ಜಂಬೂ ಸವಾರಿ ಟಿಕೆಟ್ ಸೋಲ್ಡ್ ಔಟ್
ಮೈಸೂರು, ಅ.10 : ದಸರಾ ಜಂಬೂ ಸವಾರಿ ಮತ್ತು ಪಂಜಿನ ಕವಾಯಿತಿನ ಟಿಕೆಟ್ ಗಳು ಲಭ್ಯವಿಲ್ಲ. ಟಿಕೆಟ್ ಮಾರಾಟ ಪ್ರಾರಂಭಿಸಿದ ಕೆಲವೇ ಗಂಟೆಗಳಲ್ಲಿ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಇದರಿಂದ ಬಹಳಷ್ಟು ಪ್ರವಾಸಿಗರಿಗೆ ನಿರಾಸೆಯಾಗಿದೆ.
ಅ.14ರಂದು ನಡೆಯುವ ಜಂಬೂ ಸವಾರಿ ವೀಕ್ಷಿಸಲು ಜಿಲ್ಲಾಡಳಿತ 1000 ಮತ್ತು 500 ಮುಖಬೆಲೆಯ 2,800 ಟಿಕೆಟ್ ಗಳನ್ನು ಮಾರಾಟಕ್ಕೆ ಬಿಡುಗಡೆ ಮಾಡಿತ್ತು. ಬುಧವಾರ ಟಿಕೆಟ್ ಮಾರಾಟ ಪ್ರಾರಂಭವಾಯಿತು ಅಂದು ಸಂಜೆಯೊಳಗೆ ಟಿಕೆಟ್ ಗಳು ಖಾಲಿಯಾಗಿವೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಟಿಕೆಟ್ ಗಳಿ ಪ್ರವಾಸಿಗರು ಕೈಗೆ ತಲುಪಿವೆ. ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಅಧಿಕಾರಿಗಳು ಟಿಕೆಟ್ ಪಡೆಯವಲ್ಲಿ ಹಸ್ತಕ್ಷೇಪ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುಮಾರು 200 ಟಿಕೆಟ್ ಗಳನ್ನು ಆನ್ ಲೈನ್ ಮೂಲಕ ಮಾರಾಟ ಮಾಡಲಾಗಿದೆ. ಪಂಜಿನ ಕವಾಯಿತು ವೀಕ್ಷಿಸಲು 7000 ಟಿಕೆಟ್ ಗಳನ್ನು ಮುದ್ರಿಸಲಾಗಿತ್ತು ಅವುಗಳ ಮುಖಬೆಲೆ 200ರೂ. ಆಗಿತ್ತು. ಅವುಗಳ ಕೂಡಾ ಸೋಲ್ಡ್ ಔಟ್ ಆಗಿದೆ.
ಜಂಬೂ ಸವಾರಿ ನೋಡಲು ಭಾನುವಾರ ಮತ್ತು ಸೋಮವಾರ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಟಿಕೆಟ್ ಲಭ್ಯವಿಲ್ಲ. ಆದ್ದರಿಂದ ಜಂಬೂ ಸವಾರಿ ತೆರಳುವ ಮಾರ್ಗದಲ್ಲಿ ನಿಂತು ದಸರಾ ಸಂಭ್ರಮ ಕಣ್ತುಂಬಿಕೊಳ್ಳಬಹುದು.
ಪ್ರತಿವರ್ಷ ಜಂಬೂ ಸವಾರಿಗೆ ಎರಡು ದಿನಗಳಿರುವಾಗ ಜಂಬೂ ಸವಾರಿ ಮತ್ತು ಪಂಜಿನ ಕವಾಯಿತಿನ ಟಿಕೆಟ್ ಗಳನ್ನು ಮಾರಾಟಕ್ಕೆ ಇಡಲಾಗುತ್ತಿತ್ತು. ಈ ಬಾರಿ ಮುಂಚಿತವಾಗಿ ಟಿಕೆಟ್ ಮಾರಾಟ ಮಾಡಲಾಗಿದೆ.
ಪ್ರತಿವರ್ಷ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತ್ರ ಟಿಕೆಟ್ ಮಾರಾಟ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಮೈಸೂರು ಮಹಾನಗರ ಪಾಲಿಕೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಟಿಕೆಟ್ ಮಾರಾಟ ಮಾಡಲಾಗಿದೆ. ಸಾರ್ವಜನಿಕರಿಗೆ ಈ ಕುರಿತು ಸರಿಯಾದ ಮಾಹಿತಿ ನೀಡಿಲ್ಲ ಎಂಬ ಆರೋಪವು ಇದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications