ಕಪಿಲ ನದಿಯಲ್ಲಿ ಸಿಕ್ಕಿದ್ದು ಮೂರು ಟ್ರ್ಯಾಕ್ಟರ್ ತ್ಯಾಜ್ಯ
ಫೆಬ್ರವರಿ 17ರಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಪಿಲ ನದಿಯ ಸೋಪಾನ ಕಟ್ಟೆ ಬಳಿ ನಡೆದ ಸ್ವಚ್ಛತೆಯಲ್ಲಿ ಸುಮಾರು ಮೂರು ಟ್ರ್ಯಾಕ್ಟರ್ ನಷ್ಟು ತ್ಯಾಜ್ಯ ಸಿಕ್ಕಿದೆ.
ನಂಜನಗೂಡು, ಫೆಬ್ರವರಿ. 17 : ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡಿನ ಕಪಿಲ ನದಿ ಅಶುಚಿತ್ವಗೊಂಡಿದ್ದ ಹಿನ್ನಲೆಯಲ್ಲಿ ಹಲವು ಸಂಘಟನೆಗಳ ಸಹಕಾರದೊಂದಿಗೆ ಶ್ರಮದಾನದ ಮೂಲಕ ನದಿಯಲ್ಲಿದ್ದ ತ್ಯಾಜ್ಯ ವಸ್ತುಗಳು, ಕಲ್ಮಶಗಳನ್ನು ಹೊರತೆಗೆಯುವ ಮೂಲಕ ಸ್ವಚ್ಛಗೊಳಿಸಲಾಯಿತು.
ಫೆಬ್ರವರಿ 17ರಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಪಿಲ ನದಿಯ ಸೋಪಾನ ಕಟ್ಟೆ ಬಳಿ ನಡೆದ ಸ್ವಚ್ಛತೆಯಲ್ಲಿ ಸುಮಾರು ಮೂರು ಟ್ರ್ಯಾಕ್ಟರ್ ನಷ್ಟು ತ್ಯಾಜ್ಯ ಸಿಕ್ಕಿದೆ.
ದೂರದಿಂದ ಬರುವ ಭಕ್ತರು ಹಾಗೂ ಪ್ರವಾಸಿಗರು ಇಲ್ಲಿನ ಸೋಪಾನ ಕಟ್ಟೆಯಲ್ಲಿ ಸ್ನಾನ ಮಾಡುವುದರೊಂದಿಗೆ ತಮ್ಮೊಂದಿಗೆ ತರುವ ವಸ್ತುಗಳು, ಪ್ಲಾಸ್ಟಿಕ್ ಕವರ್, ಬಟ್ಟೆ ಬರೆ, ಇನ್ನಿತರ ಪದಾರ್ಥಗಳನ್ನು ಎಸೆದು ಹೋಗುತ್ತಿದ್ದರು. ಇದೆಲ್ಲವೂ ನದಿಯಲ್ಲಿ ಸಂಗ್ರಹವಾಗಿ ನೀರು ಕಲ್ಮಶಗೊಳ್ಳತೊಡಗಿತ್ತು.

ಮೊದಲೆಲ್ಲ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದರಿಂದ ನದಿಗೆ ಬಿದ್ದ ತ್ಯಾಜ್ಯ ವಸ್ತುಗಳು ಹರಿದು ಹೋಗುತ್ತಿತ್ತು. ಆದರೆ ಈ ಬಾರಿ ನದಿಯಲ್ಲಿ ನೀರು ಕಡಿಮೆ ಪ್ರಮಾಣದಲ್ಲಿ ಹರಿಯುತ್ತಿರುವುದರಿಂದ ತ್ಯಾಜ್ಯಗಳೆಲ್ಲ ಅಲ್ಲಲ್ಲಿ ನಿಂತು ಅಸಹನೀಯ ವಾತಾವರಣವನ್ನು ಸೃಷ್ಟಿಸಿತ್ತು.
ಇದನ್ನು ನೋಡಿದ ನಂಜನಗೂಡು ನಗರದ ಯುವ ಬ್ರಿಗೇಡ್, ಶ್ರೀ ಕಂಠೇಶ್ವರ ಸ್ವಾಮಿ ದೋಣಿ ನಡೆಸುವವರ ಸಂಘ, ಜಯಕರ್ನಾಟಕ ಸಂಘಟನೆಯು ಜಂಟಿಯಾಗಿ ಸ್ವಪ್ರೇರಣೆಯಿಂದ ಶ್ರಮದಾನದ ಮೂಲಕ ಕಪಿಲ ನದಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಂಡಿತು.

ಈ ಸಂದರ್ಭ ನದಿ ಮಧ್ಯೆ ಸಂಗ್ರಹವಾಗಿದ್ದ ಬಟ್ಟೆ ಬರೆ ಸೇರಿದಂತೆ ತ್ಯಾಜ್ಯವನ್ನು ಹೊರ ತೆಗೆಯಲಾಗಿದ್ದು ಸುಮಾರು ಮೂರು ಟ್ರ್ಯಾಕ್ಟರ್ನಷ್ಟು ಬಟ್ಟೆ, ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯ ಸಿಕ್ಕಿದೆ.
ಶ್ರಮದಾನದ ಬಳಿಕ ಮಾತನಾಡಿದ ಸಂಘಟನೆಯ ಪದಾಧಿಕಾರಿಗಳು ಶ್ರೀಕಂಠೇಶ್ವರನ ಸನ್ನಿಧಿಗೆ ಬರುವ ಭಕ್ತಾಧಿಗಳು ನದಿಯ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನದಿಯಲ್ಲಿ ಹಳೆಯ ಬಟ್ಟೆ ಬರೆಗಳನ್ನು ಎಸಯಬಾರದು.
ಕಪಿಲ ನದಿಯ ನೀರನ್ನು ಶ್ರೀ ಕಂಠೇಶ್ವರನ ಅಭಿಷೇಕಕ್ಕೆ ಬಳಸುವುದರಿಂದ ನದಿಯ ನೀರನ್ನು ಮಲೀನಗೊಳಿಸದೆ ಸ್ವಚ್ಛತೆಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications