ದಸರಾ ಮಹೋತ್ಸವ: ವರ್ಚುವಲ್ ಮೂಲಕ ಲಕ್ಷಾಂತರ ಜನರನ್ನು ಆಕರ್ಷಿಸಿದ ಕಾರ್ಯಕ್ರಮಗಳು
ಮೈಸೂರು, ಅಕ್ಟೋಬರ್ 23: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಸರಳವಾಗಿ ನಡೆಯುತ್ತಿರುವ ನಾಡಹಬ್ಬ ದಸರಾ ಮಹೋತ್ಸವ ವರ್ಚುವಲ್ ಮೂಲಕ ದೇಶ ವಿದೇಶದ ಉದ್ದಗಲಕ್ಕೂ ತಲುಪಿದ್ದು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಂದೇ ದಿನ 6 ಲಕ್ಷಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ.
ವರ್ಚುವಲ್ ವೇದಿಕೆ ಮೂಲಕ ಚೆನ್ನೈ, ಜೈಪುರ, ಕೊಲ್ಕೊತ್ತಾ ಇನ್ನೂ ಮುಂತಾದ ಪ್ರಮುಖ ನಗರಗಳು, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವಾರು ದೇಶಗಳ ಜನರು ದಸರಾ ಕಾರ್ಯಕ್ರಮ ವೀಕ್ಷಣೆ ಮಾಡುತ್ತಿದ್ದಾರೆ. ಈ ಬಾರಿ ದಸರಾ ಕಾರ್ಯಕ್ರಮಗಳು ಅರಮನೆ ವೇದಿಕೆಗೆ ಮಾತ್ರ ಸೀಮಿತವಾಗಿದ್ದು, ಕಾರ್ಯಕ್ರಮದ ವೀಕ್ಷಣೆಗೂ ಜನ ಭಾಗವಹಿಸುವಿಕೆಗೆ ಮಿತಿ ವಿಧಿಸಿದ್ದರಿಂದ ವರ್ಚುವಲ್ ವೇದಿಕೆ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಣೆ ಮಾಡುವಂತೆ ಜಿಲ್ಲಾಡಳಿತ ಮನವಿ ಮಾಡಿತ್ತು.

ಹೀಗಾಗಿ, ಅಧೀಕೃತ ಫೇಸ್ಬುಕ್ ಮತ್ತು ಯೂಟ್ಯೂಬ್ ಪೇಜ್ನಲ್ಲಿ ನೇರಪ್ರಸಾರ ಮಾಡುವ ಜೊತೆಗೆ ಎಲ್ಲಾ ಚಾನೆಲ್ಗಳಿಗೂ RTMP video link ನೀಡಿ, ನೇರ ಪ್ರಸಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ವರ್ಚುವಲ್ ವೇದಿಕೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಅ.21ರಂದು ನಡೆದ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ಅವರು ನಡೆಸಿಕೊಟ್ಟ ಎಸ್ಪಿಬಿ ನುಡಿನಮನ ಕಾರ್ಯಕ್ರಮವನ್ನು ಒಂದೇ ದಿನ ವಾರ್ತಾ ಇಲಾಖೆಯ FB ಪೇಜ್ ನಲ್ಲೇ 1.93 ಲಕ್ಷ ಜನ ವೀಕ್ಷಣೆ ಮಾಡಿದ್ದಾರೆ. ಎಲ್ಲಾ ನೇರ ಪ್ರಸಾರಗಳ ವೀಕ್ಷಣೆಯನ್ನು ಪರಿಗಣಿಸಿದರೆ ಅ.21ರ ಒಂದೇ ಕಾರ್ಯಕ್ರಮವನ್ನು 6 ಲಕ್ಷಕ್ಕೂ ಹೆಚ್ಚು ಜನ ನೋಡಿದ್ದಾರೆ.

ಪ್ರತಿ ದಿನ ಸರಾಸರಿ 20 ಸಾವಿರ ಜನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ FB page ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಅಲ್ಲದೇ 17 ಸ್ಥಳೀಯ ಕೇಬಲ್ ಚಾನೆಲ್ಗಳಿಗೆ live streams ಮಾಡಲು link ಒದಗಿಸಲಾಗಿದ್ದು ಎಲ್ಲಾ ವೀಕ್ಷಣೆ ಸಂಖ್ಯೆಯನ್ನು ಪರಿಗಣಿಸಿದರೆ ಇನ್ನೂ ಹೆಚ್ಚು ಜನ ವೀಕ್ಷಣೆ ಮಾಡಿರುವ ಮಾಹಿತಿ ಸಿಗುತ್ತದೆ ಎಂದು ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ದಸರಾ ವರ್ಚುವಲ್ ಪ್ರಸಾರದ ನೋಡಲ್ ಅಧಿಕಾರಿ ಆರ್. ರಾಜು ತಿಳಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications