ನಾಗರಹೊಳೆಯಲ್ಲಿ ಕಾಣೆಯಾಗಿದ್ದ ಮೂರು ಹುಲಿ ಮರಿಗಳು ಪತ್ತೆ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮೈಸೂರು, ನವೆಂಬರ್, 16: ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹುಲಿಯ ಮೂರು ಮರಿಗಳ ದೃಶ್ಯ ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ಸೆರೆಯಾಗಿವೆ. ಕಾಣೆಯಾಗಿದ್ದ ಹುಲಿ ಮರಿಗಳು ಪತ್ತೆಯಾದ ತಕ್ಷಣ ವನ್ಯಜೀವಿ ಆಸಕ್ತರು ನಿಟ್ಟುಸಿರು ಬಿಟ್ಟಿದ್ದಾರೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಜಮೀನಿನಲ್ಲಿ ಅಳವಡಿಸಿದ್ದ ಉರುಳಿಗೆ 12 ವರ್ಷದ ಹೆಣ್ಣು ಹುಲಿ ಮೃತಪಟ್ಟಿತ್ತು. ಅಲ್ಲದೆ, ಹೆಣ್ಣು ಹುಲಿಗೆ ಮೂರು ಮರಿಗಳಿರುವುದು ಗೊತ್ತಾಗಿತ್ತು. ಪುಟ್ಟ ಮರಿಗಳಾದ ಕಾರಣ ಇವುಗಳು ಹಸಿವಿನಿಂದ ಸಾಯಬಹುದು ಅಥವಾ ಜಾನುವಾರುವಾರು, ಜನರು ಬೇಟೆ ಆಡಬಹುದು ಎಂಬ ಆತಂಕವೂ ಎದುರಾಗಿತ್ತು. ಆಗ ಮತ್ತಿಗೂಡು ಆನೆ ಶಿಬಿರದ ಭೀಮ ಮತ್ತು ಅಭಿಮನ್ಯು ಸೇರಿದಂತೆ 4 ಸಾಕಾನೆಗಳೊಂದಿಗೆ ಭಾನುವಾರ ಬೆಳಗ್ಗಿನಿಂದ ಅರಣ್ಯ ಸಿಬ್ಬಂದಿ ಕೂಂಬಿಂಗ್ ಪ್ರಾರಂಭಿಸಿದ್ದರು. ಹುಲಿ ಹೆಜ್ಜೆಗುರುತು ಪತ್ತೆಯಾದ ಮೂರು ಕಡೆ ಬೋನ್ ಇರಿಸಲಾಗಿತ್ತು. ಅಲ್ಲದೇ, ಕ್ಯಾಮರಾಗಳನ್ನೂ ಅಳವಡಿಸಲಾಗಿತ್ತು.

ಕಾಣೆಯಾಗಿದ್ದ ಮೂರು ಹುಲಿ ಮರಿಗಳು ಪತ್ತೆ
ವಲಯದ ಅರಣ್ಯ ಅಂಚಿನಿಂದ ಸುಮಾರು 1 ಕಿಲೋ ಮೀಟರ್ ಕಾಡಿನ ಒಳಗೆ ಅಳವಡಿಸಿದ್ದ ಟ್ರ್ಯಾಪಿಂಗ್ ಕ್ಯಾಮೆರಾದಲ್ಲಿ ನವೆಂಬರ್ 16ರ ಬೆಳಗ್ಗೆ ಮೂರು ಮರಿಗಳು ಜಿಂಕೆ ತಿನ್ನುವ, ಆಟವಾಡುವ ದೃಶ್ಯ ಸೆರೆಯಾಗಿದೆ. ಇದರಲ್ಲಿ ಎರಡು ಮರಿಗಳು ಚೆನ್ನಾಗಿ ಕಂಡು ಬರುತ್ತಿದ್ದು, ಮತ್ತೊಂದು ಮರಿ ಇನ್ನೊಂದು ಭಾಗದಲ್ಲಿ ಕಂಡು ಬರುವುದು ಅಸ್ಪಷ್ಟವಾಗಿ ಕಾಣುತ್ತದೆ. ಇನ್ನಿತರ ಕೆಲವು ಸ್ಥಳಗಳಲ್ಲಿ ಮರಿ ಹುಲಿಗಳು ಓಡಾಡಿರುವ ಹೆಜ್ಜೆ ಗುರುತುಗಳು ಕಂಡು ಬಂದಿದೆ.

''ಟ್ರ್ಯಾಪಿಂಗ್ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ಮರಿ ಹುಲಿಗಳ ಛಾಯಾಚಿತ್ರ ಮತ್ತು ದಶ್ಯವಾಳಿಗಳನ್ನು ಗಮನಿಸಲಾಗುದ್ದು, ಮೂರು ಹುಲಿ ಮರಿಗಳು ಆರೋಗ್ಯವಾಗಿರುವುದು ಕಂಡುಬಂದಿದೆ,'' ಎಂದು ಹುಣಸೂರು ಉಪ ವಿಭಾಗ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹುಲಿ ಯೋಜನೆ ನಿರ್ದೆಶಕ ಹರ್ಷವರ್ಧನ್ ನರಗುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications