ಯುವಕನನ್ನು ಬಲಿ ಪಡೆದಿದ್ದ ಹುಲಿ ಸೆರೆ: ನಿಟ್ಟುಸಿರು ಬಿಟ್ಟ ಸ್ಥಳೀಯರು
ಎಚ್.ಡಿ ಕೋಟೆಯ ಬಳ್ಳೆ ಹಾಡಿಯ ಯುವಕನನ್ನು ಬಲಿ ಪಡೆದು ಸ್ಥಳೀಯರಲ್ಲಿ ಆತಂಕ ಹುಟ್ಟು ಹಾಕಿದ್ದ ಹುಲಿಯನ್ನು ಎಚ್.ಡಿ ಕೋಟೆಯ ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಮೈಸೂರು, ಫೆಬ್ರವರಿ 15: ಬಳ್ಳೆ ಹಾಡಿಯ ಯುವಕನನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಸೆರೆ ಹಿಡಿದಿದ್ದಾರೆ.
ಡಿ.ಬಿ.ಕುಪ್ಪೆ ವನ್ಯ ಜೀವಿ ವಲಯದ ವಲಯ ಅರಣ್ಯಾಧಿಕಾರಿ ವಸತಿ ಗೃಹದ ಹಿಂದೆ ಸೌದೆ ತರಲು ಹೋಗಿದ್ದ ಯುವಕನನ್ನು ಹುಲಿ ಕೊಂದು ಹಾಕಿತ್ತು. ನಂತರದಲ್ಲಿ 5ಕ್ಕೂ ಹೆಚ್ಚು ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಹುಲಿ ಸೆರೆಗೆ ಕೂಂಬಿಂಗ್ ನಡೆಸುತ್ತಿತ್ತು. ಸತತ ಕಾರ್ಯಾಚರಣೆಯ ನಂತರ ಕೊನೆಗೂ ಸುಮಾರು 9 ವರ್ಷದ ಹೆಣ್ಣು ಹುಲಿಯನ್ನು ಸೆರೆ ಹಿಡಿಯಲಾಗಿದೆ.
ಈ ಹುಲಿ ಕಬಿನಿ ಹಿನ್ನೀರಿನ ಬಳಿ ಹೆಚ್ಚು ಕಂಡು ಬರುತ್ತಿದ್ದರಿಂದ ಪ್ರವಾಸಿಗರು ಇದಕ್ಕೆ 'ಕಬಿನಿ ಹಿನ್ನೀರಿನ ಫೀಮೇಲ್' ಎಂದು ನಾಮಕರಣ ಮಾಡಿದ್ದರು. ಕೆಲವು ದಿನಗಳ ಹಿಂದೆ ಜಿಂಕೆ ಮತ್ತು ಜಿಂಕೆ ಮರಿಯನ್ನು ಬೇಟೆಯಾಡಿ ಬಾಯಿಯಲ್ಲಿ ಕಚ್ಚಿಕೊಂಡು ಬರುತ್ತಿದ್ದ ದೃಶ್ಯ ಪ್ರವಾಸಿಗರ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿತ್ತು.

ಯುವಕನನ್ನು ಬಲಿ ಪಡೆದ ಹುಲಿಯನ್ನು ಸದ್ಯ ಸೆರೆ ಹಿಡಿಯಲಾಗಿದ್ದು, ಹುಲಿಯ ಬಲ ಮುಂಗಾಲು, ಪಾದ ಮತ್ತು ಭುಜದಲ್ಲಿ ತೀವ್ರ ಗಾಯಗಳಾಗಿವೆ. ನಡೆದಾಡಲು ಶಕ್ತಿ ಇಲ್ಲ. ಶಸ ಚಿಕಿತ್ಸೆ ಅವಶ್ಯಕತೆ ಇದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಹುಲಿಗೆ 4 ಮರಿಗಳಿದ್ದು, 10ರಿಂದ 12 ತಿಂಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.
ತಾಯಿ ಇಲ್ಲದಿರುವುದರಿಂದ ಕೆಲವು ದಿನಗಳ ಮಟ್ಟಿಗೆ ಅವುಗಳಿಗೆ ಸ್ವಲ್ಪ ತೊಂದರೆಯಾಗಬಹುದು. ಆದರೆ, ಅವು ಬದುಕಿ ಉಳಿಯುವ ಎಲ್ಲಾ ಲಕ್ಷಣಗಳು ಇವೆ. ಮರಿಗಳ ಚಲನವಲನದ ಮೇಲೆ ನಿಗಾವಹಿಸಲು ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಮತ್ತು ಅರಣ್ಯ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ ತಿಳಿಸಿದ್ದಾರೆ.

ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಡಿ.ಬಿ.ಕುಪ್ಪೆ ವನ್ಯ ಜೀವಿ ವಲಯದ ಮಾಸ್ತಿಗುಡಿ ಗಸ್ತಿನ, ಕಬಿನಿ ಹಿನ್ನೀರು ಬಳಿ ಕಾಣಿಸುತ್ತಿದ್ದ ಹುಲಿ ಮೈಮೇಲೆ ಗಾಯವಾಗಿದ್ದು, ಕುಂಟುತ್ತ ನಡೆಯುತ್ತಿದ್ದುದನ್ನು ಇಲಾಖೆ ಸಿಬ್ಬಂದಿ ಮತ್ತು ಪ್ರವಾಸಿಗರು ಗಮನಿಸಿದ್ದರು. ಬೇಟೆಯಾಡಲು ಶಕ್ತಿ ಇಲ್ಲದ ಹುಲಿ, ಮುಂದಿನ ದಿನಗಳಲ್ಲಿ ಜನ ಜಾನುವಾರುಗಳ ಮೇಲೆ ದಾಳಿ ನಡೆಸಬಹುದು ಎಂಬ ಅನುಮಾನದ ಮೇರೆಗೆ ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ನಡೆಸಲಾಗಿತ್ತು.
ಬಳ್ಳೆ ಅರಣ್ಯ ಇಲಾಖೆ ಸನಿಹದಲ್ಲಿರುವ ಮಾಸ್ತಿ ಗುಡಿ ದೇವಸ್ಥಾನದ ಬಳಿ ಮಂಗಳವಾರ ಕೂಂಬಿಂಗ್ ಮಾಡುತ್ತಿದ್ದಾಗ ಹುಲಿ ಕಾಣಿಸಿತು. ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ವೈದ್ಯರ ತಂಡ ಅರವಳಿಕೆ ನೀಡಿ ಸೆರೆ ಹಿಡಿದಿದ್ದಾರೆ. ಬಳಿಕ ಮೈಸೂರಿನ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಿದ್ದಾರೆ.
ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಡಾ.ರಮೇಶ್, ಡಾ.ಮದನ್, ಅರಣ್ಯಾಧಿಕಾರಿಗಳಾದ ಸಿದ್ದರಾಜು (ಅಂತರಸಂತೆ), ಮಧು(ಡಿ.ಬಿ.ಕುಪ್ಪೆ), ಹರ್ಷಿತ್ (ಮೇಟಿಕುಪ್ಪೆ) ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications