ನಾಗರಹೊಳೆಯಲ್ಲಿ ಕಾಣೆಯಾಗಿದ್ದ ಮೂರು ಹುಲಿ ಮರಿಗಳು ಪತ್ತೆ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮೈಸೂರು, ನವೆಂಬರ್, 16: ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹುಲಿಯ ಮೂರು ಮರಿಗಳ ದೃಶ್ಯ ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ಸೆರೆಯಾಗಿವೆ. ಕಾಣೆಯಾಗಿದ್ದ ಹುಲಿ ಮರಿಗಳು ಪತ್ತೆಯಾದ ತಕ್ಷಣ ವನ್ಯಜೀವಿ ಆಸಕ್ತರು ನಿಟ್ಟುಸಿರು ಬಿಟ್ಟಿದ್ದಾರೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಜಮೀನಿನಲ್ಲಿ ಅಳವಡಿಸಿದ್ದ ಉರುಳಿಗೆ 12 ವರ್ಷದ ಹೆಣ್ಣು ಹುಲಿ ಮೃತಪಟ್ಟಿತ್ತು. ಅಲ್ಲದೆ, ಹೆಣ್ಣು ಹುಲಿಗೆ ಮೂರು ಮರಿಗಳಿರುವುದು ಗೊತ್ತಾಗಿತ್ತು. ಪುಟ್ಟ ಮರಿಗಳಾದ ಕಾರಣ ಇವುಗಳು ಹಸಿವಿನಿಂದ ಸಾಯಬಹುದು ಅಥವಾ ಜಾನುವಾರುವಾರು, ಜನರು ಬೇಟೆ ಆಡಬಹುದು ಎಂಬ ಆತಂಕವೂ ಎದುರಾಗಿತ್ತು. ಆಗ ಮತ್ತಿಗೂಡು ಆನೆ ಶಿಬಿರದ ಭೀಮ ಮತ್ತು ಅಭಿಮನ್ಯು ಸೇರಿದಂತೆ 4 ಸಾಕಾನೆಗಳೊಂದಿಗೆ ಭಾನುವಾರ ಬೆಳಗ್ಗಿನಿಂದ ಅರಣ್ಯ ಸಿಬ್ಬಂದಿ ಕೂಂಬಿಂಗ್ ಪ್ರಾರಂಭಿಸಿದ್ದರು. ಹುಲಿ ಹೆಜ್ಜೆಗುರುತು ಪತ್ತೆಯಾದ ಮೂರು ಕಡೆ ಬೋನ್ ಇರಿಸಲಾಗಿತ್ತು. ಅಲ್ಲದೇ, ಕ್ಯಾಮರಾಗಳನ್ನೂ ಅಳವಡಿಸಲಾಗಿತ್ತು.

ಕಾಣೆಯಾಗಿದ್ದ ಮೂರು ಹುಲಿ ಮರಿಗಳು ಪತ್ತೆ
ವಲಯದ ಅರಣ್ಯ ಅಂಚಿನಿಂದ ಸುಮಾರು 1 ಕಿಲೋ ಮೀಟರ್ ಕಾಡಿನ ಒಳಗೆ ಅಳವಡಿಸಿದ್ದ ಟ್ರ್ಯಾಪಿಂಗ್ ಕ್ಯಾಮೆರಾದಲ್ಲಿ ನವೆಂಬರ್ 16ರ ಬೆಳಗ್ಗೆ ಮೂರು ಮರಿಗಳು ಜಿಂಕೆ ತಿನ್ನುವ, ಆಟವಾಡುವ ದೃಶ್ಯ ಸೆರೆಯಾಗಿದೆ. ಇದರಲ್ಲಿ ಎರಡು ಮರಿಗಳು ಚೆನ್ನಾಗಿ ಕಂಡು ಬರುತ್ತಿದ್ದು, ಮತ್ತೊಂದು ಮರಿ ಇನ್ನೊಂದು ಭಾಗದಲ್ಲಿ ಕಂಡು ಬರುವುದು ಅಸ್ಪಷ್ಟವಾಗಿ ಕಾಣುತ್ತದೆ. ಇನ್ನಿತರ ಕೆಲವು ಸ್ಥಳಗಳಲ್ಲಿ ಮರಿ ಹುಲಿಗಳು ಓಡಾಡಿರುವ ಹೆಜ್ಜೆ ಗುರುತುಗಳು ಕಂಡು ಬಂದಿದೆ.

''ಟ್ರ್ಯಾಪಿಂಗ್ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ಮರಿ ಹುಲಿಗಳ ಛಾಯಾಚಿತ್ರ ಮತ್ತು ದಶ್ಯವಾಳಿಗಳನ್ನು ಗಮನಿಸಲಾಗುದ್ದು, ಮೂರು ಹುಲಿ ಮರಿಗಳು ಆರೋಗ್ಯವಾಗಿರುವುದು ಕಂಡುಬಂದಿದೆ,'' ಎಂದು ಹುಣಸೂರು ಉಪ ವಿಭಾಗ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹುಲಿ ಯೋಜನೆ ನಿರ್ದೆಶಕ ಹರ್ಷವರ್ಧನ್ ನರಗುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications