ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟಿ.ನರಸೀಪುರದಲ್ಲಿ ಬೈಕ್ ಅಪಘಾತ; ಬಸ್ ಗೆ ಕಾಯುತ್ತಿದ್ದ ಮೂವರ ಸಾವು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 21: ಬಸ್​ಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಬೈಕ್ ಹರಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಕಡೆಯಿಂದ ವೇಗವಾಗಿ ಬಂದ ಸವಾರ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಡ್ಡಲಾಗಿ ಬಂದ ಮೊಪೆಡ್​ಗೆ ಗುದ್ದಿದ್ದಾನೆ. ಆಗ ಬಸ್​ಗೆ ಕಾಯುತ್ತಿದ್ದವರ ಮೇಲೆ ಬೈಕ್ ಹರಿದು ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕ್​ ಸವಾರ ಸಾಯಿಮಾನ್ ಸೇಠ್​ ವೇಗವಾಗಿ ಬರುತ್ತಿದ್ದ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದು, ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಸಿಗ್ನಲ್ ಜಂಪ್ ಮಾಡೋ ಮುನ್ನ ಈ ವಿಷಯ ನಿಮ್ಮ ನೆನಪಿನಲ್ಲಿರಲಿ...ಸಿಗ್ನಲ್ ಜಂಪ್ ಮಾಡೋ ಮುನ್ನ ಈ ವಿಷಯ ನಿಮ್ಮ ನೆನಪಿನಲ್ಲಿರಲಿ...

Three Killed In Bike Accident Near T Narasipura

ಮೃತರನ್ನು ಚಿಕ್ಕಣ್ಣಮ್ಮ, ಬಸವರಾಜು ಹಾಗೂ ದಾಸಪ್ಪ ಎಂದು ಗುರುತಿಸಲಾಗಿದೆ. ಇನ್ನಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೈಕ್ ಸವಾರನ ಸ್ಥಿತಿಯೂ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ವ್ಯಕ್ತಿ ಕೇರಳದವ ಎನ್ನಲಾಗಿದೆ. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Three persons were killed when a bike rammed into a passengers waiting for a bus in T Narasipura of mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X