ಮೇಟಗಳ್ಳಿಯಲ್ಲಿ ವಿಜಯನಗರ ಸಾಮ್ರಾಜ್ಯ ಆಡಳಿತಾವಧಿಯ ಮೂರು ವೀರಗಲ್ಲುಗಳು ಪತ್ತೆ
ಮೈಸೂರು, ಜುಲೈ 29: ಇಲ್ಲಿಗೆ ಸಮೀಪದ ಮೇಟಗಳ್ಳಿಯಲ್ಲಿ 15ನೇ ಶತಮಾನದ್ದೆಂದು ಹೇಳಲಾದ ಮೂರು ವೀರಗಲ್ಲುಗಳು ಪತ್ತೆಯಾಗಿದ್ದು, ಇವು ವಿಜಯನಗರ ಸಾಮ್ರಾಜ್ಯದ ಆಡಳಿತ ಅವಧಿಯದ್ದೆಂದು ತಿಳಿದುಬಂದಿದೆ.
ಗ್ರಾಮದ ಸ್ವಚ್ಛತೆಗೆ ಮುಂದಾದ ವೇಳೆ ಗ್ರಾಮಸ್ಥರ ಕಣ್ಣಿಗೆ ಈ ವೀರಗಲ್ಲುಗಳು ಬಿದ್ದಿವೆ. ಮಣ್ಣಿನಲ್ಲಿ ಒಂದು ವೀರಗಲ್ಲು ಹುದುಗಿದ್ದು, ಗಿಡಗಂಟಿಗಳ ಮಧ್ಯೆ ಎರಡು ವೀರಗಲ್ಲುಗಳು ಪತ್ತೆಯಾಗಿವೆ. ಇವು ಕಪ್ಪುಶಿಲೆಯಲ್ಲಿ ನಿರ್ಮಿಸಿರುವ ಪುರಾತನ ವೀರಗಲ್ಲುಗಳಾಗಿದ್ದು, ಮಣ್ಣಿನಲ್ಲಿ ಮತ್ತಷ್ಟು ವೀರಗಲ್ಲುಗಳು ಹುದುಗಿರುವ ಸಾಧ್ಯತೆ ಇದೆ.

ಪುರಾತತ್ವ ಇಲಾಖೆ ಅಧಿಕಾರಿಗಳಾದ ಸುನಿಲ್ ಕುಮಾರ್ ಹಾಗೂ ತಂಡ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವೀರಗಲ್ಲಿನಲ್ಲಿ ಮೂರು ಪಟ್ಟಿಕೆ (section) ಇದೆ. ಕೆಳಗಿನ ಪಟ್ಟಿಕೆಯಲ್ಲಿ ವೀರರು ಹೋರಾಡುತ್ತಿರುವ ದೃಶ್ಯ ಕೆತ್ತನೆಯಾಗಿದೆ. ಮಧ್ಯದ ಪಟ್ಟಿಕೆಯಲ್ಲಿ ಹೋರಾಟಗಾರರು ಮಡಿದ ನಂತರ ಅಪ್ಸರೆಯರು ಸ್ವರ್ಗಕ್ಕೆ ಕೊಂಡೊಯ್ಯುವ ದೃಶ್ಯ ಕೆತ್ತನೆಯಾಗಿದೆ. ಮೇಲಿನ ಪಟ್ಟಿಕೆಯಲ್ಲಿ ಹೋರಾಟದಲ್ಲಿ ಮಡಿದವರಿಗೆ ಸ್ವರ್ಗ ಪ್ರಾಪ್ತಿಯಾಗಿ ಸೂರ್ಯ ಚಂದ್ರರು ಇರುವವರೆಗೆ ಅಜರಾಮರವಾಗಿ ಇರುವ ದೃಶ್ಯ ಕೆತ್ತನೆಯಾಗಿದೆ. ಮೂರು ದೃಶ್ಯಗಳನ್ನ ಮೂರು ಪಟ್ಟಿಕೆಯಲ್ಲಿ ಕೆತ್ತನೆ ಮಾಡಿರುವ ಕಲಾವಿದನ ಕೈಚಳಕ ಇತಿಹಾಸವನ್ನು ನೆನಪಿಸುವಂತೆ ಮಾಡುತ್ತದೆ ಎಂದಿದ್ದಾರೆ.

ಈ ವೀರಗಲ್ಲುಗಳನ್ನು ಸಂರಕ್ಷಿಸಲು ಪುರಾತತ್ವ ಇಲಾಖೆ ನಿರ್ಧರಿಸಿದೆ. ಮುಂದಿನ ಪೀಳಿಗೆಗೆ ಗತಕಾಲದ ಇತಿಹಾಸವನ್ನು ಪರಿಚಯಿಸುವ ಉದ್ದೇಶ ಪುರಾತತ್ವ ಇಲಾಖೆಗೆ ಇದೆ. ಆದರೆ ಗ್ರಾಮಸ್ಥರೇ ಇವುಗಳನ್ನು ಸಂರಕ್ಷಿಸಲು ನಿರ್ಧಾರ ಕೈಗೊಂಡಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications