ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೆ ಥಳಿಸಿದ ಪುಂಡರು

ಮೈಸೂರು, ಆಗಸ್ಟ್ 20: ಜನರಿಗೆ ಕಿರಿಕಿರಿ ಮಾಡುತ್ತಿದ್ದಾಗ ಬುದ್ಧಿವಾದ ಹೇಳಿದ ಪೊಲೀಸರಿಗೇ ಥಳಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಹೊರವಲಯದ ಮೇಟಗಳ್ಳಿಯಲ್ಲಿ ಹೆಡ್‌ ಕಾನ್‌ಸ್ಟೆಬಲ್ ಸಲೀಂ ಪಾಷಾ ಹಾಗೂ ಕಾನ್‌ಸ್ಟೆಬಲ್ ಅಶೋಕಕುಮಾರ್ ಅವರು ಗಸ್ತಿನಲ್ಲಿದ್ದಾಗ ಹೆಬ್ಬಾಳು ಮುಖ್ಯರಸ್ತೆಯ ಕೇರಳಾಪುರದ ಮಿಲ್ಟ್ರಿ ಹೋಟೆಲ್ ಮುಂದೆ 4ರಿಂದ 5 ಮಂದಿ ಜೋರಾಗಿ ಮಾತನಾಡುತ್ತಾ ಗದ್ದಲ ಉಂಟು ಮಾಡುತ್ತಿದ್ದರು.

ಹೀಗೆ ಗಲಾಟೆ ಮಾಡಬೇಡಿ ಎಂದು ಪೊಲೀಸರು ಸೂಚನೆ ನೀಡಿದ್ದಾರೆ. ಇದರಿಂದ ಕೆರಳಿದ ವಿಕಾಸ್ ಅಲಿಯಾಸ್ ವಿಕ್ಕಿ ಎಂಬಾತ ಅವಾಚ್ಯ ಶಬ್ದಗಳಿಂದ ಪೊಲೀಸರನ್ನು ನಿಂದಿಸಿ ಕಾನ್‌ಸ್ಟೆಬಲ್ ಅಶೋಕಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ.

Thugs beat the police in Mysuru

ಹೀಗೆ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಯುವಕನನ್ನು ಮೇಟಗಳ್ಳಿ ಠಾಣಾ ಪೊಲೀಸರು ಬಂಧಿಸಿದ್ದರೆ, ಇತ್ತ ಗುಂಪು ಕಟ್ಟಿಕೊಂಡು ಗಲಾಟೆ ಮಾಡುತ್ತಿದ್ದವರನ್ನು ಹುಣಸೂರು ಪಟ್ಟಣ ಪೊಲೀಸರು ಬಂಧಿಸಿ, ಜೈಲಿಗಟ್ಟುವ ಮೂಲಕ ಪುಂಡರಿಗೆ ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+