ಮೈಸೂರಿನ ನಿಗೂಢ ಸಾವು ಪ್ರಕರಣ : ದೂರು ದಾಖಲು
ಮೈಸೂರು, ಜನವರಿ 20: ತನ್ನ ಮಗನ ಕೊಲೆಯನ್ನು ಆತನ ಪ್ರೇಯಸಿಯ ಪೋಷಕರೇ ಮಾಡಿಸಿದ್ದಾರೆ ಎಂದು ಆರೋಪಿಸಿ ಬನ್ನೂರು ಠಾಣೆಯಲ್ಲಿ ದೂರು ದಾಖಲಾದ ಘಟನೆ ಮೈಸೂರಿನಲ್ಲಿ ಜರುಗಿದೆ.
ಮಂಗಳಮ್ಮ ಎಂಬುವವರ ಎಕೈಕ ಪುತ್ರ ಶಶಿಧರ್ ಕೊಲೆಯಾದ ವ್ಯಕ್ತಿ. ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದು ಸುಮಾರು ನಾಲ್ಕು ವರ್ಷಗಳಿಂದ ಮೈಸೂರಿನಲ್ಲಿ ಎಂ.ಟೆಕ್ ಮಾಡಿದ್ದ ಅಕ್ಷತಾಳನ್ನು ಪ್ರೀತಿಸುತ್ತಿದ್ದ. ಆಕೆ ತಮ್ಮ ಓದು ಮುಗಿದ ತಕ್ಷನ ವಿವಾಹವಾಗುವುದಾಗಿ ಹೇಳಿದ್ದಾಳೆ ಎಂದು ಶಶಿಧರ್ ತನ್ನ ತಾಯಿಯ ಬಳಿಯೂ ಹೇಳಿದ್ದ ಎನ್ನಲಾಗಿದೆ. ಆದರೆ ಕಳೆದ ಸೆಪ್ಟಂಬರ್ 8ರಂದು ಬೆಳಗ್ಗೆ ಶಶಿಧರ್ ಅಕ್ಷತಾಳನ್ನು ನೋಡಿಕೊಂಡು ಬರುವುದಾಗಿಳಿ ತೆರಳಿದವನು ಮನೆಗೆ ಬಂದದ್ದು ಮಾತ್ರ ಹೆಣವಾಗಿ ಇದು ನಿಗೂಢಸಾವು ಎಂದು ಮಂಗಳಮ್ಮ ದೂರಿನಲ್ಲಿ ತಿಳಿಸಿದ್ದಾರೆ.[ರವಿ ಸಾವು ನಿಗೂಢ, ಮರಣೋತ್ತರ ಪರೀಕ್ಷೆಯೂ ನಿಗೂಢ]

ಶಶಿಧರ್ ಸ್ನೇಹಿತರು ನಿಮ್ಮ ಮಗ ಮೈಸೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ ಆತನ ಶವವನ್ನು ಊರಿಗೆ ತಂದು, ಮರಣೋತ್ತರ ಪರೀಕ್ಷೆಯನ್ನು ಮಾಡಿಸದೆ ಅಂತ್ಯಕ್ರಿಯೆ ಮಾಡಿಸಿದ್ದಾರೆ.
ಇನ್ನು ಆತನ ಮೊಬೈಲಿನಲ್ಲಿ ಯಾವುದೇ ಮಾಹಿತಿ ಇಲ್ಲದೆ ಎಲ್ಲ ದೂರವಾಣಿಗಳು ಡಿಲೀಟ್ ಆಗಿವೆ. ಅದರೆ ಶಶಿಧರ್ ಮತ್ತು ಅಕ್ಷತಾ ಚಿತ್ರಗಳು ಫೇಸ್ ಬುಕ್ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದೇ ಈ ನಿಗೂಢಸಾವಿಗೆ ಕಾರಣ ಎಂಬ ಅನುಮಾನಗಳು ಹೆಚ್ಚಾಗಿವೆ. ಈ ವೇಳೆ ಅಕ್ಷತಾ ಕೂಡ ಕರೆಮಾಡಿ ಶಶಿಧರ್ ತಂಗಿಯನ್ನು ಎಚ್ಚರಿಸಿದ್ದಳು ಎನ್ನಲಾಗಿದೆ.
ಸೊಸೆಯ ಮೇಲೆ ಮಾವನಿಂದ ಅತ್ಯಾಚಾರಕ್ಕೆ ಯತ್ನ
ಮೈಸೂರು: ಸೊಸೆ ಮನೆಯಲ್ಲಿ ಒಬ್ಬಳೇ ಇರುವಾಗ ಆಕೆಯ ಮಾವ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಜಾಗನಕೋಟೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜಾಗನಕೋಟೆ ಗ್ರಾಮದ ಮಹೇಶ ಅವರ ಪತ್ನಿ ಪಲ್ಲವಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆಗೆ ಬಂದ ಮಾವ ನಾಗರಾಜು ಜನವರಿ 17 ರ ಮಧ್ಯಾಹ್ನ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇದರಿಂದ ಹೆದರಿದ ಪಲ್ಲವಿ ಜೋರಾಗಿ ಕಿರುಚಿಕೊಂಡಿದ್ದು, ಗಾಬರಿಗೊಂಡ ಮಾವ ಮನೆಯಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ ತೀವ್ರ ಮನನೊಂದ ಪಲ್ಲವಿ ಬೀಚನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಗರಾಜು ಪತ್ತೆಗಾಗಿ ಬಲೆ ಬೀಸಿದ್ದಾರೆ.
ವಿದ್ಯಾರ್ಥಿನಿ ನೇಣಿಗೆ ಶರಣು
ಮೈಸೂರು: ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ರಮ್ಮನಹಳ್ಳಿ ನಿವಾಸಿ ಪಲ್ಲವಿ(19)ಎಂದು ಗುರುತಿಸಲಾಗಿದೆ. ಈಕೆ ಶನಿವಾರ ಸಂಜೆ ಊಟ ಮುಗಿಸಿ ತನ್ನ ರೂಮಿಗೆ ತೆರಳಿದ್ದಳು. ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications