ಪಿರಿಯಾಪಟ್ಟಣ: ಸಿಡಿಲು ಬಡಿದು ಮೂವರಿಗೆ ಗಾಯ
ಮೈಸೂರು, ಮೇ 24 : ಸಿಡಿಲು ಬಡಿದು ಓರ್ವ ಮಹಿಳೆ ಸೇರಿದಂತೆ ಮೂವರು ಗಾಯಗೊಂಡು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಮಿಕ್ಕೆರೆ ಗ್ರಾಮದ ನಿವಾಸಿಗಳಾದ ನವೀನ್, ರಂಜಿತ್, ಪ್ರೇಮಮ್ಮ ಗಾಯಗೊಂಡವರು. ಭಾರಿ ಮಳೆಯಿಂದಾಗಿ ಶೆಡ್ಗೆ ಸಿಡಿಲು ಬಡಿದಿದ್ದು, ಶೆಡ್ ನಲ್ಲಿ ಕುಳಿತಿದ್ದ ಹತ್ತು ಮಂದಿಯ ಪೈಕಿ ಮೂವರಿಗೆ ಗಾಯಗಳಾಗಿವೆ. ಗಾಯಗೊಂಡವರು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲ್ಲೂಕು ಅಧಿಕಾರಿಗಳು ಗಾಯಾಳುಗಳಿಗೆ ಪರಿಹಾರವನ್ನು ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಚಿಕಿತ್ಸೆ ನಂತರ ಮೂವರು ಚೇತರಿಸಿಕೊಳ್ಳುತ್ತಿದ್ದಾರೆ. ಉಳಿದಂತೆ, ಜಿಲ್ಲೆಯ ಎಚ್.ಡಿ.ಕೋಟೆ, ಹಂಪಾಪುರ, ನಂಜನಗೂಡು, ಪಿರಿಯಾಪಟ್ಟಣ ಭಾಗಗಳಲ್ಲಿ ಹೆಚ್ಚು ಮಳೆ ಸುರಿದಿದೆ.

ಮೈಸೂರಿನಲ್ಲಿ ಸುರಿದ ಮಳೆಗೆ ಈ ವರ್ಷದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮರಗಳು ಧರೆಗುರುಳಿವೆ. ದೊಡ್ಡಕೆರೆ ಮೈದಾನ, ಶಾಂತಲಾ ಸಿನಿಮಾ ಮಂದಿರ ಸಮೀಪ, ಗಾಣಿಗರ ಬೀದಿ, ಅವಿಲಾ ಕಾನ್ವೆಂಟ್ ಹತ್ತಿರ, ನ್ಯೂ ಸಯ್ಯಾಜಿರಾವ್ ರಸ್ತೆಯ ಅನಘ ಆಸ್ಪತ್ರೆ ಬಳಿ, ಶಾರದಾದೇವಿನಗರ, ಅಪೊಲೊ ಆಸ್ಪತ್ರೆ ಬಳಿ, ರಾಮಕೃಷ್ಣನಗರ, ಕುವೆಂಪುನಗರ, ಸರಸ್ವತಿಪುರಂನ ಬೇಕ್ ಪಾಯಿಂಟ್, ಜೆ.ಪಿ.ನಗರದ 'ಇ' ಬ್ಲಾಕ್, ಚಾಮುಂಡಿಪುರಂನ ಗೀತಾ ರಸ್ತೆ, ಕೃಷ್ಣಮೂರ್ತಿಪುರಂನ 3ನೇ ಅಡ್ಡರಸ್ತೆ, ರಾಮಾನುಜರಸ್ತೆ, ಕುವೆಂಪುನಗರದ ಕಾರ್ಪೊರೇಷನ್ ಬ್ಯಾಂಕ್ ಎದುರು, ರಾಘವೇಂದ್ರ ಕಲ್ಯಾಣ ಮಂಟಪದ ಬಳಿ ಮರಗಳು ಹಾಗೂ ಮರಗಳ ಕೊಂಬೆಗಳು ಮುರಿದು ಬಿದ್ದಿವೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications