ಜಂಬೂ ಸವಾರಿ ಟಿಕೆಟ್ ಸೋಲ್ಡ್ ಔಟ್
ಮೈಸೂರು, ಅ.10 : ದಸರಾ ಜಂಬೂ ಸವಾರಿ ಮತ್ತು ಪಂಜಿನ ಕವಾಯಿತಿನ ಟಿಕೆಟ್ ಗಳು ಲಭ್ಯವಿಲ್ಲ. ಟಿಕೆಟ್ ಮಾರಾಟ ಪ್ರಾರಂಭಿಸಿದ ಕೆಲವೇ ಗಂಟೆಗಳಲ್ಲಿ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಇದರಿಂದ ಬಹಳಷ್ಟು ಪ್ರವಾಸಿಗರಿಗೆ ನಿರಾಸೆಯಾಗಿದೆ.
ಅ.14ರಂದು ನಡೆಯುವ ಜಂಬೂ ಸವಾರಿ ವೀಕ್ಷಿಸಲು ಜಿಲ್ಲಾಡಳಿತ 1000 ಮತ್ತು 500 ಮುಖಬೆಲೆಯ 2,800 ಟಿಕೆಟ್ ಗಳನ್ನು ಮಾರಾಟಕ್ಕೆ ಬಿಡುಗಡೆ ಮಾಡಿತ್ತು. ಬುಧವಾರ ಟಿಕೆಟ್ ಮಾರಾಟ ಪ್ರಾರಂಭವಾಯಿತು ಅಂದು ಸಂಜೆಯೊಳಗೆ ಟಿಕೆಟ್ ಗಳು ಖಾಲಿಯಾಗಿವೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಟಿಕೆಟ್ ಗಳಿ ಪ್ರವಾಸಿಗರು ಕೈಗೆ ತಲುಪಿವೆ. ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಅಧಿಕಾರಿಗಳು ಟಿಕೆಟ್ ಪಡೆಯವಲ್ಲಿ ಹಸ್ತಕ್ಷೇಪ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುಮಾರು 200 ಟಿಕೆಟ್ ಗಳನ್ನು ಆನ್ ಲೈನ್ ಮೂಲಕ ಮಾರಾಟ ಮಾಡಲಾಗಿದೆ. ಪಂಜಿನ ಕವಾಯಿತು ವೀಕ್ಷಿಸಲು 7000 ಟಿಕೆಟ್ ಗಳನ್ನು ಮುದ್ರಿಸಲಾಗಿತ್ತು ಅವುಗಳ ಮುಖಬೆಲೆ 200ರೂ. ಆಗಿತ್ತು. ಅವುಗಳ ಕೂಡಾ ಸೋಲ್ಡ್ ಔಟ್ ಆಗಿದೆ.
ಜಂಬೂ ಸವಾರಿ ನೋಡಲು ಭಾನುವಾರ ಮತ್ತು ಸೋಮವಾರ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಟಿಕೆಟ್ ಲಭ್ಯವಿಲ್ಲ. ಆದ್ದರಿಂದ ಜಂಬೂ ಸವಾರಿ ತೆರಳುವ ಮಾರ್ಗದಲ್ಲಿ ನಿಂತು ದಸರಾ ಸಂಭ್ರಮ ಕಣ್ತುಂಬಿಕೊಳ್ಳಬಹುದು.
ಪ್ರತಿವರ್ಷ ಜಂಬೂ ಸವಾರಿಗೆ ಎರಡು ದಿನಗಳಿರುವಾಗ ಜಂಬೂ ಸವಾರಿ ಮತ್ತು ಪಂಜಿನ ಕವಾಯಿತಿನ ಟಿಕೆಟ್ ಗಳನ್ನು ಮಾರಾಟಕ್ಕೆ ಇಡಲಾಗುತ್ತಿತ್ತು. ಈ ಬಾರಿ ಮುಂಚಿತವಾಗಿ ಟಿಕೆಟ್ ಮಾರಾಟ ಮಾಡಲಾಗಿದೆ.
ಪ್ರತಿವರ್ಷ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತ್ರ ಟಿಕೆಟ್ ಮಾರಾಟ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಮೈಸೂರು ಮಹಾನಗರ ಪಾಲಿಕೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಟಿಕೆಟ್ ಮಾರಾಟ ಮಾಡಲಾಗಿದೆ. ಸಾರ್ವಜನಿಕರಿಗೆ ಈ ಕುರಿತು ಸರಿಯಾದ ಮಾಹಿತಿ ನೀಡಿಲ್ಲ ಎಂಬ ಆರೋಪವು ಇದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications