ಪಿರಿಯಾಪಟ್ಟಣ: ಸಿಡಿಲು ಬಡಿದು ಮೂವರಿಗೆ ಗಾಯ
ಮೈಸೂರು, ಮೇ 24 : ಸಿಡಿಲು ಬಡಿದು ಓರ್ವ ಮಹಿಳೆ ಸೇರಿದಂತೆ ಮೂವರು ಗಾಯಗೊಂಡು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಮಿಕ್ಕೆರೆ ಗ್ರಾಮದ ನಿವಾಸಿಗಳಾದ ನವೀನ್, ರಂಜಿತ್, ಪ್ರೇಮಮ್ಮ ಗಾಯಗೊಂಡವರು. ಭಾರಿ ಮಳೆಯಿಂದಾಗಿ ಶೆಡ್ಗೆ ಸಿಡಿಲು ಬಡಿದಿದ್ದು, ಶೆಡ್ ನಲ್ಲಿ ಕುಳಿತಿದ್ದ ಹತ್ತು ಮಂದಿಯ ಪೈಕಿ ಮೂವರಿಗೆ ಗಾಯಗಳಾಗಿವೆ. ಗಾಯಗೊಂಡವರು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲ್ಲೂಕು ಅಧಿಕಾರಿಗಳು ಗಾಯಾಳುಗಳಿಗೆ ಪರಿಹಾರವನ್ನು ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಚಿಕಿತ್ಸೆ ನಂತರ ಮೂವರು ಚೇತರಿಸಿಕೊಳ್ಳುತ್ತಿದ್ದಾರೆ. ಉಳಿದಂತೆ, ಜಿಲ್ಲೆಯ ಎಚ್.ಡಿ.ಕೋಟೆ, ಹಂಪಾಪುರ, ನಂಜನಗೂಡು, ಪಿರಿಯಾಪಟ್ಟಣ ಭಾಗಗಳಲ್ಲಿ ಹೆಚ್ಚು ಮಳೆ ಸುರಿದಿದೆ.

ಮೈಸೂರಿನಲ್ಲಿ ಸುರಿದ ಮಳೆಗೆ ಈ ವರ್ಷದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮರಗಳು ಧರೆಗುರುಳಿವೆ. ದೊಡ್ಡಕೆರೆ ಮೈದಾನ, ಶಾಂತಲಾ ಸಿನಿಮಾ ಮಂದಿರ ಸಮೀಪ, ಗಾಣಿಗರ ಬೀದಿ, ಅವಿಲಾ ಕಾನ್ವೆಂಟ್ ಹತ್ತಿರ, ನ್ಯೂ ಸಯ್ಯಾಜಿರಾವ್ ರಸ್ತೆಯ ಅನಘ ಆಸ್ಪತ್ರೆ ಬಳಿ, ಶಾರದಾದೇವಿನಗರ, ಅಪೊಲೊ ಆಸ್ಪತ್ರೆ ಬಳಿ, ರಾಮಕೃಷ್ಣನಗರ, ಕುವೆಂಪುನಗರ, ಸರಸ್ವತಿಪುರಂನ ಬೇಕ್ ಪಾಯಿಂಟ್, ಜೆ.ಪಿ.ನಗರದ 'ಇ' ಬ್ಲಾಕ್, ಚಾಮುಂಡಿಪುರಂನ ಗೀತಾ ರಸ್ತೆ, ಕೃಷ್ಣಮೂರ್ತಿಪುರಂನ 3ನೇ ಅಡ್ಡರಸ್ತೆ, ರಾಮಾನುಜರಸ್ತೆ, ಕುವೆಂಪುನಗರದ ಕಾರ್ಪೊರೇಷನ್ ಬ್ಯಾಂಕ್ ಎದುರು, ರಾಘವೇಂದ್ರ ಕಲ್ಯಾಣ ಮಂಟಪದ ಬಳಿ ಮರಗಳು ಹಾಗೂ ಮರಗಳ ಕೊಂಬೆಗಳು ಮುರಿದು ಬಿದ್ದಿವೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications