ಕಾಡುಹಂದಿಗೆ ಇಟ್ಟ ಉರುಳಿಗೆ ಗಂಡು ಚಿರತೆ ಬಲಿ!
ಮೈಸೂರು, ಜುಲೈ 9: ಬೇಟೆಗಾರರು ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಗಂಡು ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ಮುಮ್ಮಡಿಕಾವಲು ಮೀಸಲು ಅರಣ್ಯದಲ್ಲಿ ನಡೆದಿದೆ.
ಕಿಡಿಗೇಡಿಗಳು ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿದ ಚಿರತೆ ಮೂರು ವರ್ಷದ ಪ್ರಾಯದ್ದಾಗಿದೆ. ಈ ವ್ಯಾಪ್ತಿಯಲ್ಲಿ ಕೆಲವರು ಬೇಟೆಯಾಡುವ ಸಲುವಾಗಿ ಉರುಳು ಹಾಕುತ್ತಿದ್ದು, ಈ ಉರುಳಿಗೆ ಹಂದಿ ಬದಲು ಚಿರತೆ ಸಿಲುಕಿ ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಸಿಎಫ್ ಸೋಮಪ್ಪ, ಆರ್ಎಫ್ಓ ರತನ್ಕುಮಾರ್, ಸಿಬ್ಬಂದಿ ಸಿದ್ದರಾಜು, ರಾಜು, ಬೆಮ್ಮಯ್ಯ ಮೊದಲಾದವರು ಪರಿಶೀಲಿಸಿ, ಉರುಳಿನಿಂದ ಚಿರತೆಯನ್ನು ಬಿಡಿಸಿ ಹೊರತೆಗೆದಿದ್ದಾರೆ.
ಬಳಿಕ ನಾಗರ ಹೊಳೆ ಅರಣ್ಯದ ಪಶುವೈದ್ಯ ಡಾ.ಮುಜೀಬ್ ಖಾನ್ ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಗಿದೆ.

ಈ ಬಗ್ಗೆ ಎಸಿಫ್ ಸೋಮಪ್ಪ ಮಾತನಾಡಿ, ಅರಣ್ಯ ಪ್ರದೇಶದ ಸುತ್ತಲೂ ಪರಿಶೀಲನೆ ನಡೆಸಿ ಎಲ್ಲೆಲ್ಲಿ ಉರುಳು ಅಳವಡಿಸಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ಉರುಳುಗಳನ್ನು ತೆರವುಗೊಳಿಸಲಾಗುವುದು. ಅಲ್ಲದೆ ಕಾಡು ಪ್ರಾಣಿಗಳನ್ನು ಬೇಟೆಯಾಡುವ ಕೀಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ಉರುಳು ಹಾಕಿ ಕಾಡು ಪ್ರಾಣಿಗಳನ್ನು ಬೇಟೆಯಾಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆ ಇತ್ತ ಗಮನಹರಿಸಿ ನಿಯಂತ್ರಿಸದೆ ಹೋದರೆ ಉರುಳಿಗೆ ಸಿಲುಕಿ ಇನ್ನಷ್ಟು ಪ್ರಾಣಿಗಳು ಪ್ರಾಣ ಕಳೆದುಕೊಳ್ಳುವ ದಿನ ದೂರವಿಲ್ಲ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications