗಳನ್ನು ಆರಂಭ ಮಾಡಲಾಗಿದೆ.
Recommended Video
ಮಾಜಿ ಮೇಯರ್ ಆಯೂಬ್ ಖಾನ್ ನೇತೃತ್ವದಲ್ಲಿ 3 ಕೋವಿಡ್ ಆರೈಕೆ ಕೇಂದ್ರ ಆರಂಭ ಮಾಡಲಾಗಿದ್ದು, ಇವು 450 ಹಾಸಿಗೆಗಳುಳ್ಳ ಸೇವಾ ಕೇಂದ್ರಗಳಾಗಿವೆ. ಜಿಲ್ಲಾಡಳಿತದಿಂದ ಹಾಸಿಗೆ ಹಾಗೂ ಔಷಧಿ ನೆರವು ನೀಡಲಾಗುತ್ತದೆ. ಹಾಗೆಯೇ ಮಾಜಿ ಮೇಯರ್ ಆಯೂಬ್ ಖಾನ್ ವೈದ್ಯಕೀಯ ನೆರವು, ಊಟದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಫಾರೂಕಿಯ ಮಹಿಳೆಯರ ಪಾಲಿಟೆಕ್ನಿಕ್ ಕಾಲೇಜಿನಲ್ಲೂ ಸುಮಾರು 135 ಬೆಡ್ಗಳ ಕೇಂದ್ರ ಆರಂಭ ಮಾಡಲಾಗಿದೆ. ಸ್ವಯಂ ಸೇವಕರು, ಎನ್ಜಿಒ ಹಾಗೂ ಮೌಲ್ವಿಗಳ ನೆರವಿನೊಂದಿಗೆ ಆಯೂಬ್ ಖಾನ್ ನೇತೃತ್ವದಲ್ಲಿ ಈ ಆರೈಕೆ ಕೇಂದ್ರ ಸ್ಥಾಪನೆ ಮಾಡಲಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಆಯೂಬ್ ಖಾನ್, ""ಜಿಲ್ಲಾಡಳಿತ, ಮನಪಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಸ್ಥಳೀಯ ನಗರ ಪಾಲಿಕೆ ಸದಸ್ಯರು, ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉದಯಗಿರಿಯ ಫಾರೂಕಿಯಾ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ರಾಜೀವ್ ನಗರದ ಆಂಡುಲೆನ್ಸ್ ಪಬ್ಲಿಕ್ ಶಾಲೆ, ಅಜೀಜ್ ಸೇಠ್ ನಗರದ ಬೀಡಿ ಕಾರ್ಮಿಕರ ಮಜ್ದೂರ್ ಆಸ್ಪತ್ರೆಗಳನ್ನು ಕೋವಿಡ್ ಕೇರ್ ಸೆಂಟರ್ ಗಳಾಗಿ ಸಜ್ಜುಗೊಳಿಸಲಾಗಿದೆ'' ಎಂದರು.
ಫಾರೂಕಿಯಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ತಾಜ್ ಮೊಹಮ್ಮದ್ ಖಾನ್ ಆಂಡುಲೆನ್ಸ್ ಪಬ್ಲಿಕ್ ಶಾಲೆಯ ಮುಖ್ಯಸ್ಥ ನಜೀರ್ ಹಾಗೂ ಬೀಡಿ ಕಾರ್ಮಿಕರ ಆಸ್ಪತ್ರೆಯ ಮುಖ್ಯಸ್ಥರು ತಮ್ಮ ಸಂಸ್ಥೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಸಹಮತ ನೀಡಿದ್ದಾರೆಂದು ತಿಳಿಸಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications